![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
2014ರ ಗಲಭೆ ಪ್ರಕರಣ| ಶಾಸಕ ಯತ್ನಾಳ ಸೇರಿ 134 ಜನ ಖುಲಾಸೆ
Team Udayavani, Sep 29, 2021, 3:05 PM IST
![vbhjghj](https://www.udayavani.com/wp-content/uploads/2021/09/vbhjghj-620x372.jpg)
ವಿಜಯಪುರ : 2014 ಮೇ 26 ರಂದು ಮೊದಲ ಬಾರಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ದಿನದಂದು ವಿಜಯಪುರ ಪಟ್ಟಣದಲ್ಲಿ ನಡೆದಿದ್ದ ಗಲಭೆ ಪ್ರಕಾರಣದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೇರಿ 134 ಜನರನ್ನು ಬೆಂಗಳೂರಿನ ಜನಪ್ರತಿನಿಧಿ ನ್ಯಾಯಾಲಯ ಖುಲಾಸೆ ಗೊಳಿಸಿದೆ.
ನರೇಂದ್ರ ಮೋದಿ ಅವರು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ದಿನದ ನಿಮಿತ್ತ ವಿಜಯೋತ್ಸವದ ವೇಳೆ ನಡೆದ ಗಲಾಟೆ ಕೋಮು ಗಲಭೆಯಾಗಿ ತಿರುಗಿತ್ತು. ಗಲಭೆ ವೇಳೆ ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದು, ಬೈಕ್ ಹಾಗೂ ಇತರೆ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.ಘಟನೆ ಕುರಿತು ನಗರದ ಗಾಂಧಿಚೌಕ್ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿದ್ದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಸೇರಿದಂತೆ ಎರಡು ಕೋಮಿನ 134 ಜನರ ಮೇಲೆ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ಸುದೀರ್ಘ ಏಳು ವರ್ಷಗಳ ಕಾಲ ವಿಚಾರಣೆ ನಡೆಸಿದ್ದು, ಇಂದು ತೀರ್ಪು ಹೊರಬಿದ್ದಿದೆ. ಕೋವಿಡ್ ಕಾರಣದಿಂದಾಗಿ ಬುಧವಾರ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಲಾಯಿತು.
ವಿಜಯಪುರದ ಎಸ್. ಪಿ. ಕಚೇರಿ ಹಿಂಭಾಗದಲ್ಲಿರುವ ಚಿಂತನ್ ಹಾಲ್ ವಿಶೇಷ ನ್ಯಾಯಾಲಯವಾಗಿ ಪರಿವರ್ತನೆ ಮಾಡಲಾಗಿತ್ತು. ಯತ್ನಾಳ ಸೇರಿದಂತೆ ಇತರೆ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ನ್ಯಾಯಾಲಯದ ತೀರ್ಪು ಸ್ವಾಗತ ಮಾಡಿರೋ ಯತ್ನಾಳ ಸೇರಿದಂತೆ ಇತರರು, ತೀರ್ಪು ತೃಪ್ತಿ ತಂದಿದೆ. ಭವಿಷ್ಯದಲ್ಲಿ ಎಲ್ಲರೂ ಸಹೋದರತೆಯಿಂದ ಇರುತ್ತೇವೆ ಎಂದರು.
ಕೆಲ ಕಿಡಿಗೇಡಿಗಳಿಂದ ನಡೆದ ಗಲಾಟೆಯಲ್ಲಿ ಅಮಾಯಕರು ಕಷ್ಟ ಅನುಭವಿಸುವಂತಾಗಿತ್ತು. ನ್ಯಾಯಾಲಯದ ತೀರ್ಪಿನಿಂದ ಸಂತಸವಾಗಿದೆ ಎಂದು ಉಭಯತರು ಹೇಳಿದರು. ಅಲ್ಲದೇ ಎರಡೂ ಸಮುದಾಯದವರು ಪರಸ್ಪರ ಸಂತಸ ಹಂಚಿಕೊಂಡರು.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.