ವರಿಷ್ಠರಿಂದ ದೆಹಲಿಗೆ ಬುಲಾವ್ ಗೂ, ಶಾಸಕ ಪಾಟೀಲ ಪತ್ರಕ್ಕೂ ಸಂಬಂಧವಿಲ್ಲ:ಸಚಿವ ಶಿವಾನಂದ ಪಾಟೀಲ
Team Udayavani, Jul 31, 2023, 12:33 PM IST
ವಿಜಯಪುರ: ಸರ್ಕಾರ ರಚನೆ ಬಳಿಕ ಸಂಪುಟದ ಹಿರಿಯ ಸಚಿವರು, ನಾಯಕರನ್ನು ವರಿಷ್ಠರು ದೆಹಲಿಗೆ ಕರೆದಿದ್ದಾರೆ. ಆದರೆ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲ ಬರೆದ ಪತ್ರಕ್ಕೂ, ಸಚಿವರ ದೆಹಲಿ ಭೇಟಿಗೂ ಸಂಬಂಧವಿಲ್ಲ. ಇದು ಕಾಕತಾಳೀಯ ಅಷ್ಟೇ ಎಂದು ಸಕ್ಕರೆ, ಜವಳಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಪ್ರತಿಕ್ರಿಯಿಸಿದ್ದಾರೆ.
ಸೋಮವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೆಲವು ಶಾಸಕರು ಸಚಿವರ ವಿರುದ್ಧ ಅಸಮಾಧಾನ ಹೊರಹಾಕಿರುವ ಕುರಿತು ಸಮಜಾಯಿಷಿ ನೀಡಿದರು. ಸರ್ಕಾರ ರಚನೆಯಾದ ಬಳಿಕ ಸಚಿವರು ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿಲ್ಲ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದಾಗ ಅವರನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅಲ್ಲದೇ ಕೇರಳ ಮಾಜಿ ಮುಖ್ಯಮಂತ್ರಿ ನಿಧನದ ಹಿನ್ನೆಲೆಯಲ್ಲಿ ಭೇಟಿ ರದ್ದಾಗಿತ್ತು. ಹೀಗಾಗಿ ಇದೀಗ ವರಿಷ್ಠರ ಕರೆಯ ಮೇರೆಗೆ ದೆಹಲಿಗೆ ತೆರಳಿ ಭೇಟಿ ಆಗಲಿದ್ದೇವೆ ಎಂದರು.
ಸಚಿವರ ದೆಹಲಿ ಭೇಟಿಗೂ, ಬಿ.ಆರ್.ಪಾಟೀಲ ಸೇರಿದಂತೆ ಶಾಸಕರು ಬರೆದಿರುವ ಪತ್ರಕ್ಕೂ ಸಂಬಭವಿಲ್ಲ. ಅದು ಕಾಕತಾಳೀಯ ಅಷ್ಟೇ ಎಂದರು.
ಇದನ್ನೂ ಓದಿ:Tamannaah: “ಈ ಸಿನಿಮಾ ಸೋಲುತ್ತದೆ ಎಂದು ಶೂಟಿಂಗ್ ಸಮಯದಲ್ಲೇ ನನಗೆ ಗೊತ್ತಿತ್ತು”: ತಮನ್ನಾ
ಶಾಸಕರಿಗೆ ಅಧಿಕಾರಿಗಳ ಬದಲಾವಣೆ ಸೇರಿದಂತೆ ಕ್ಷೇತ್ರದಲ್ಲಿ ಕೆಲಸಗಳಾಗಬೇಕು ಎಂಬ ಬಯಕೆ ಇರುತ್ತದೆ. ಶೇ.6 ಕ್ಕಿಂತ. ಹೆಚ್ಚು ವರ್ಗಾವಣೆ ಮಾಡುವಂತಿಲ್ಲ ಎಂದು ಮುಖ್ಯಮಂತ್ರಿಗಳೇ ಶಾಸಕಾಂಗ ಸಭೆಯಲ್ಲಿ ಶಾಸಕರಿಗೆ ಮನವರಿಕೆ ಮಾಡಿದ್ದಾರೆ ಎಂದರು.
ಶಾಸಕಾಂಗ ಸಭೆಯಲ್ಲಿ ಶಾಸಕರು ಎತ್ತಿದ ಸಮಸ್ಯೆ ಬಗ್ಗೆ ಪರಿಹಾರ ಕಂಡುಕೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ. ಸಭೆಯಲ್ಲಿ ನಡೆಯುವ ಮುಕ್ತ ಚರ್ಚೆಯನ್ನು ಅಸಮಾಧಾನ ಎನ್ನಲಾಗದು. ಆಂತರಿಕ ಚರ್ಚೆಯನ್ನು ಭಿನ್ಯಮತ ಎಂದೂ ವ್ಯಾಖ್ಯಾನಿಸುವುದು ಸರಿಯಲ್ಲ ಎಂದು ಹೇಳಿದರು.
136 ಶಾಸಕರನ್ನು ಹೊಂದಿರುವ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದ್ದು ಯಾರಾದಾರೂ ಏಕೆ ಸರ್ಕಾರ ಪತನಕ್ಕೆ ಯತ್ನಿಸುತ್ತಾರೆ. ಬಿಜೆಪಿ ಪಕ್ಷದೊಂದಿಗೆ ಕೈಜೋಡಿಸುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರೇ ಹೇಳಿದ್ದು, ಸರ್ಕಾರ ಪತನ ಎಂಬುದು ಕೇವಲ ಊಹಾಪೋಹ ಮಾತ್ರ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.