Vijayapura; ಮಮದಾಪುರ ಅರಣ್ಯಕ್ಕೆ ಸಿದ್ಧೇಶ್ವರಶ್ರೀ ನಾಮಕರಣಕ್ಕೆ ಸಚಿವ ಎಂ.ಬಿ.ಪಾಟೀಲ ಮನವಿ


Team Udayavani, Jul 16, 2024, 7:23 PM IST

ಮಮದಾಪುರ ಅರಣ್ಯಕ್ಕೆ ಸಿದ್ಧೇಶ್ವರಶ್ರೀ ನಾಮಕರಣಕ್ಕೆ ಸಚಿವ ಪಾಟೀಲ ಮನವಿ

ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಅರಣ್ಯ ಪ್ರದೇಶಕ್ಕೆ ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಮೀಸಲು ಅರಣ್ಯ ಪ್ರದೇಶವೆಂದು ಮರುನಾಮಕರಣಕ್ಕೆ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ಎಂ.ಬಿ.ಪಾಟೀಲ, ತಾವುಗಳು ಸಿದ್ದೇಶ್ವರ ಶ್ರೀಗಳ ನೆನಪಿನ ಕಾರ್ಯಕ್ರಮದಲ್ಲಿ ಭಾಗವಹಿಸಿದಾಗ ಶ್ರೀಗಳ ನೆನಪಿನಲ್ಲಿ ಒಂದು ಸಾವಿರ ಎಕರೆ ಅರಣ್ಯ ಪ್ರದೇಶ ಅಭಿವೃದ್ಧಿಪಡಿಸುವ ಘೋಷಣೆ ಮಾಡಿದ್ದೀರಿ ಎಂದು ನೆನಪಿಸಿದ್ದಾರೆ.

ವಿಜಯಪುರ ಜಿಲ್ಲೆಯ ಮಮದಾಪುರ ಗ್ರಾಮದಲ್ಲಿ 624 ಹೆಕ್ಟೆರ್ ಮೀಸಲಿಟ್ಟ ಅರಣ್ಯ ಪ್ರದೇಶವಿದೆ. ನಿಮ್ಮ ಘೋಷಣೆ ಹಾಗೂ ಆಶಯದಂತೆ ಸರ್ಕಾರದ ಮಮದಾಪುರ ಅರಣ್ಯ ಪ್ರದೇಶವನ್ನು ಅಭಿವೃದ್ಧಿ ಮಾಡಲಾಗುತ್ತಿದೆ. ಕಾರಣ ಸದರಿ ಆರಣ್ಯ ಪ್ರದೇಶಕ್ಕೆ ಸಿದ್ಧೇಶ್ವರ ಶ್ರೀಗಳ ಹೆಸರು ಮರು ನಾಮಕರಣ ಮಾಡುವಂತೆ ಕೋರಿದ್ದಾರೆ.

ಆದಿಲ್ ‍ಶಾಹಿ ಸುಲ್ತಾನರ ಕಾಲದ ಇತಿಹಾಸ ಪ್ರಸಿದ್ದ ದೊಡ್ಡ ಕೆರೆ, ಸಣ್ಣಕೆರೆಗಳ ನೀರಿನ ಪಾತ್ರದಲ್ಲಿರುವ ವಿಜಯಪುರ ಜಿಲ್ಲೆಯ ಏಕೈಕ ಕಾಯ್ದಿಟ್ಟ ಮೀಸಲು ಅರಣ್ಯ ಪ್ರದೇಶವಾಗಿದೆ. ಸದರಿ ಪ್ರದೇಶದಲ್ಲಿ 1 ಲಕ್ಷಕ್ಕಿಂತ ಹೆಚ್ಚು ಸಸಿಗಳನ್ನು ನೆಟ್ಟು ಬೆಳೆಸಲಾಗಿದೆ. ವೈವಿಧ್ಯಮಯ ಅರಣ್ಯ ಹಾಗೂ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸಿದ್ದು, ಜೀವ ವೈವಿಧ್ಯ ತಾಣವಾಗುವ ಹಂತದಲ್ಲಿದೆ ಎಂದು ವಿವರಿಸಿದ್ದಾರೆ.

ಅನಂತರಾಗಿ ಉಳಿದ ಸಿದ್ದೇಶ್ವರ ಶ್ರೀಗಳು ತಮ್ಮ ಅಂತಿಮ ಅಭಿವಂದನಾ ಪತ್ರದಲ್ಲಿ ತಿಳಿಸಿದಂತೆ, ತಮಗಾಗಿ ಯಾವುದೇ ಸ್ಮಾರಕಗಳನ್ನು ನಿರ್ಮಿಸದೆ, ನಿಸರ್ಗದಲ್ಲಿಯೇ ಒಂದಾಗಿದ್ದಾರೆ. ಇಂತಹ ಪೂಜ್ಯನೀಯರ ವಿಚಾರಗಳನ್ನು ಅವರ ಆಶಯದಂತೆ ನಡೆದುಕೊಳ್ಳುವುದು ಸರ್ಕಾರದ ಕರ್ತವ್ಯ ಎಂದು ಸಚಿವ ಪಾಟೀಲ ಮನವಿಯಲ್ಲಿ ವಿವರಿಸಿದ್ದಾರೆ.

ಮನವಿ ಸಲ್ಲಿಕೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಕ್ರಮ ಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.