ಬಸ್ಸು ನಿಲ್ದಾಣದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ!
Team Udayavani, Jan 1, 2020, 7:46 PM IST
ವಿಜಯಪುರ: ರೈಲಿನಲ್ಲಿ, ಆ್ಯಂಬುಲೆನ್ಸ್ ನಲ್ಲಿ ಹೆರಿಗೆಯಾಗಿರುವ ಘಟನೆಗಳನ್ನು ನಾವು ಓದಿರುತ್ತೇವೆ. ಅದರೆ ವಿಜಯಪುರದಲ್ಲಿ ಹೊಸ ವರ್ಷದ ಮೊದಲ ದಿನವೇ ಗರ್ಭಿಣಿಯೊಬ್ಬರು ಬಸ್ ನಿಲ್ದಾಣದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆಯೊಂದು ವರದಿಯಾಗಿದೆ.
ಇಲ್ಲಿನ ನಿಡಗುಂದಿ ಪಟ್ಟಣದಲ್ಲಿರುವ ಬಸ್ ನಿಲ್ದಾಣದಲ್ಲಿ ಗರ್ಭಿಣಿಯೊಬ್ಬರು ಬಸ್ಸಿಗಾಗಿ ಕಾಯುತ್ತಿದ್ದ ಸಂದರ್ಭದಲ್ಲೇ ಅವರಿಗೆ ಹೆರಿಗ ಬೇನೆ ಕಾಣಿಸಿಕೊಂಡಿದೆ. ಆಗ ಪರಿಸ್ಥಿತಿಯನ್ನು ಅರಿತುಕೊಂಡ ಸ್ಥಳೀಯರು ಬಸ್ ನಿಲ್ದಾಣದಲ್ಲೇ ಗರ್ಭಿಣಿಗೆ ಹೆರಿಗೆ ಮಾಡಿಸಲು ವ್ಯವಸ್ಥೆ ಮಾಡಿದ್ದಾರೆ. ಇದರ ಪರಿಣಾಮವಾಗಿ ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.
ಬಸವನಬಾಗೇವಾಡಿ ಮೂಲದ ಮಹಾದೇವಿ ಎಂಬ ಗರ್ಭಿಣಿ ಹೆರಿಗೆಗೆಂದು ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ತೆರಳಲು ತಮ್ಮವರೊಂದಿಗೆ ಬಸ್ಸಿಗಾಗಿ ಕಾಯುತ್ತಿದ್ದರು. ಆ ಸಂದರ್ಭದಲ್ಲಿ ಮಹಾದೇವಿಯವರಿಗೆ ಇದ್ದಕ್ಕಿದ್ದಂತೆ ಹೆರಿಗೆ ಬೇನೆ ಕಾಣಿಸಿಕೊಂಡಿದ್ದು ಇದು ತೀವ್ರವಾಗುತ್ತಿದ್ದಂತೆ ನಿಲ್ದಾಣದ ಒಂದು ಪಕ್ಕದಲ್ಲೇ ಬಟ್ಟೆಗಳನ್ನು ಅಡ್ಡವಾಗಿಸಿ ಆಕೆಯ ಹೆರಿಗೆಗೆ ಆಕೆಯ ಜೊತೆಗಿದ್ದವರು ಮತ್ತು ಸ್ಥಳೀಯರು ವ್ಯವಸ್ಥೆ ಮಾಡಿದ್ದಾರೆ. ಬಳಿಕ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಾದೇವಿ ಇದೀಗ ಸುದ್ದಿಯ ಕೇಂದ್ರವಾಗಿದ್ದಾರೆ.
ಸುರಕ್ಷಿತ ಹೆರಿಗೆಯ ಬಳಿಕ ತಾಯಿ ಮತ್ತು ನವಜಾತ ಶಿಶುವನ್ನು ನಿಡಗುಂದಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಇದೀಗ ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ತಿಳಿದುಬಂದಿದ್ದು, ಮಹಾದೇವಿಯವರಿಗೆ ಇದು ಎರಡನೇ ಹೆರಿಗೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ
Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ
Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ
Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.