ಬಿರುಗಾಳಿಗೆ ನೆಲಕಚ್ಚಿದ ಕೊಯ್ಲು ಹಂತದ ದ್ರಾಕ್ಷಿ,ಬಾಳೆ: ಕಂಗಾಲಾದ ತೋಟಗಾರಿಕೆ ಬೆಳೆಗಾರ ರೈತರು


Team Udayavani, Mar 31, 2024, 11:46 AM IST

7-

ವಿಜಯಪುರ: ಶನಿವಾರ ರಾತ್ರಿ ಅನಿರೀಕ್ಷಿತವಾಗಿ ಬೀಸಿದ ಬಿರುಗಾಳಿಗೆ ರೈತರು ಬೆಳೆದಿದ್ದ ದ್ರಾಕ್ಷಿ, ಬಾಳೆ ಸೇರಿದಂತೆ  ಕೊಯ್ಲು ಹಂತದಲ್ಲಿದ್ದ ವಿವಿಧ ತೋಟಗಾರಿಕೆ ಬೆಳೆಗಳು ನೆಲಕಚ್ಚಿ ಲಕ್ಷಾಂತರ ರೂ. ನಷ್ಟವಾಗಿದ್ದು, ರೈತರು ಕಂಗಾಲಾಗಿದ್ದಾರೆ.

ಶನಿವಾರ ರಾತ್ರಿ ಏಕಾಏಕಿ ಬೀಸಿದ ಬಿರುಗಾಳಿಗೆ ಬೊಮ್ಮನಹಳ್ಳಿ ಗ್ರಾಮದಲ್ಲಿ ಬಾಳೆ, ಹಲಗುಣಕಿ ಗ್ರಾಮದಲ್ಲಿ ದ್ರಾಕ್ಷಿ ಬೆಳೆ ಹಾನಿಯಾಗಿರುವ ವರದಿಗಳು ಬಂದಿವೆ.

ವಿಜಯಪುರ ತಾಲೂಕಿನ ಬೊಮ್ಮನಳ್ಳಿ ಗ್ರಾಮದಲ್ಲಿ ರೈತರು ಬೆಳೆದ ಬಾಳೆ ಸಂಪೂರ್ಣ ನೆಲಕಚ್ಚಿ, ಹಾನಿಯಾಗಿದೆ. ಬೊಮ್ಮನಹಳ್ಳಿ ಗ್ರಾಮದ ರೈತ ಮುರುಗೆಪ್ಪ ಚೌಗುಲಾ ಎಂಬುವರಿಗೆ ಸೇರಿದ ಒಂದೂವರೆ ಎಕರೆ ತೋಟದಲ್ಲಿ ಬೆಳೆದಿದ್ದ ಬಾಳೆ ಕೊಯ್ಲಿನ ಹಂತದಲ್ಲಿತ್ತು.

ಬಿರುಗಾಳಿ ಬೀಸಿದ ಪರಿಣಾಮ ಬೆಳೆದು ನಿಂತಿದ್ದ ಕೊಯ್ಲು ಹಂತದಲ್ಲಿ ಇದ್ದ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ಧರೆಗೆ ಉರುಗಳಿವೆ. ಇದರಿಂದ ರೈತ ಮುರಿಗೆಪ್ಪ ಅವರಿಗೆ ಸುಮಾರು 2 ಲಕ್ಷ ರೂ. ನಷ್ಟವಾಗಿದೆ ಎಂದು ಬಾಧಿತ ರೈತ ಅಳಲು ತೋಡಕೊಂಡಿದ್ದಾರೆ.

ಬಿರುಗಾಳಿ ಹೊಡೆತಕ್ಕೆ ತೋಟದಲ್ಲಿ ಬೆಳೆದಿದ್ದ ಬಾಳೆ ಮಾತ್ರವಲ್ಲದೆ ವಿದ್ಯುತ್ ಕಂಬಗಳೇ ಮುರಿದು ಬಿದ್ದಿರುವುದು ಬಿರುಗಾಳಿ ಅಬ್ಬರಕ್ಕೆ ಸಾಕ್ಷಿಯಾಗಿವೆ.

ಕೊಯ್ಲಿನ ಹಂತದಲ್ಲಿ ಬಾಳೆ ಬೆಳೆ ನಷ್ವಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಬಾಳೆ ಬೆಳೆಯಲು ಲಕ್ಷಾಂತರ ರೂ. ವೆಚ್ಚ ಮಾಡಿದ್ದೇನೆ. ಇದೀಗ ಅನಿರೀಕ್ಷಿತ ಬಿರುಗಾಳಿ ಹೊಡೆತಕ್ಕೆ ಬೆಳೆ ಹಾನಿಯಾಗಿದ್ದು, ಸರ್ಕಾರ ಪರಿಹಾರ ನೀಡುವ ಮೂಲಕ ನನ್ನ ನೆರವಿಗೆ ಬರಬೇಕು ಎಂದು ಬಾಧಿತ ರೈತ ಮುರಿಗೆಪ್ಪ ಚೌಗುಲಾ ಆಗ್ರಹಿಸಿದ್ದಾರೆ‌.

ಮತ್ತೊಂದೆಡೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ ಗ್ರಾಮದಲ್ಲಿ ವಿಶ್ಚನಾಥ ಪಾಟೀಲ ಎಂಬರಿಗೆ ಸೇರಿದ ದ್ರಾಕ್ಷಿ ತೋಟಕ್ಕೆ ಹಾನಿಯಾಗಿದೆ.

ಸಿಡಿಲು, ಗುಡುಗು ಸಹಿತ ಅಪ್ಪಳಿಸಿದ ಬಿರುಗಾಳಿಯ ಹೊಡೆತಕ್ಕೆ ವಿದ್ಯುತ್ ಕಂಬಗಳು ಮುರಿದುಕೊಂಡು ದ್ರಾಕ್ಷಿ ಬೆಳೆಯ ಸಾಲುಗಳ ಮರಗಳ ಬಿದ್ದಿವೆ. ಪರಿಣಾಮ‌ ದ್ರಾಕ್ಷಿ ಸಾಲುಗಳು ನೆಲಕಚ್ಚಿದ್ದು, ಬಹು ವಾರ್ಷಿಕ ಬೆಳೆಯಾದ ದ್ರಾಕ್ಷಿ ನಾಶದಿಂದ ಭಾರಿ ಪ್ರಮಾಣದಲ್ಲಿ ಹಾನಿಯಾಗಿದ್ದು, ತುರ್ತಾಗಿ ಪರಿಹಾರ ನೀಡುವಂತೆ ದ್ರಾಕ್ಷಿ ಬೆಳೆ ಹಾನಿಯಿಂದ ಬಾಧಿತ ದ್ರಾಕ್ಷಿ ಬೆಳೆಗಾರ ವಿಶ್ವನಾಥ ಪಾಟೀಲ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.