ಸರ್ಕಾರಿ ನೌಕರರ ಸಮಸ್ಯೆಗೆ ಸ್ಪಂದಿಸುವ ಕೆಲಸವಾಗಲಿ: ಬಿರಾದಾರ


Team Udayavani, Jan 29, 2022, 5:42 PM IST

21govt

ತಾಳಿಕೋಟೆ: ನೂತನವಾಗಿ ಅಸ್ಥಿತ್ವಕ್ಕೆ ಬಂದಿರುವ ತಾಳಿಕೋಟೆ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಅಭಿವೃದ್ಧಿ ಅಧಿಕಾರಿ ನಿಂಗಣ್ಣ ದೊಡಮನಿ ಅವರು ಸರ್ಕಾರಿ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಅವರಲ್ಲಿ ಹೊಸ ಚೈತನ್ಯ ತುಂಬುವ ಕೆಲಸ ಮಾಡಲಿ ಎಂದು ಜೆಡಿಎಸ್‌ ಪಕ್ಷದ ತಾಲೂಕು ಕಾರ್ಯಾಧ್ಯಕ್ಷ ಮಡುಸೌಕಾರ ಬಿರಾದಾರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಸರ್ಕಾರಿ ನೌಕರರ ಸಂಘ ನೂತನ ಅಧ್ಯಕ್ಷ ನಿಂಗಣ್ಣ ದೊಡಮನಿ ಅವರಿಗೆ ಸನ್ಮಾನಿಸಿ ಮಾತನಾಡಿದ ಅವರು, ಈ ಮೊದಲು ಮುದ್ದೇಬಿಹಾಳ ತಾಲೂಕಿನಲ್ಲಿದ್ದ ಸರ್ಕಾರಿ ನೌಕರರ ಸಂಘವು ಈಗ ತಾಳಿಕೋಟೆ ನೂತನ ತಾಲೂಕಾ ಕೇಂದ್ರವಾಗಿ ಬೇರ್ಪಟ್ಟಿದ್ದರಿಂದ ಹೊಸದಾಗಿ ಅಸ್ಥಿತ್ವಕ್ಕೆ ಬಂದಿದ್ದು ಸ್ವಾಗತಾರ್ಹ ಎಂದರು.

ಸಂಘದ ಸದಸ್ಯರ ಅಭಿಪ್ರಾಯದ ಮೇರೆಗೆ ಜಿಲ್ಲಾಧ್ಯಕ್ಷ ಸುರೇಶ ಶೇಡಶ್ಯಾಳ ಅವರು ನಿಂಗನಗೌಡರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರಿಂದ ಅವರಿಗೆ ಇನ್ನಷ್ಟು ಜವಾಬ್ದಾರಿ ಹೆಚ್ಚಿಸಿದಂತಾಗಿದೆ. ಸರ್ಕಾರಿ ನೌಕರರ ಸಂಘದಲ್ಲಿ ಈಗಾಗಲೇ ಸಾಕಷ್ಟು ಜವಾಬ್ದಾರಿಗಳನ್ನು ನಿರ್ವಹಿಸಿರುವ ಇವರಿಗೆ ನೌಕರರ ಸಮಸ್ಯೆಗಳಿಗೆ ಸ್ಪಂದಿಸುವುದರೊಂದಿಗೆ ಅವರಿಗೆ ಶಕ್ತಿ ತುಂಬುವಂತಹ ಕಾರ್ಯ ಮಾಡಲಿದ್ದಾರೆ ಎಂದರು.

ಶಿವು ಕಲಬುರಗಿ (ಬೊಮ್ಮನಹಳ್ಳಿ) ಮಾತನಾಡಿ, ಪಿಡಿಒ ನಿಂಗಣ್ಣ ದೊಡಮನಿ ಅವರು ಸಂಘಟನಾತ್ಮಕ ಶಕ್ತಿ ಮೂಲಕ ಬೆಳೆದು ಬಂದವರಾಗಿದ್ದಾರೆ. ಸಾಮಾನ್ಯವಾಗಿ ಸಮಸ್ಯೆಗಳನ್ನು ನೀಗಿಸುವ ತಾಕತ್ತು ಅವರಲ್ಲಿದೆ. ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹುದ್ದೆಯಿಂದ ಇನ್ನಷ್ಟು ಹೆಚ್ಚಿನ ಜವಾಬ್ದಾರಿಗಳು ಅವರಿಗೆ ಸಿಗಲಿ ಎಂದು ಆಶಿಸಿದರು.

ಭಗೀರಥ ಉಪ್ಪಾರ ಸಂಘದ ಅಧ್ಯಕ್ಷ ಮಲಕಣ್ಣ ಮಸರಕಲ್ಲ, ಗ್ರಾಪಂ ಸದಸ್ಯ ಯಮನಪ್ಪ ಮಸರಕಲ್ಲ, ಶಿಕ್ಷಕರ ಸಂಘದ ಕಾರ್ಯದರ್ಶಿ ಸುರೇಶ ಬೀರಗೊಂಡ ಮಾತನಾಡಿ, ತಾಲೂಕಿನಲ್ಲಿ ಅಭಿವೃದ್ಧಿ ಅಧಿಕಾರಿಗಳು ಬೆರಳೆಣಿಕೆಯಷ್ಟು ಇದ್ದರೂ ಕೂಡಾ ಎಲ್ಲ ನೌಕರರ ಸಮಸ್ಯೆ ನೀಗಿಸುವ ಸಾಮರ್ಥ್ಯ ನಿಂಗಣ್ಣ ದೊಡಮನಿ ಅವರಲ್ಲಿದೆ. ಈ ಕಾರಣದಿಂದ ಎಲ್ಲ ಶಿಕ್ಷಕಕರು ಅವರನ್ನು ಬೆಂಬಲಿಸಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಅವರಿಗೆ ಸಿಕ್ಕಿರುವ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸುತ್ತಾರೆಂಬ ನಂಬಿಕೆ ಎಲ್ಲ ನೌಕರರಲ್ಲಿದೆ ಎಂದರು.

ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ನಿಂಗಣ್ಣ ದೊಡಮನಿ ಮಾತನಾಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರನ್ನಾಗಿ ತಾಲೂಕಿನ ಎಲ್ಲ ನೌಕರರ ಒಮ್ಮತದಿಂದ ಆಯ್ಕೆಗೊಳಿಸಿದ್ದಾರೆ. ಅವರು ನನ್ನ ಮೇಲಿಟ್ಟ ವಿಶ್ವಾಸಕ್ಕೆ ಪ್ರೀತಿಗೆ ಸದಾ ಋಣಿಯಾಗಿದ್ದೇನೆ. ಸರ್ಕಾರಿ ನೌಕರರ ಸಂಘವನ್ನು ಜಿಲ್ಲೆಯಲ್ಲಿಯೇ ಮಾದರಿ ಸಂಘವನ್ನಾಗಿ ಬೆಳೆಸುವ ಉತ್ಸುಕತೆ ನನ್ನಲ್ಲಿದ್ದು ಅದಕ್ಕೆ ಎಲ್ಲ ನೌಕರರ ಸಹರಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದರು.

ಮುಖಂಡರುಗಳಾದ ಶಂಭು ಹಂದಿಗನೂರ, ಸಂತೋಷ ಹಜೇರಿ, ಜಾಕೀರ್‌ ಹುಸೇನ್‌, ಶಂಕರಗೌಡ ಪಾಟೀಲ, ರಮೇಶ ವಣಕ್ಯಾಳ (ಅಸ್ಕಿ), ಮಲ್ಲನಗೌಡ ಪಾಟೀಲ, ಬಸನಗೌಡ ಬಿರಾದಾರ, ದಶರಥಗೌಡ ದೊಡಮನಿ, ಶರಣ ಕುಂಬಾರ ಇದ್ದರು. ಶಿವಶರಣ ಅಲ್ಲಾಪುರ ನಿರೂಪಿಸಿದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.