ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ


Team Udayavani, Jun 17, 2024, 12:14 AM IST

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ
ವಿಜಯಪುರ: ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿಗೆ ಸೇಡಿನ ಕ್ರಮವಲ್ಲ. ಈ ಹಿಂದೆ ಎಚ್‌.ಡಿ. ಕುಮಾರಸ್ವಾಮಿ ಅಧಿಕಾರದಲ್ಲಿದ್ದಾಗಲೂ ತೈಲ ದರ ಏರಿಕೆ ಮಾಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ಚಡಚಣ ತಾಲೂಕಿನ ಇಂಚಗೇರಿಯಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋಲಿನ ಕಾರಣಕ್ಕೆ ಇಂಧನ ದರ ಏರಿಕೆ ಮಾಡಿದ್ದಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಮಾಡಿರುವ ಆರೋಪದಲ್ಲಿ ಹುರುಳಿಲ್ಲ ಎಂದರು.

ವಿವಿಧ ರಾಜ್ಯಗಳ ದರ ಹೀಗಿದೆ ಎಂದರು
ಕರ್ನಾಟಕದಲ್ಲಿ ಪೆಟ್ರೋಲ್‌ ದರ 102.86 ರೂ. ಇದ್ದು, ತಮಿಳುನಾಡು ರಾಜ್ಯಕ್ಕೆ ಸಮನಾಗಿದೆ. ಆದರೆ ನೆರೆಯ ಕೇರಳದ ಕಾಸರಗೋಡಿನಲ್ಲಿ 106.06 ರೂ. ಇದೆ. ಆಂಧ್ರದೇಶದಲ್ಲಿ 109 ರೂ. ಹಾಗೂ ತೆಲಂಗಾಣದ ಹೈದ್ರಾಬಾದ್‌ನಲ್ಲಿ ಇನ್ನೂ ಹೆಚ್ಚಿದೆ. ಮಹಾರಾಷ್ಟ್ರದಲ್ಲಿ 104 ರೂ., ರಾಜಸ್ಥಾನದಲ್ಲಿ 104.86 ರೂ. ಹಾಗೂ ಮಧ್ಯಪ್ರದೇಶದಲ್ಲಿ 106.47 ರೂ. ಇದೆ. ರಾಷ್ಟ್ರೀಯ ದರಕ್ಕೆ ಹೊಂದಾಣಿಕೆ ಮಾಡಲು ತೈಲ ದರ ಏರಿಕೆ ಮಾಡಿದ್ದೇವೆ. 2021ರಲ್ಲಿ ಪೆಟ್ರೋಲ್‌ ದರದಲ್ಲಿ ಶೇ. 35 ರೂ. ತೆರಿಗೆ ಇತ್ತು ಡೀಸೆಲ್‌ ಶೇ. 24 ತೆರಿಗೆ ಇತ್ತು ಎಂದು ವಿವರಿಸಿದರು.
ಗ್ಯಾರಂಟಿ ನಿಲ್ಲೋದಿಲ್ಲ
ವಿಪಕ್ಷ ನಾಯಕ ಅಶೋಕ ಅವರ ಸೋಲಿಗೆ ಸೇಡು ಹೇಳಿಕೆ ಅರ್ಥವಿಲ್ಲದ್ದು, 2019ರ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 1 ಸ್ಥಾನ ಗೆದ್ದಿದ್ದ ಕಾಂಗ್ರೆಸ್‌, ಈ ಬಾರಿ 9 ಸ್ಥಾನ ಗೆದ್ದಿದೆ. ಬಿಜೆಪಿ 25ರಿಂದ 17ಕ್ಕೆ ಕುಸಿದಿದೆ ಎಂದು ತಿರುಗೇಟು ನೀಡಿದರು. ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದ ಸಿದ್ಧರಾಮಯ್ಯ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿರುವುದು ಚುನಾವಣೆಗಾಗಿ ಅಲ್ಲ, ಜನರಿಗಾಗಿ ಎಂದು ವಿವರಿಸಿದರು.

ಅನುದಾನದಲ್ಲಿ ತಾರತಮ್ಯವಿಲ್ಲ
ಅನುದಾನ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಸ್ವಪಕ್ಷೀಯ ಮುದ್ದೇಬಿಹಾಳ ಶಾಸಕ ಸಿ.ಎಸ್‌. ನಾಡಗೌಡ ಹಾಗೂ ಬೀಳಗಿ ಶಾಸಕ ಜಿ.ಟಿ. ಪಾಟೀಲ ಆರೋಪದ ಕುರಿತು ಪ್ರತಿಕ್ರಯಿಸಿದ ಅವರು, ಯಾವ ಸಂದರ್ಭದಲ್ಲಿ ಹೀಗೆ ಹೇಳಿದ್ದಾರೋ ನೋಡುತ್ತೇನೆ. ಶಾಸಕರಿಗೆ ಎಲ್ಲ ಅನುದಾನ ಕೊಟ್ಟಿದ್ದೇವೆ ಎಂದರು.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.