ಕುಂದರಗಿ ಕುವರಿಗೆ ಪೈಲೆಟ್‌ ಆಗುವ ಕನಸು!


Team Udayavani, Oct 5, 2018, 2:00 PM IST

vij-4.jpg

ಬಾಗಲಕೋಟೆ: ಜಿಲ್ಲೆಯ ಗ್ರಾಮೀಣ ಪ್ರತಿಭೆಯೊಂದು ದೂರದ ಆಸ್ಟ್ರೇಲಿಯಾದಲ್ಲಿ ಪೈಲೆಟ್‌ ತರಬೇತಿ ಪಡೆಯುತ್ತಿದ್ದು, ಇನ್ನೇನು ಎರಡು ವರ್ಷ ಕಳೆದರೆ ಆಸ್ಟ್ರೇಲಿಯಾದ ಆಗಸದಲ್ಲಿ ಈಕೆ ಬಾಗಲಕೋಟೆ ಜಿಲ್ಲೆಯ ಕೀರ್ತಿ ಹೆಚ್ಚಿಸಲಿದ್ದಾಳೆ.

ಹೌದು. ಸದ್ಯ ಆಸ್ಟ್ರೇಲಿಯಾದ ಅಡಿಲೇಡ್‌ ನಗರದ ಬ್ರಾಯಿಟನ್‌ ಸೆಕೆಂಡರಿ ಸ್ಕೂಲ್‌ನಲ್ಲಿ 9ನೇ ತರಗತಿ ಓದುತ್ತಿರುವ ಬೀಳಗಿ ತಾಲೂಕಿನ ಕುಂದರಗಿ ಗ್ರಾಮದ ಪ್ರೀತಿಕಾ ವೆಂಕಟೇಶ ಗಾಣಗೇರ(14) ಎಂಬ ಕುವರಿಯ ಪೈಲೆಟ್‌ ಆಗುವ ಕನಸು ನನಸು ಮಾಡಲು ಆಸ್ಟ್ರೇಲಿಯಾ ಸರ್ಕಾರ ಸಹಕಾರ ನೀಡಿದೆ. 

ಆಕೆಯ ಜಾಣ್ಮೆ, ಚಾಣಾಕ್ಷತನಕ್ಕೆ ಕೈ ಜೋಡಿಸಿದೆ. ಸರ್ಕಾರದ ಶಿಷ್ಯವೇತನದಡಿ ಆಸ್ಟ್ರೇಲಿಯನ್‌ ಏರ್‌ ಲೀಗ್‌ನ ಪ್ರಾಮರಿ
ಸ್ಕೂಲ್‌ ಆಫ್‌ ಎಲಿಯೇಶನ್‌ನಲ್ಲಿ ಆರು ವರ್ಷಗಳಿಂದ ಪೈಲೆಟ್‌ ತರಬೇತಿ ಪಡೆಯುತ್ತಿದ್ದಾಳೆ.

8 ವರ್ಷದವಳಿದ್ದಾಗಲೇ ತರಬೇತಿ: ಪ್ರೀತಿಕಾ ಪೈಲೆಟ್‌ ಆಗುವ ಕನಸು ಕಂಡಿದ್ದು ಅವರ ಸಹೋದರ ಮಣಿಸಾಗರರಿಂದ. ತನಗೆ 8 ವರ್ಷ ಇರುವಾಗಲೇ ಪೈಲೆಟ್‌ ತರಬೇತಿ ಪಡೆಯುತ್ತಿದ್ದು, ಆಸ್ಟ್ರೇಲಿಯಾ ಮಾಧ್ಯಮಗಳು ಇದನ್ನು ದೊಡ್ಡ ಸುದ್ದಿಯನ್ನೂ ಮಾಡಿವೆ.

ತಂದೆ-ತಾಯಿ ಉದ್ಯೋಗದಲ್ಲಿ: ಪ್ರೀತಿಕಾ ತಂದೆ ವೆಂಕಟೇಶ ಗಾಣಿಗೇರ ಎನ್‌ಟಿಟಿಎಫ್‌ ಎಂಜಿನಿಯರ್‌  ಆಗಿದ್ದು, ಆಸ್ಟ್ರೇಲಿಯಾದಲ್ಲಿ ಉದ್ಯೋಗಿಯಾಗಿದ್ದಾರೆ. ತಾಯಿ ಬಾಗಲಕೋಟೆಯ ಅರ್ಚನಾ ಸಜ್ಜನ (ಗಾಣಗೇರ) ಕೂಡ ಅಲ್ಲಿಯೇ ಉದ್ಯೋಗಿಯಾಗಿದ್ದಾರೆ. ಮಣಿಸಾಗರ ಎಂಬ ಪುತ್ರ ಬಿಇ ಎಲೆಕ್ಟ್ರಾನಿಕ್ಸ್‌ ವ್ಯಾಸಂಗ ಮಾಡುತ್ತಿದ್ದು, ಪುತ್ರಿ ಪ್ರೀತಿಕಾ 9ನೇ ತರಗತಿ ಜತೆಗೆ ಪೈಲೆಟ್‌ ತರಬೇತಿ ಪಡೆಯುತ್ತಿದ್ದಾಳೆ. ಆಸ್ಟ್ರೇಲಿಯಾದಲ್ಲಿ ಪೈಲೆಟ್‌ ಆಗಲು 16 ವರ್ಷ ಕಡ್ಡಾಯ ಮಾಡಿದೆ.

ಭಾರತದಲ್ಲಿ ಸೇವೆ ಸಲ್ಲಿಸುವ ಆಸೆ: ಹಲವರು ಭಾರತದಲ್ಲಿ ಶಿಕ್ಷಣ ಕಲಿತು, ವಿದೇಶದಲ್ಲಿ ಕೆಲಸ ಮಾಡುತ್ತಾರೆ. ಆದರೆ, ವಿದೇಶದಲ್ಲಿ ಕಲಿತು ಭಾರತದಲ್ಲಿ ಸೇವೆ ಸಲ್ಲಿಸಬೇಕೆಂಬ ಆಸೆ ಇದೆ. ತನ್ನ ವ್ಯಾಸಂಗ ಮತ್ತು ಪೈಲೆಟ್‌ ತರಬೇತಿ ಮುಗಿದ ಬಳಿಕ ಭಾರತಕ್ಕೆ ಬಂದು ಇಲ್ಲಿನ ಹೆಣ್ಣು ಮಕ್ಕಳಿಗೆ ಪೈಲೆಟ್‌ ತರಬೇತಿ ಕೊಡುವ ಆಸೆ ಹೊಂದಿದ್ದಾಳೆ. ಮಗಳ ಆಸೆಗೆ ತಾಯಿ ಅರ್ಚನಾ ಬೆಂಗಾವಲಾಗಿ ನಿಂತಿದ್ದಾರೆ.

ದೊಡ್ಡ ದೊಡ್ಡ ನಗರಗಳಲ್ಲಿರುವವರು, ಶ್ರೀಮಂತರು ಮಾತ್ರ ಪೈಲೆಟ್‌ ಆಗುತ್ತಾರೆ ಎಂಬ ಮಾತು ಸುಳ್ಳು. ಉತ್ತಮ ಗುರಿ, ಸದೃಢ ಮನಸ್ಸಿನೊಂದಿಗೆ ಕಲಿತರೆ ಏನು ಬೇಕಾದರೂ ಸಾಧನೆ ಮಾಡಬಹುದು ಎನ್ನುತ್ತಾಳೆ ಪ್ರೀತಿಕಾ. 

ನಾನು ಪೈಲೆಟ್‌ ಆಗಬೇಕೆಂಬ ಆಸೆ ಬಂದಿದ್ದು 8ನೇ ವಯಸ್ಸಿಗೆ. ಆಗ ತಾಯಿಗೆ ಏರ್ಪಾಡು ಮಾಡಿ ದರು.
ಶಿಷ್ಯವೇತನದಲ್ಲೇ ತರಬೇತಿ ಪಡೆ ಯುತ್ತಿದ್ದೇನೆ. ತರಬೇತಿ ಬಳಿಕ ಭಾರತದಲ್ಲಿ ಹೆಣ್ಣು ಮಕ್ಕಳಿಗೆ ಪೈಲೆಟ್‌ ತರಬೇತಿ ಕೊಡಬೇಕೆಂಬ ಗುರಿ ಇದೆ. ಭಾರತೀಯ ಮಹಿಳೆಯರೂ ವಿಶ್ವ ಮಟ್ಟದಲ್ಲಿ ಸಾಧನೆ ಮಾಡಬೇಕು ಎಂಬುದು ನನ್ನ ಆಸೆ.
 ಪ್ರೀತಿಕಾ ಗಾಣಗೇರ

ಎಷ್ಟೋ ಜನರು ನಮ್ಮಲ್ಲಿ ಕಲಿತು, ವಿದೇಶದಲ್ಲಿ ಉದ್ಯೋಗ ಮಾಡುತ್ತಾರೆ. ಆದರೆ ಪ್ರೀತಿಕಾ ವಿದೇಶದಲ್ಲಿ ಶಿಕ್ಷಣ, ತರಬೇತಿ ಪಡೆದು ಭಾರತದಲ್ಲಿ ಪೈಲೆಟ್‌ ತರಬೇತಿ ಕೊಡುವ ಗುರಿ ಹಾಕಿಕೊಂಡಿದ್ದು ಹೆಮ್ಮೆಯ ವಿಷಯ. 
 ಡ್ಯಾನಿಯಲ್‌ ನ್ಯೂಟನ್‌, ಸಾಮಾಜಿಕ ಕಾರ್ಯಕರ್ತ

„ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.