![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 30, 2021, 3:28 PM IST
ಆಲಮಟ್ಟಿ: ಸೂರ್ಯ, ಚಂದ್ರ ಕೊಟ್ಟ ಬೆಳಕು ಭೂ ಮಂಡಲಕ್ಕಾದರೆ ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಹರಿಸಿದ ಬೆಳಕು ನಮ್ಮೆಲ್ಲರ ಬಾಳಿಗೆ ದಾರಿ ದೀಪವಾಗಿದೆ ಎಂದು ಬಸವನಬಾಗೇವಾಡಿ ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ ಹೇಳಿದರು.
ಸ್ಥಳೀಯ ರಾವ್ ಬಹಾದ್ದೂರ್ ಫ.ಗು. ಹಳಕಟ್ಟಿ ಪ್ರೌಢಶಾಲೆಯಲ್ಲಿ ನಡೆದ ಭಾರತ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂವಿಧಾನ ನಮಗೆ ದಿವ್ಯ ಜ್ಞಾನ ಪ್ರಸರಣದ ಶಕ್ತಿ ಆಗಿದೆ. ಅಲ್ಲದೇ ಜನತಂತ್ರ ವ್ಯವಸ್ಥೆ ಗಟ್ಟಿಯಾಗಿರಿಸಿಕೊಳ್ಳಲು ಸಹಕಾರಿಯಾಗಿದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ಇತಿಹಾಸದ ಬಗ್ಗೆ ಅರಿತುಕೊಂಡು ಅಂಬೇಡ್ಕರ್, ಮಹಾತ್ಮ ಗಾಂಧಿ, ಗೌತಮ ಬುದ್ಧ, ಕಾಯಕಯೋಗಿ ಬಸವಣ್ಣ, ಅಕ್ಕ ಮಹಾದೇವಿ, ಸರೋಜಿನಿ ನಾಯ್ಡು, ಕಲ್ಪನಾ ಚಾವ್ಲಾ ಅವರ ವಿಚಾರಧಾರೆಗಳನ್ನು ಹೊಂದಬೇಕು. ಭಾರತದಲ್ಲಿ ಸುಮಾರು 5682 ಭಾಷೆಗಳಿವೆ. ಇದರಲ್ಲಿ ಹಲವು ಭಾಷೆಗಳಿಗೆ ಲಿಪಿಗಳಿಲ್ಲ. ಸುಮಾರು ಬಗೆ ಬಗೆ ಬುಡಕಟ್ಟು ಜನಾಂಗಗಳಿವೆ. ಈ ಜನರ ಕಲ್ಯಾಣಕ್ಕಾಗಿ ಸಂವಿಧಾನದಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಿದರು.
ಉಪನ್ಯಾಸಕ ಬಿ.ಟಿ.ಕರದಾನಿ ಮಾತನಾಡಿದರು. ಶಿಕ್ಷಕ ಎನ್.ಎಸ್. ಬಿರಾದಾರ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ವಿ.ಸಿ. ಜುಳಜುಳಿ, ಜಿ.ಎಸ್. ಗಣಿ, ಆರ್.ಎಂ. ರಾಠೊಡ, ಎಲ್.ಆರ್. ಸಿಂಧೆ, ಅನಿತಾ ರಾಠೊಡ, ಶಾಂತು ತಡಸಿ, ಜಿ.ಆರ್. ಜಾಧವ ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.