Leopard: ಬಸವನಾಡಿನಲ್ಲಿ ಚಿರತೆ ಹಾವಳಿ… ಭೀತಿಯಲ್ಲಿ ಅನ್ನದಾತ, ಡ್ರೋನ್ ಮೂಲಕ ಕಾರ್ಯಾಚರಣೆ
Team Udayavani, Sep 2, 2024, 9:54 AM IST
ವಿಜಯಪುರ: ಬಸವನಾಡಿನಲ್ಲಿ ಚಿರತೆ ಹಾವಳಿ ಹೆಚ್ಚಿದ್ದು, ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಾಣಿ ಹಂತಕ ಚಿರತೆಯಿಂದ ರೈತರು ಕಂಗಾಲಾಗಿದ್ದಾರೆ.
ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಆಸಂಗಿಹಾಳ, ದೇವರನಾವದಗಿ ಗ್ರಾಮಗಳಲ್ಲಿ ದಾಂಗುಡಿ ಇಟ್ಟಿರುವ ಚಿರತೆ, ರೈತರ ಸಾಕು ನಾಯಿ, ಎಮ್ಮೆ, ಆಕಳುಗಳ ಮೇಲೆ ದಾಳಿ ನಡೆಸಿ ಬಲಿ ಪಡೆಯುತ್ತಿದೆ.
ರೈತರ ಸಾಕು ಪ್ರಾಣಿಗಳ ಮೇಲೆ ಚಿರತೆ ದಾಳಿ ಮಾಡಿದ್ದು, ಜಮೀನಿನಲ್ಲಿ ಚಿರತೆಯ ಹೆಜ್ಜೆ ಗುರುತು ಸ್ಪಷ್ಟವಾಗಿ ಕಾಣಿಸಿಕೊಂಡಿವೆ.
ಆಸಂಗಿಹಾಳ ಗ್ರಾಮದಲ್ಲಿ ರೈತರೊಬ್ಬರ ಆಕಳನ್ನು ಹತ್ಯೆ ಮಾಡಿ ತಿಂದಿರುವ ಚಿರತೆ, ದೇವರನಾವದಗಿ ಗ್ರಾಮದಲ್ಲಿ ಭೀಮರಾಯ ಜನಿವಾರ ಎಂಬವರ ಜಮೀನಿನಲ್ಲಿ ಸಾಕು ನಾಯಿ ಹಾಗೂ ಎಮ್ಮೆಯ ಮೇಲೆ ದಾಳಿ ನಡೆಸಿ ಭಕ್ಷಿಸಿದೆ.
ಸಾರ್ವಜನಿಕ ದೂರಿನನ್ವಯ ಹೆಜ್ಜೆ ಗುರುತು ಆಧರಿಸಿ ಚಿರತೆ ಇರುವಿಕೆಯ ಸ್ಪಷ್ಟತೆ ಅರಿತ ಅರಣ್ಯ ಇಲಾಖೆ ಅಧಿಕಾರಿಗಳು ಆರ್.ಎಫ್.ಒ. ರಾಜೀವ ಬಿರಾದಾರ ನೇತೃತ್ವದಲ್ಲಿ ಚಿರತೆ ಸೆರೆಗೆ ಮುಂದಾಗಿದ್ದಾರೆ.
ಚಿರತೆ ಸೆರೆ ಹಿಡಿಯುವ ಭಾಗವಾಗಿ ಈಗಾಗಲೇ ಆಸಂಗಿಹಾಳ ಹಾಗೂ ದೇವರನಾವದಗಿ ಗ್ರಾಮಗಳ ರೈತರ ತೋಟಗಳಲ್ಲಿ ತಲಾ ಒಂದೊಂದು ಬೋನ್ ಇರಿಸಲಾಗಿದೆ. ಜೊತೆಗೆ ಚಿರತೆಯ ಚಲನವಲನದ ಮೇಲೆ ನಿಗಾ ಇರಿಸಲು ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.