Vijayapura: ಉತ್ತರ ಕರ್ನಾಟಕ ಗುಳೆ ತಡೆಯಲು ಕೈಗಾರಿಕೀಕರಣ ಅಗತ್ಯ: ದರ್ಶನಾಪುರ
Team Udayavani, Sep 6, 2023, 2:56 PM IST
ವಿಜಯಪುರ: ದೊಡ್ಡವರೆಂದು ಕೋಟಿ ಕೋಟಿ ರೂ. ಸಾಲ ನೀಡಿ ಪರಿತಪಿಸುತ್ತಿರುವ ಬ್ಯಾಂಕ್ ಗಳು ಸ್ಥಳೀಯ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸಾಲ ನೀಡಲು ಆದ್ಯತೆ ನೀಡಬೇಕು. ಇದರಿಂದ ಉತ್ತರ ಕರ್ನಾಟಕ ಭಾಗದಲ್ಲಿ ಗುಳೆ ತಡೆಯುವಲ್ಲಿ ಸಹಕಾರಿ ಆಗಲಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಬ್ಯಾಂಕರ್ ಗಳಿಗೆ ಸಲಹೆ ನೀಡಿದರು.
ಬುಧವಾರ ನಗರದಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಿಂದ ಕೈಗಾರಿಕೆ, ವಾಣಿಜ್ಯ ಇಲಾಖೆ ಹಾಗೂ ಸಿಡ್ಬಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿಗೆ ಸವಲತ್ತು, ಹಣಕಾಸಿನ ನೆರವು ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಣ್ಣ ಕೈಗಾರಿಕಾ ಅಭಿವೃದ್ಧಿಗೆ
ಶೈಕ್ಷಣಿಕವಾಗಿ ಗುಣಮಟ್ಟದ ಶಿಕ್ಷಣ ಹಾಗೂ ಸಣ್ಣ ಕೈಗಾರಿಕೆಗಳ ಮೂಲಕ ಗುಳೆ ಹೋಗುವುದನ್ನು ತಡೆಯಲು ಸಾಧ್ಯವಿದೆ. ಹೀಗಾಗಿ ತೊಡಕುಗಳು ಇಲ್ಲದಂತೆ ಸಣ್ಣ ಹಾಗೂ ಬೃಹತ್ ಕೈಗಾರಿಕೆಗಳು ಈ ಪ್ರದೇಶಕ್ಕೆ ಬರುವ ಅಗತ್ಯವಿದೆ ಎಂದರು.
ಈ ಪ್ರದೇಶದಲ್ಲಿ ನೀರಾವರಿ ಸೌಲಭ್ಯ ಹೆಚ್ಚುತ್ತಿದ್ದು, ಕೃಷಿ ಉತ್ಪನ್ನ ಆಧಾರಿತ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚಿನ ಆದ್ಯತೆ ನೀಡುವುದಾಗಿ ಭರವಸೆ ನೀಡಿದರು.
ಭಾರತೀಯ ಜಿಡಿಪಿ ಅಭ್ಯುದಯಕ್ಕೆ ಸಣ್ಣ ಕೈಗಾರಿಕೆಗಳ ಕೊಡುಗೆ ಅಪಾರವಾಗಿದೆ. ಹೀಗಾಗಿ ಹೆಚ್ಚು ಉದ್ಯೋಗ ಸೃಷ್ಟಿಗಾಗಿ ವಿಶೇಷ ಕೊಡುಗೆ ನೀಡುತ್ತಿದೆ ಎಂದು ವಿವರಿಸಿದರು.
ಕಾಸಿಯಾ ಜಿಲ್ಲಾಧ್ಯಕ್ಷ ಎಸ್.ವಿ.ಪಾಟೀಲ ಮಾತನಾಡಿ, ವಿಜಯಪುರ ಸಣ್ಣ ಕೈಗಾರಿಕಾ ಪ್ರದೇಶ ಅವ್ಯವಸ್ಥೆ ಆಗರ ವಾಗಿದ್ದು, ಬೆಳಗಾವಿ ಯಲ್ಲಿರುವ ಅಧಿಕಾರಿ ಸಮಸ್ಯೆ ನಿವಾರಣಗೆ ಸ್ಪಂದಿಸುತ್ತಿಲ್ಲ ಎಂದು ದೂರಿದರು.
ಹೊಸ ಉದ್ಯಮಿದಾರರಿಗೆ ಪ್ರೋತ್ಸಾಹ ಸೀಗುತ್ತಿಲ್ಲ. ಸಣ್ಣ ಕೈಗಾರಿಕಾ ಸಾಲ ನೀಡಿಕೆ ನಿಯಮ ಸಡಿಲಿಕೆ, ಬಡ್ಡಿದರ ಕಡಿಮೆ ಮಾಡುವುದು, ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸಾಲ ನೀಡಿಕೆಗೆ ಗುರಿ ನೀಡಬೇಕು. ಕೃಷಿ ಆಧಾರಿತ ಸಣ್ಣ ಉದ್ಯಮ ಆರಂಭಿಸಲು ಪ್ರತಿ ತಾಲೂಕಿಗೆ ಕನಿಷ್ಠ 50-100 ಎಕರೆ ಸಣ್ಣ ಕೈಗಾರಿಕಾ ವಸಾಹತು ಸ್ಥಾಪಿಸಬೇಕು ಎಂದು ಆಗ್ರಹಿಸಿದರು.
ಉತ್ತರ ಕರ್ನಾಟಕ ಭಾಗದಲ್ಲಿ ಈ ಹಿಂದೆ ಇದ್ದ ಎಣ್ಣೆ ಉತ್ಪಾದಕ ಸಣ್ಣ ಕೈಗಾರಿಕೆಗಳು ಮುಚ್ಚಲು ಪಾಮ್ ಎಣ್ಣೆಯನ್ನು ವಿದೇಶದಿಂದ ಆಮದು ಮಾಡಿಕೊಳ್ಳುವ ನೀತಿಯಿಂದ ಮುಚ್ಚಲು ಕಾರಣವಾಗಿದೆ ಎಂದು ಸಮಸ್ಯೆ ನಿವೇದಿಸಿದರು.
ಹೀಗಾಗಿ ಕೈಗಾರಿಕಾ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇದಕ್ಕಾಗಿ ವಿಜಯಪುರ ಜಿಲ್ಲೆಯಲ್ಲಿ ಐದಾರು ಸಾವಿರ ಎಕರೆ ಜಮೀನು ಲಭ್ಯವಿದ್ದು, ಸಣ್ಣ ಕೈಗಾರಿಕೆ ಸ್ಥಾಪನೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಸಣ್ಣ ಕೈಗಾರಿಕಾ ಸಚಿವ ಶರಣಬಸಪ್ಪ ದರ್ಶನಾಪುರ ಇಬ್ಬರೂ ಜಂಟಿಯಾಗಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುದರು.
ಕಾಸಿಯಾ ಅಧ್ಯಕ್ಷ ಸಿಎ ಶಶಿಧರ ಶೆಟ್ಟಿ, ಸಿಡ್ಬಿ ಪ್ರಾದೇಶಿಕ ಮುಖ್ಯಸ್ಥ ಸಾತ್ಯಕಿ ರಸ್ತೋಗಿ, ಸಿಡ್ಬಿ ಬೆಂಗಳೂರು ಪ್ರಾದೇಶಿಕ ಕಛೇರಿ ಉಪ ಪ್ರಧಾನ ವ್ಯವಸ್ಥಾಪಕ ಬಿ.ಉಲಗಿಯನ್, ಕೈಗಾರಿಕಾ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ,
ಗ್ರಾಮೀಣ ಜಂಟಿ ಕಾರ್ಯದರ್ಶಿ ಅರುಣ ಪಡಿಯಾರ, ಉಪಾಧ್ಯಕ್ಷ ಎಂ.ಜಿ.ರಾಜಗೋಪಾಲ ಇತರರು ಉಪಸ್ಥಿತರಿದ್ದರು.
ಕಾಸಿಯಾ ಪ್ರಧಾನ ಕಾರ್ಯದರ್ಶಿ ನಿರೂಪಿಸಿದರು.
ಇದನ್ನೂ ಓದಿ: Consumer Court: ತುಂಡಾಗಿದ್ದ ಕುರ್ಚಿ ಬದಲಿಸಿಕೊಡದ ಅಂಗಡಿಗೆ 15 ಸಾವಿರ ದಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Scam: ಹೈಕೋರ್ಟ್ ಅಭಿಯೋಜನೆಗೆ ತಿರಸ್ಕರಿಸಿ ತನಿಖೆಗಷ್ಟೇ ಅನುಮತಿ ಕೊಟ್ಟಿದೆ: ಸಿಎಂ
Hubli: ಸಿದ್ದರಾಮಯ್ಯ ಒಂದು ಕ್ಷಣವೂ ಸಿಎಂ ಸ್ಥಾನದಲ್ಲಿ ಮುಂದುವರೆಯದೆ ರಾಜೀನಾಮೆ ನೀಡಲಿ: ಜೋಶಿ
Belagavi: ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ
BJP ರಾಜ್ಯಪಾಲರನ್ನು ಅಸ್ತ್ರ ಮಾಡಿಕೊಂಡು ಮುಖ್ಯಮಂತ್ರಿ ವಿರುದ್ಧ ರಣತಂತ್ರ ರೂಪಿಸಿದೆ
ಈಗಾಗಲೇ ಸಿದ್ದರಾಮಯ್ಯ ರಾಜೀನಾಮೆ ನೀಡಿ ಹೊರ ಬಂದಿದ್ದರೆ ಅವರ ಗೌರವ ಸಹ ಹೆಚ್ಚಾಗುತ್ತಿತ್ತು:ಆರಗ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಮುಡಾ ಪ್ರಕರಣ;ಸಿ.ಎಂ.ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ
Malpe: ಆಗ ಕೆಸರು, ಈಗ ಧೂಳು!; ಅರ್ಧಕ್ಕೆ ನಿಂತ ಆದಿಉಡುಪಿ-ಮಲ್ಪೆ ರಸ್ತೆ ಕಾಮಗಾರಿಯ ಕಿರಿಕಿರಿ
Nail Polish: ಉಗುರುಗಳ ಅಂದ ಹೆಚ್ಚಿಸುವ ನೈಲ್ ಪಾಲಿಶ್ ನಲ್ಲಿದೆ ಕ್ಯಾನ್ಸರ್ ನ ರಾಸಾಯನಿಕ ಅಂಶ
Mangaluru: ಶ್ರೀಮತಿ ಶೆಟ್ಟಿ ಕೊಲೆ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ
Bellary: ದರ್ಶನ್ ನನ್ನು ಭೇಟಿಯಾದ ವಕೀಲ ಸುನೀಲ್; ಹಲವು ವಿಚಾರಗಳ ಬಗ್ಗೆ ಚರ್ಚೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.