ಮಾರುತಿ ನಗರದಲ್ಲಿ ಅಭಿವೃದ್ಧಿ ಕಾಮಗಾರಿ ವೀಕ್ಷಣೆ-ಪರಿಶೀಲನೆ


Team Udayavani, Apr 10, 2021, 7:45 PM IST

ಹಜದಗಹ್ಗ

ಮುದ್ದೇಬಿಹಾಳ : 25 ವರ್ಷಗಳ ನಂತರ ಮಾರುತಿ ನಗರ ಬಡಾವಣೆ ಅಭಿವೃದ್ಧಿ ಕಾಣತೊಡಗಿದೆ. ಎ.ಎಸ್‌ .ಪಾಟೀಲ ನಡಹಳ್ಳಿಯವರು ಶಾಸಕರಾದ ಮೇಲೆ ಕೋಟ್ಯಂತರ ರೂ. ಅನುದಾನ ತಂದು ಅಭಿವೃದ್ಧಿಯ ನಿಜವಾದ ಹರಿಕಾರ ಎನ್ನಿಸಿಕೊಂಡಿದ್ದಾರೆ. ಇಂಥ ಅಭಿವೃದ್ಧಿ ಪರ ಚಿಂತನೆಯುಳ್ಳ ಶಾಸಕರಿಗೆ ನಾವು ಸದಾ ಕಾಲ ಋಣಿಯಾಗಿರುತ್ತೇವೆ ಎಂದು ಮಾರುತಿ ನಗರ ಬಡಾವಣೆಯ ನಾಗರಿಕರು ಹರ್ಷ ವ್ಯಕ್ತಪಡಿಸಿದರು.

ಮುದ್ದೇಬಿಹಾಳ ಪಟ್ಟಣದ ಪ್ರಗತಿ ಶೀಲ ಪ್ರಜ್ಞಾವಂತರ ಬಡಾವಣೆ ಎಂದೇ ಕರೆಯಲ್ಪಡುವ ಮಾರುತಿ ನಗರದಲ್ಲಿ ಪ್ರಗತಿಯಲ್ಲಿರುವ ಸಿಸಿ ರಸ್ತೆ, ಚರಂಡಿ ಸೇರಿ ವಿವಿಧ ಅಭಿವೃದ್ಧಿ ಕಾಮಗಾರಿ ಪರಿಶೀಲನೆ ಸಂದರ್ಭ ಶಾಸಕರ ಎದುರಿಗೆ ಹರ್ಷ ಪ್ರಕಟಿಸಿದ ನಾಗರಿಕರು, ನಡಹಳ್ಳಿಯವರು ನೀವು ಶಾಸಕರಾದ ಮೇಲೆ ನಮ್ಮ ಬಡಾವಣೆಗೆ ಒಂದೇ ವರ್ಷದಲ್ಲಿ 3.36 ಕೋಟಿ ವೆಚ್ಚದ ಕಾಮಗಾರಿ ಹಾಕಿ ಮೂಲ ಸೌಲಭ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದೀರಿ.

ನೀವು ಶಾಸಕರಾದ ಮೇಲೆಯೇ ಇಲ್ಲಿ ಗುಣಮಟ್ಟದ ಕೆಲಸಗಳು ನಡೆಯುತ್ತಿವೆ. ಇಂಥ ಕೆಲಸ ಆಗುತ್ತದೆ, ಇದನ್ನು ನಮ್ಮ ಜೀವನದಲ್ಲಿ ನೋಡುತ್ತೇವೆ ಅನ್ನೋ ನಿರೀಕ್ಷೆಯೇ ನಮಗಿರಲಿಲ್ಲ ಎಂದು ಮ್ಯಾಗೇರಿ ದಂಪತಿ, ಕೆಂಚಪ್ಪ ಮಡಿವಾಳ, ಜೈರಾಬಿ ಢವಳಗಿ ಖುಷಿ ವ್ಯಕ್ತಪಡಿಸಿ ನಮಗೆಲ್ಲ ಸಂತೋಷ ಆಗಿದೆ ಎಂದರು.

ದತ್ತು ತೆಗೆದುಕೊಳ್ಳಲು ಮನವಿ: ಪುರಸಭೆಗೆ ಅತಿ ಹೆಚ್ಚು ತೆರಿಗೆ ಕಟ್ಟುವ ಪ್ರದೇಶ ಮಾರುತಿ ನಗರ ಆಗಿದೆ. ಹೀಗಿದ್ದರೂ ಮೂಲಸೌಕರ್ಯ ಅಭಿವೃದ್ಧಿ ವಂಚಿತವಾಗಿತ್ತು. ಈಗಾಗಲೇ 3.36 ಕೋಟಿ ರೂ. ವೆಚ್ಚದ ಕಾಮಗಾರಿ ಆರಂಭಕ್ಕೆ ಅವಕಾಶ ಮಾಡಿಕೊಟ್ಟಿದ್ದೀರಿ. ಇದೇ ವರ್ಷದೊಳಗೆ ಇನ್ನೂ 4.5-5 ಕೋಟಿ ರೂ. ಹೆಚ್ಚುವರಿ ಅನುದಾನ ಇದೇ ಬಡಾವಣೆಗೆ ಮಂಜೂರು ಮಾಡಿಸಿ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೀರಿ. ಹೀಗಾಗಿ ಮಾರುತಿ ನಗರವನ್ನು ದತ್ತು ಪಡೆದುಕೊಳ್ಳಬೇಕು. ಇದರಿಂದ ಇನ್ನೂ ಹೆಚ್ಚಿನ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ನಿವಾಸಿಗಳ ಪರವಾಗಿ ಪುರಸಭೆಯ ನಾಮನಿರ್ದೇಶಿತ ಸದಸ್ಯ ಮನೋಹರ ತುಪ್ಪದ ಶಾಸಕರಿಗೆ ಮನವಿ ಮಾಡಿದರೆ ಇದಕ್ಕೆ ಮುಗುಳ್ನಗುತ್ತಲೇ ಉತ್ತರಿಸಿದ ಶಾಸಕರು ಆಯ್ತು, ನೋಡೋಣ ಎಂದರು.

ಕಾಮಗಾರಿ ವೀಕ್ಷಣೆ: ಇದೇ ವೇಳೆ ಬಡಾವಣೆಯ ವಿವಿಧೆಡೆ ನಡೆಯುತ್ತಿರುವ ಸಿಸಿ ರಸ್ತೆ, ಚರಂಡಿ ಕಾಮಗಾರಿಗಳನ್ನು ಬಡಾವಣೆಯ ಪ್ರಮುಖರೊಂದಿಗೆ ವೀಕ್ಷಿಸಿದ ಶಾಸಕರು ಕಾಮಗಾರಿಯ ಗುಣಮಟ್ಟಕ್ಕೆ ತೃಪ್ತಿ ವ್ಯಕ್ತಪಡಿಸಿದರು. ಕೆಲವೆಡೆ ಅಗತ್ಯ ಸಲಹೆ ಸೂಚನೆ ನೀಡಿದರು. ಮಡಿವಾಳೇಶ್ವರರ ಗುಡಿಯ ಹತ್ತಿರ ರಸ್ತೆ ಅತಿಕ್ರಮಿಸಿ ಬೆಳೆಸಿದ್ದ ಗಿಡಗಳ ತೆರವಿಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದ ಮನೆಯೊಂದರ ಮಾಲಿಕರಿಗೆ ರಸ್ತೆಯ ಮಹತ್ವ ತಿಳಿ ಹೇಳಿ ಗಿಡ ತೆರವಿಗೆ ಮನವೊಲಿಸಿದರು.

ಕೆಲವು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಖುದ್ದು ತಾವೇ ಕಾಮಗಾರಿ ಪರಿಶೀಲಿಸಿ, ಜನರ ಬಾಯಿಂದಲೂ ಕಾಮಗಾರಿ ಕುರಿತು ಮಾಹಿತಿ ಪಡೆದುಕೊಂಡರು. ಈ ವೇಳೆ ಶಾಸಕರು ತಮ್ಮ ಅಭಿವೃದ್ಧಿಯ ಕನಸನ್ನು ನಿವಾಸಿಗಳೊಂದಿಗೆ ಹಂಚಿಕೊಂಡರು. ನಿವಾಸಿಗಳು ಸಹಿತ ಸಲಹೆ ಸೂಚನೆ ನೀಡಿದರು. ಪುರಸಭೆ ಸದಸ್ಯ ಸದಾನಂದ ಮಾಗಿ, ಮುಖ್ಯಾ  ಧಿಕಾರಿ ಗೋಪಾಲ ಕಾಸೆ, ಪ್ರಮುಖರಾದ ಸಿದ್ರಾಮಪ್ಪ ಬಾಣಲದಿನ್ನಿ, ಹನುಮಂತ ಅಂಬಿಗೇರ, ಶಿವಪ್ಪ ಚಿಮ್ಮಲಗಿ, ಬಸಲಿಂಗಪ್ಪ ರಕ್ಕಸಗಿ, ಎಂ.ಜಿ. ಹೊಕ್ರಾಣಿ, ಬಸವಪ್ರಭು ಹಿರೇಮಠ, ರಾಮು ತಂಬೂರಿ, ಎಸ್‌. ಎಸ್‌. ಹುನಗುಂದ, ರುದ್ರಗೌಡ, ಮುತ್ತು, ಪುರಸಭೆ ಆರೋಗ್ಯ ವಿಭಾಗದ ಮಹಾಂತೇಶ ಕಟ್ಟಿಮನಿ ಮತ್ತಿತರರು ಶಾಸಕರ ಜೊತೆ ಇದ್ದರು.

ಟಾಪ್ ನ್ಯೂಸ್

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

Udupi: ವಂಚನೆ ಪ್ರಕರಣ: ಅ.21ಕ್ಕೆ ಜಾಮೀನು ಅರ್ಜಿ ವಿಚಾರಣೆ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.