
ಮಾಜಿ ಸಚಿವ ಎಂ.ಬಿ.ಪಾಟೀಲ್ ಗೆ ರಾಜಸ್ಥಾನದ ಪರ್ಯಾವರಣ ಪ್ರಶಸ್ತಿ
Team Udayavani, Jan 13, 2020, 2:06 PM IST

ವಿಜಯಪುರ: ರಾಜ್ಯದಲ್ಲಿ ಜಲಸಂಪನ್ಮೂಲ ಸಚಿವರಾಗಿ ಜಲ ಸಂರಕ್ಷಣೆ ಹಾಗೂ ಪರಿಸರ ರಕ್ಷಣೆಗಾಗಿ ಕೋಟಿ ವೃಕ್ಷ ಅಭಿಯಾನದ ಮೂಲಕ ಜನಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಗಿರುವ ಬಬಲೇಶ್ವರ ಶಾಸಕರಾದ ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರಿಗೆ ರಾಜಸ್ಥಾನ ರಾಜ್ಯದ ಪ್ರಶಸ್ತಿ ದೊರಕಿದೆ.
ರಾಜಸ್ಥಾನ ರಾಜ್ಯದ ತರುಣ್ ಭಾರತ ಸಂಘದಿಂದ ಪ್ರತಿ ವರ್ಷ ನೀಡುವ ಪರ್ಯಾವರಣ ರಕ್ಷಕ ಸಮ್ಮಾನ-2019 ಪ್ರಶಸ್ತಿ ಈ ಬಾರಿ ಜಲಸಂಪನ್ಮೂಲ ಮಾಜಿ ಸಚಿವ ಎಂ. ಬಿ.ಪಾಟೀಲ್ ಅವರಿಗೆ ನೀಡಲಾಗಿದೆ.
ಎಂ.ಬಿ.ಪಾಟೀಲ ಅವರು ಪರಿಸರ ರಕ್ಷಣೆಯಲ್ಲಿ ಕೈಗೊಂಡಿರುವ ವಿವಿಧ ಕಾರ್ಯಗಳನ್ನು ಗುರುತಿಸಿ, ಈ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಜಲಗಾಂಧಿ ಎಂದೆ ಖ್ಯಾತರಾದ ವರ್ಡ್ ವಾಟರ್ ಪ್ರೈಸ್ ವಿಜೇತ ಡಾ.ರಾಜೇಂದ್ರ ಸಿಂಗ್ ಸ್ಥಾಪಿಸಿದ ತರುಣ್ ಭಾರತ ಸಂಘ ಈ ಪ್ರಶಸ್ತಿ ನೀಡಿದೆ.
ರಾಜಸ್ಥಾನದ ಆಳ್ವಾರ್ ಜಿಲ್ಲೆಯ ಬಿಕಾಂಪುರ ಗ್ರಾಮದಲ್ಲಿ ಪ್ರತಿ ರಾಷ್ಟ್ರದಾದ್ಯಂತ ಪರಿಸರ ರಕ್ಷಣೆಯಲ್ಲಿ ತೊಡಗಿರುವ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ.
ಜ.15 ರಂದು ನಡೆಯುವ ರಾಜಸ್ಥಾನದ ತರುಣ್ ಭಾರತ ಸಂಘದ ಸಮಾರಂಭದಲ್ಲಿ ಮಹಾತ್ಮಾ ಗಾಂಧಿಯವರ ಮೊಮ್ಮಗ ಅರುಣ ಗಾಂಧಿ ಅವರು ಎಂ.ಬಿ.ಪಾಟೀಲ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಎಂ.ಬಿ.ಪಾಟೀಲ್ ಅವರು ಕರ್ನಾಟಕ ರಾಜ್ಯದ ಜಲಸಂಪನ್ಮೂಲ ಸಚಿವರಾಗಿದ್ದಾಗ ರಾಜ್ಯದಾದ್ಯಂತ ಕೈಗೊಂಡ ಕೆರೆ ತುಂಬುವ ಯೋಜನೆಗಳು ಹಾಗೂ ಕೋಟಿ ವೃಕ್ಷ ಅಭಿಯಾನ ಯೋಜನೆಗಳು ಪರಿಸರ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಿವೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.