ಕಾಲುವೆ ಕೊನೆಯಂಚಿನ ಜಮೀನಿಗೆ ನೀರು ಹರಿಯಲಿ


Team Udayavani, Jun 28, 2021, 8:10 PM IST

serashj

ಆಲಮಟ್ಟಿ: ಮಳೆಗಾಲದಲ್ಲಿ ಕ್ಲೋಸರ್‌ ಕಾಮಗಾರಿಗಳು ಗುಣಮಟ್ಟದ್ದಾಗಲು ಸಾಧ್ಯವಿಲ್ಲ. ಆದ್ದರಿಂದ ಅತಿ ಅವಶ್ಯವಿರುವಲ್ಲಿ ಇಲಾಖೆ ವತಿಯಿಂದ ಕಾಮಗಾರಿ ನಿರ್ವಹಿಸಿ ಕಾಲುವೆ ಕೊನೆಯಂಚಿನ ರೈತರ ಜಮೀನುಗಳವರೆಗೆ ನೀರು ಹರಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಖಂಡ ಕರ್ನಾಟಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ತಿಳಿಸಿದ್ದಾರೆ.

ಆಲಮಟ್ಟಿ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯ ವ್ಯಾಪ್ತಿಯಲ್ಲಿ ಕ್ಲೋಸರ್‌ ಹಾಗೂ ಸ್ಪೇಷಲ್‌ ರಿಪೇರಿ ಕಾಮಗಾರಿಗೆ ಮಳೆಗಾಲದಲ್ಲಿ ಟೆಂಡರ್‌ ಕರೆಯಲಾಗಿದೆ. ರೋಹಿಣಿ ಹಾಗೂ ಮೃಗಶಿರಾ ಮಳೆ ಅಲ್ಪ ಪ್ರಮಾಣದಲ್ಲಿ ಆಗಿದ್ದರಿಂದ ಕಾಲುವೆಗಳಲ್ಲಿ ನೀರು ನಿಂತಿವೆ. ಇನ್ನು ಕಾಮಗಾರಿ ನಿರ್ವಹಿಸಲು ಅಗತ್ಯವಾಗಿ ಬೇಕಾಗಿರುವ ಕಾರ್ಮಿಕರು ಕೃಷಿ ಕೆಲಸದಲ್ಲಿ ತೊಡಗಿದ್ದಾರೆ. ಯಂತ್ರಗಳನ್ನು ಬಳಸಿಕೊಂಡು ಕಾಲುವೆಯಲ್ಲಿನ ಹೂಳು ತೆರವುಗೊಳಿಸುವುದಾದರೆ ಈಗಾಗಲೇ ನೀರು ನಿಂತು ಕಾಲುವೆಯ ಸಿಮೆಂಟ್‌ ಕಾಂಕ್ರೀಟ್‌ ನೀರಿನಿಂದ ಹಸಿಯಾಗಿವೆ.

ಹೀಗೆ ಹಲವಾರು ಸಮಸ್ಯೆಗಳಿರುವುದರಿಂದ ಕಾಮಗಾರಿಗಳು ಗುಣಮಟ್ಟದ್ದಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ಕೆಲ ಕಾಲುವೆಗಳಿಗೆ ತೆರಳಿ ಪರಿಶೀಲಿಸಿದಾಗ ಕಾಲುವೆಯಲ್ಲಿನ ಹೂಳು ಹಾಗೆಯೇ ಇದೆ. ಕೆಲ ಕಡೆಗಳಲ್ಲಿ ನೀರಿನಲ್ಲಿ ಯಂತ್ರಗಳಿಂದ ಹೂಳು ತೆಗೆಯಲು ಪ್ರಯತ್ನಿಸಿದ್ದಾರೆ. ಇದರಿಂದ ಕಾಲುವೆಯ ನೀರಿನಲ್ಲಿ ಯಂತ್ರಗಳು ಸಿಲುಕಿಕೊಂಡು ಕಾಂಕ್ರೀಟ್‌ ಕಿತ್ತಿವೆ. ಕಾಲುವೆ ಪಕ್ಕದಲ್ಲಿರುವ ಗಿಡಗಂಟಿಗಳನ್ನು ತೆರವುಗೊಳಿಸುತ್ತಿರುವುದು ಕಂಡು ಬಂದಿದೆ.

ಅಧಿ ಕಾರಿಗಳು ಅವಶ್ಯವಿದ್ದಲ್ಲಿ ಕಾಮಗಾರಿ ಪಡೆದು ಇನ್ನುಳಿದವುಗಳನ್ನು ರದ್ದುಗೊಳಿಸಿ ಕೊರೊನಾ ನಿರ್ಮೂಲನೆಗಾಗಿ ಖರ್ಚು ಮಾಡಬಹುದಾಗಿತ್ತು. ಆದರೆ ಸರ್ಕಾರದ ಹಣ ಒಟ್ಟಾರೆ ಖರ್ಚು ಮಾಡಲು ಅಧಿ ಕಾರಿಗಳು ಹಠಮಾರಿ ಧೋರಣೆ ಅನುಸರಿಸುತ್ತಿರುವುದೇಕೆ? ಇದರಿಂದ ಕೇವಲ ಹಣ ಖರ್ಚು ಮಾಡಲು ಕಾಮಗಾರಿಗಳಿಗೆ ಟೆಂಡರ್‌ ಕರೆಯಲಾಗಿದೆಯೇ ಹೇಗೆ? ಸರ್ಕಾರದ ಹಣ ಸದುಪಯೋಗಕ್ಕಿಂತಲೂ ದುರುಪಯೋಗವಾಗುವ ಸಂಭವವೇ ಹೆಚ್ಚು. ಆದ್ದರಿಂದ ಸರ್ಕಾರದ ತನಿಖಾ ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.