![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 23, 2022, 4:25 PM IST
ವಿಜಯಪುರ: ಕ್ಷುಲ್ಲಕ ಕಾರಣಕ್ಕೆ ಅಪ್ರಾಪ್ತ ಬಾಲಕನೊಬ್ಬನನ್ನು ಬೆತ್ತಲೆ ಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿದ ಅಮಾನವೀಯ ಘಟನೆ ಬಸವಜನ್ಮಭೂಮಿ ಪರಿಸರದಲ್ಲಿ ಜರುಗಿದೆ. ಈ ಅಮಾನವೀಯ ಘಟನೆಯನ್ನು ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದು, ಇದೀಗ ವೈರಲ್ ಆಗಿದೆ.
ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ಜರುಗಿದೆ. ಅಮಾನವೀಯ ಶಿಕ್ಷೆಗೆ ಗುರಿಯಾದ ಬಾಲಕ ಗ್ರಾಮಸ್ಥರಲ್ಲಿ ಕೆಲವರನ್ನು ನಿಂದಿಸುತ್ತಿದ್ದ ಎನ್ನಲಾಗಿದೆ. ಎರಡು ದಿನಗಳ ಹಿಂದೆಯೂ ಈ ಬಾಲಕ ಗ್ರಾಮದ ಕೆಲವರನ್ನು ಅಶ್ಲೀಲವಾಗಿ ನಿಂದಿಸಿದ್ದ ಎನ್ನಲಾಗಿದೆ.
ಇದರಿಂದ ಕುಪಿತಗೊಂಡ ಗ್ರಾಮದ ಸ್ಥಳೀಯ ವ್ಯಕ್ತಿಯೊಬ್ಬ ಬಾಲಕನನ್ನು ಬೆತ್ತಲೆಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಥಳಿಸಿ ವಿಕೃತಿ ಮೆರೆದಿದ್ದಾನೆ. ಅವನ ಮರ್ಮಾಂಗಕ್ಕೆ ಕಟಿಂಗ್ ಪ್ಲೇಯರ್ ನಿಂದ ಕತ್ತರಿಸುವ ಬೆದರಿಕೆ ಹಾಕಲಾಗಿದೆ. ಇಷ್ಟಕ್ಕೆ ಸುಮ್ಮನಾಗದೇ ಬಾಲಕನ ಮೈಮೇಲೆ ಕಪ್ಪು ಬಣ್ಣ ಎರಚಿ ವಿಕೃತಿ ಮೆರೆಯುವ ಮೂಲಕ ಅಮಾನವೀಯ ಕೃತ್ಯ ಎಸಗಿದ್ದಾನೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.