Indi; ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಿಬ್ಬರ ನಡುವೆ ಜಟಾಪಟಿ


Team Udayavani, Aug 19, 2024, 3:03 PM IST

Indi; ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಿಬ್ಬರ ನಡುವೆ ಜಟಾಪಟಿ

ಇಂಡಿ: ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕರಿಬ್ಬರ ನಡುವೆ ಪೈಪೋಟಿ ನಡೆದಿದ್ದು, ಓರ್ವ ತಾಲೂಕು ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ತಾಲೂಕು ಪಂಚಾಯತ್ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಘಟನೆ ಸೋಮವಾರ ನಡೆದಿದೆ.

ಪ್ರತಿಭಟನೆ ನಡೆಸುತ್ತಿರುವ ಇಓ ಗುರುಶಾಂತಪ್ಪ ಬೆಳ್ಳುಂಡಗಿ ಅವರು ಜುಲೈ 29 ರಂದು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕು ಪಂಚಾಯತಿಯಿಂದ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಪಂಚಾಯತ್‌ ಗೆ ವರ್ಗಾವಣೆಗೊಂಡು ಅಧಿಕಾರ ಸ್ವೀಕರಿಸಿದ್ದರು.

ಮತ್ತೆ ಸರ್ಕಾರ ಅವರನ್ನು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಾ ಪಂಚಾಯತ್ ಕಾರ್ಯಾಲಯಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ, ನಾನು ಅಧಿಕಾರ ಸ್ವೀಕರಿಸಿ ಕೇವಲ ಒಂದು ವಾರ ಕಳೆದಿದೆ. ಆದರೆ ಒಂದೇ ವಾರದಲ್ಲಿ ಮತ್ತೆ ವರ್ಗಾವಣೆ ಹೇಗೆ ಸಾಧ್ಯ? ಜುಲೈ 29ರ ವರೆಗೆ ಸರ್ಕಾರ ವರ್ಗಾವಣೆಗೆ ದಿನಾಂಕ ನಿಗದಿಗೊಳಿಸಿತ್ತು, ಆದರೂ ಸಹ ಜುಲೈ 31 ರಂದು ಆದೇಶ ಹೊರಡಿಸಿ ಇಂಡಿ ತಾಲೂಕ ಪಂಚಾಯತ್ ಕಚೇರಿಗೆ ಬಾಬುರಾವ್ ರಾಠೋಡ ಅವರನ್ನು ಹೆಚ್ಚುರಿಯಾಗಿ ನಿಯುಕ್ತಿಗೊಳಿಸಿರುವುದು ಎಷ್ಟು ಸರಿ? ಎಂದು ಗುರುಶಾಂತಪ್ಪ ಬೆಳ್ಳುಂಡಗಿ ಪ್ರಶ್ನಿಸಿದ್ದಾರೆ.

ಈ ಕುರಿತು ಕಚೇರಿ ಮುಂದೆ ಧರಣಿ ನಡೆಸುತ್ತಿರುವ ಅವರು ಸರ್ಕಾರ ನನ್ನನ್ನು ಏಕೆ ಕಡೆಗಣಿಸುತ್ತಿದೆ? ನಾನೊಬ್ಬ ನಿವೃತ್ತ ಸೈನಿಕನಾಗಿದ್ದರೂ ಸಹ ನನಗೆ ಯಾವುದೇ ಗೌರವ ನೀಡದೆ ಏಕಾಏಕಿ ಬೇರೆ ಬೇರೆ ಕಡೆ ವರ್ಗಾವಣೆ ಮಾಡುತ್ತಿರುವುದು ಎಷ್ಟು ಸರಿ? ನಾನು ಧರಣಿ ಕುಳಿತ ಸ್ಥಳಕ್ಕೆ ಯಾರೂ ಬಂದಿಲ್ಲ, ನಾನು ಸತ್ತ ಮೇಲೆ ನನ್ನ ಮಕ್ಕಳಿಗೆ 5 ಲಕ್ಷ ಪರಿಹಾರ ಕೊಡಲು ಬರುತ್ತಾರೆಯೇ? ಆಗ ನನಗೆ ಬಂದು ಸಾಂತ್ವನ ಹೇಳಲು ಸಾಧ್ಯವೇ ಎಂದು ದುಃಖಭರಿತರಾಗಿ ಮಾಧ್ಯಮದವರ ಮುಂದೆ ಅಳಲು ತೋಡಿಕೊಂಡಿದ್ದಾರೆ.

ಈ ಕುರಿತು ಅಧಿಕಾರ ವಹಿಸಿಕೊಂಡಿರುವ ತಾಲೂಕ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಾಬುರಾವ್ ರಾಠೋಡ ಅವರನ್ನು ಪ್ರಶ್ನಿಸಲಾಗಿ ಸರ್ಕಾರದ ಆದೇಶದಂತೆ ನಾನು ಇಂಡಿ ತಾಲೂಕ ಪಂಚಾಯತಿಗೆ ಬಂದು ಅಧಿಕಾರ ಸ್ವೀಕರಿಸಿದ್ದೇನೆ. ನಾನು ಈಗಾಗಲೇ ವಿಜಯಪುರ ತಾಲೂಕಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹೆಚ್ಚುರಿಯಾಗಿ ಇಂಡಿಯಯನ್ನು ನನಗೆ ನೀಡಿದ್ದಾರೆ, ಆದೇಶದ ಪ್ರಕಾರ ಬಂದು ಅಧಿಕಾರ ಸ್ವೀಕರಿಸಿ ಕಾರ್ಯ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ಶಾಸಕರಿಗೆ ಕೇಳದೆ ಅಧಿಕಾರ ಸ್ವೀಕರಿಸಿಕೊಂಡ ಹಿನ್ನೆಲೆಯಲ್ಲಿ ಗುರುಶಾಂತಪ್ಪ ಬೆಳ್ಳುಂಡಗಿ ಅವರನ್ನು ಮತ್ತೊಂದೆಡೆ ವರ್ಗಾವಣೆ ಮಾಡಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಅದಕ್ಕೆ ಪೂರಕ ಎಂಬಂತೆ ಶಾಸಕರು ಸರ್ಕಾರದ ಒಂದು ಭಾಗವಾಗಿದ್ದು ಸರ್ಕಾರವೇ ಆದೇಶ ಹೊರಡಿಸಿದೆ. ಹೀಗಾಗಿ ಅವರು ಹಸ್ತಕ್ಷೇಪ ಮಾಡಬಾರದಿತ್ತು ಎಂದು ಪ್ರತಿಕ್ರಿಸಿದ್ದು ಈ ವರ್ಗಾವಣೆಯಲ್ಲಿ ಶಾಸಕರ ಪಾತ್ರವಿದೆಯೇ ಎಂಬ ಶಂಕೆ ಸಹಜವಾಗಿಯೇ ವ್ಯಕ್ತವಾಗುತ್ತಿದೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.