ಧರಣಿ ಹಿಂಪಡೆದ ಅನ್ನದಾತರು

ಅಧಿಕಾರಿಗಳ ಭರವಸೆಗೆ ಒಪ್ಪಿದ ರೈತರುಬೇಡಿಕೆ ಈಡೇರದಿದ್ದರೆ ಮತ್ತೆ ಹೋರಾಟ

Team Udayavani, Mar 18, 2020, 4:12 PM IST

18-March-19

ಕೊಲ್ಹಾರ: ಮುಳವಾಡ ಏತ ನೀರಾವರಿ ಕಾಲುವೆಗಳಿಗೆ ನೀರು ಹರಿಸಬೇಕು ಮತ್ತು ಕೂಡಗಿ ಬಳಿಯ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ತ್ವರಿತಗತಿಯಲ್ಲಿ ಮುಗಿಸಲು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಕಳೆದ ಆರು ದಿನಗಳಿಂದ ನಡೆಸುತ್ತಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ಮಂಗಳವಾರ ತಾತ್ಕಾಲಿಕ ಹಿಂಪಡೆಯಲಾಗಿದೆ.

ತಾಲೂಕಿನ ಕೂಡಗಿ ಗ್ರಾಮದ ರೈಲ್ವೆ ಸ್ಟೇಷನ್‌ ಹತ್ತಿರ ಮುಳವಾಡ ಆಲಮಟ್ಟಿ ರಸ್ತೆ ಪಕ್ಕದಲ್ಲಿ ಧರಣಿ ಕುಳಿತಿದ್ದ ಸ್ಥಳಕ್ಕೆ ರೈಲ್ವೆ ಇಲಾಖೆ ಜನರಲ್‌ ಮ್ಯಾನೇಜರ್‌ ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಭೇಟಿ ಕೊಟ್ಟು ರೈತರೊಂದಿಗೆ ಚಚರ್ಚಿಸಿದರು.

ನಿಮ್ಮ ಬೇಡಿಕೆಗಳಾದ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿಗೆ ಅಡಚಣೆಯಾಗಿರುವ ಒಂದು ರೈಲ್ವೆ ಹಳಿಯನ್ನು ಸಸ್ಪೆಂಡ್‌ ಮಾಡಲು ಕ್ರಮ ಕೈಗೊಳ್ಳಲಾಗಿದ್ದು ಅದರ ಪ್ರಕಾರ ಆದಷ್ಟು ಶೀಘ್ರದಲ್ಲಿ ಬಾಕ್ಸ್‌ ಪುಸ್ಸಿಂಗ್‌ ಕಾಮಗಾರಿ ಪೂರ್ಣಗೊಳಿಸಲಾಗುವದು ಎಂದು ಅಧಿಕಾರಿಗಳು ಭರವಸೆ ಕೊಟ್ಟರು.

ಕೊರೊನಾ ವೈರಸ್‌ ಹರಡುತ್ತಿರುವುದರಿಂದ ರಾಜ್ಯದಲ್ಲಿ ಜಾರಿ ಇರುವ ಆರೋಗ್ಯ ಎಮರ್ಜೆನ್ಸಿ ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸಬಾರದು ಎಂದು ಅಧಿಕಾರಿಗಳು ಎಲ್ಲ ರೈತರಿಗೆ ತಿಳಿ ಹೇಳಿದ ನಂತರ ತಾತ್ಕಾಲಿಕವಾಗಿ ಅಹೋರಾತ್ರಿ ಧರಣಿ ಹಿಂಪಡೆಯಲಾಗಿದೆ. ಅವರು ಹೇಳಿದ ಪ್ರಕಾರ ನಡೆದುಕೊಳ್ಳದಿದ್ದರೆ ಮುಂದಿನ ದಿನಮಾನಗಳಲ್ಲಿ ಮತ್ತೂಮ್ಮೆ ಉಪವಾಸ ಸತ್ಯಾಗ್ರಹ ಮಾಡುತ್ತೇವೆ. ಅಂಥ ಪರಿಸ್ಥಿತಿಗೆ ಅ ಧಿಕಾರಿಗಳು ಅವಕಾಶ ಕೊಡದೇ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಮುಗಿಸಿಕೊಡಬೇಕೆಂದು ಒಕ್ಕೊರಲಿನಿಂದ ರೈತರು ಅಧಿ ಕಾರಿಗಳಿಗೆ ವಿನಂತಿಸಿದರು.

ಬಸವನಬಾಗೇವಾಡಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ಕೊರೊನಾ ಹಿನ್ನೆಲೆಯಲ್ಲಿ ನಾವು ಕೂಡ ಧರಣಿಯನ್ನು ಹಿಂಪಡೆಯಲು ರೈತರಿಗೆ ಮನವರಿಕೆ ಮಾಡಿದ್ದೇವೆ. ಆದಷ್ಟು ಬೇಗ ಕಾಮಗಾರಿಯನ್ನು ಮುಕ್ತಾಯಗೊಳಿಸಬೇಕು. ಇಲ್ಲದಿದ್ದರೆ ನಾಡಿನ ಎಲ್ಲ ಮಠಾಧೀಶರನ್ನು ಕರೆದುಕೊಂಡು ಬಂದು ರೈತರೊಂದಿಗೆ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಹೆಚ್ಚುವರಿ ಎಸ್‌ಪಿ ರಾಮ್‌ ಅರಸಿದ್ದಿ, ರೈಲ್ವೆ ಇಲಾಖೆಯ ಲಲನಕುಮಾರ, ಡಿವೈಎಸ್‌ಪಿ ಈ.ಶಾಂತವೀರ, ಕಂದಾಯ ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ ಧರಣಿ ಸ್ಥಳಕ್ಕೆ ಆಗಮಿಸಿದ್ದರು.

ಧರಣಿಯಲ್ಲಿ ರೈತ ಮುಖಂಡ ಅರವಿಂದ ಕುಲಕರ್ಣಿ, ಬಿ.ಎಲ್‌. ಪಾಟೀಲ, ಕೃಷ್ಣಾ ಭೋಸಲೆ, ಸಿದ್ರಾಮ ಅಂಗಡಗೇರಿ, ಸದಾಶಿವ ಬರಟಗಿ, ಪಾಂಡು ಹ್ಯಾಟಿ, ಕೃಷ್ಣಪ್ಪ ಭೂಮರಡ್ಡಿ, ವಿಠ್ಠಲ  ಬಿರಾದಾರ, ಗಿರಿಯಪ್ಪಸ ಸಾಹುಕಾರ, ರಾಯಪ್ಪ ಚಲವಾದಿ, ಸುರೇಶ ಅವಧಿ, ಹೊನಕೇರೆಪ್ಪ ತೆಲಗಿ, ಕಲ್ಲಪ್ಪ ಮಟ್ಯಾಳ, ಶಿವಪ್ಪ ಮುರನಾಳ, ಸೋಮನಿಂಗ ಹಡಪದ, ಗುರಪ್ಪ ನಾಗೋಡ, ಸಾಹೇಬಗೌಡ ಬಿರಾದಾರ, ಹೊನ್ನಪ್ಪ ತೋಟದ, ಗಣೇಶ ರಾಠೊಡ, ಎಚ್‌ .ಜಿ.ಮಕಾನದಾರ, ಖಾಜೇಸಾಬ ಕೊಲ್ಹಾರ, ವಿಠೊಭಾ ಸಾಳುಂಕೆ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.