ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
Team Udayavani, Sep 25, 2024, 6:20 PM IST
ವಿಜಯಪುರ: ಕೇಂದ್ರ ಸರ್ಕಾರದ ಚುನಾವಣಾ ಬಾಂಡ್ ಪ್ರಕರಣದಲ್ಲೂ ಸುಪ್ರೀಂ ಕೋರ್ಟ್ ಟಿಪ್ಪಣೆ ಮಾಡಿದೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾದರೆ, ಚುನಾವಣಾ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರೂ ರಾಜೀನಾಮೆ ಕೊಡಬೇಕಲ್ವಾ ಎಂದು ಬೃಹತ್ ಕೈಗಾರಿಕೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಪ್ರಶ್ನಿಸಿದರು.
ಬುಧವಾರ ಹರಿಯಾಣದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಧಾನಿ ಮೋದಿ ಅವರು ಮುಡಾ ಪ್ರಕರಣ ಮತ್ತು ಸಿಎಂ ಸಿದ್ದರಾಮಯ್ಯನವರ ವಿಷಯ ಪ್ರಸ್ತಾಪಿಸಿದ ಬಗ್ಗೆ ಪ್ರತಿಕ್ರಿಯಿಸಿದ ಎಂ.ಬಿ.ಪಾಟೀಲ್, ಚುನಾವಣಾ ಬಾಂಡ್ ಪ್ರಕರಣದಲ್ಲೂ ಸುಪ್ರೀಂ ಕೋರ್ಟ್ ಇದೇ ರೀತಿ ಟಿಪ್ಪಣೆ ಮಾಡಿದೆ. ಮತ್ತೆ ನೀವು ಯಾವ ರೀತಿ ನಡೆದುಕೊಳ್ಳುತ್ತೀರಿ?. ಈ ವಿಚಾರದಲ್ಲಿ ಪ್ರಧಾನಿ ಮೋದಿಯವರು ಕೂಡ ರಾಜೀನಾಮೆ ಕೊಡಬೇಕಲ್ವಾ?. ರಾಜ್ಯದಲ್ಲಿ ಬಿಜೆಪಿಯವರು ಏನೇನು ಅನಾಹುತ ಮಾಡಿದ್ದಾರೆಂದು ಮೋದಿ ಅವರಿಗೆ ಗೊತ್ತಿಲ್ಲ. ಬಿಜೆಪಿಯ ಎಲ್ಲರೂ ಜಾಮೀನಿನ ಮೇಲಿದ್ದಾರೆ. ನಮ್ಮ ಪ್ರಕರಣದಲ್ಲಿ ಇನ್ನೂ ಪ್ರಾಥಮಿಕ ತನಿಖೆಯೂ ಕೂಡ ಆಗಿಲ್ಲ ಎಂದರು.
ಅಲ್ಲದೇ, ಸಿಎಂ ಸಿದ್ದರಾಮಯ್ಯ ರಾಜಿನಾಮೆಗೆ ಒತ್ತಾಯಿಸಲ್ಲ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ತಾವು ರಾಜೀನಾಮೆ ಕೊಡಬೇಕು ಆಗುತ್ತೆ ಎಂದು ಈ ರೀತಿ ಹೇಳುತ್ತಿದ್ದಾರೆ. ಸಿಎಂ ರಾಜೀನಾಮೆಗೆ ಆಗ್ರಹಿಸುವ ಬಿಜೆಪಿಯವರು ಮೊದಲು ಕುಮಾರಸ್ವಾಮಿ ರಾಜಿನಾಮೆಯನ್ನು ಕೇಳಲಿ. ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ವಿರುದ್ಧ ಪ್ರಾಥಮಿಕ ತನಿಖೆಯಾಗಿದೆ. ಸಿದ್ದರಾಮಯ್ಯ ಅವರದ್ದು ತಪ್ಪು ಏನಿದೆ. ಪ್ರಾಥಮಿಕ ತನಿಖೆಯನ್ನು ನಾವು ಪ್ರಶ್ನೆ ಮಾಡುತ್ತೇವೆ. ಯಾವುದಾದರೂ ದಾಖಲೆಗೆ ಸಿದ್ದರಾಮಯ್ಯನವರ ಸಹಿ ಇದೆಯೇ?, ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ
ಇದನ್ನೂ ಓದಿ: Shivamogga: ಪ್ರಾಯೋಗಿಕ ಸ್ಫೋಟ: ಇಬ್ಬರ ವಿರುದ್ಧ ಎನ್ಐಎ ಚಾರ್ಜ್ಶೀಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalakshmi Case: ಮಹಾಲಕ್ಷ್ಮಿ ಹತ್ಯೆ ಪ್ರಕರಣ… ಶಂಕಿತ ಆರೋಪಿ ಒಡಿಶಾದಲ್ಲಿ ಆತ್ಮಹತ್ಯೆ
ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ
MUDA Case: ಭಂಡತನ ಬಿಟ್ಟು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿ.ವೈ.ವಿಜಯೇಂದ್ರ
Yuva Dasara: ಅ.6 -10 ರವರೆಗೆ ಯಾವೆಲ್ಲಾ ಕಾರ್ಯಕ್ರಮಗಳು ನಡೆಯಲಿವೆ; ಇಲ್ಲಿದೆ ವಿವರ
Hubli: ಈ ಆರೋಪದಿಂದ ಹೊರಬರುವವರೆಗೂ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ವಿ.ಸೋಮಣ್ಣ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.