![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 22, 2022, 4:22 PM IST
ವಿಜಯಪುರ: ಜಲವಿನಾಶಕ್ಕೆ ಕಾರಣವಾಗುವ ರಾಸಾಯನಿಕಯುಕ್ತ ಗಣೇಶ ಮೂರ್ತಿಗೆ ವಿದಾಯ ಹೇಳಿರುವ ಬಸವನಾಡಿನ ವ್ಯಕ್ತಿಯೊಬ್ಬರು, ಪರಿಸರ ಸ್ನೇಹಿ ಮಣ್ಣಿನ ಗಣೇಶನಿಗೆ ಮೊರೆ ಹೋಗಿದ್ದಾರೆ.
ಬಸವರಾಜ ಬೈಚಬಾಳ ಎಂಬವರು “ನನ್ನ ಗಿಡ ನನ್ನ ಭೂಮಿ’ ಸಂಸ್ಥೆ ಕಟ್ಟಿಕೊಂಡು ಕಳೆದ 4 ವರ್ಷಗಳಿಂದ ಜಲ ಸಂರಕ್ಷಣೆಗಾಗಿ ಮನೆ ಮನೆಗೂ ಮಣ್ಣಿನ ಗಣಪ ಅಭಿಯಾನ ಆರಂಭಿಸಿದ್ದಾರೆ.
ಪರಿಸರಕ್ಕೆ ಹಾನಿಕಾರಕ ಆರ್ಶೇನಿಕ್ ಇರುವ ಪಿಒಪಿ ರಾಸಾಯನಿಕದಿಂದ ಒಂದೆಡೆ ಭೂಮಿ, ನೀರು ಮಾಲಿನ್ಯ ಆಗುವುದನ್ನು ಕಂಡಿದ್ದ ಬಸವರಾಜ ಅವರಿಗೆ ಪಿಒಪಿ ಮಿಶ್ರಿತ ನೀರು ಮನುಕುಲಕ್ಕೆ ಮಾತ್ರವಲ್ಲ ಜಲಚರಕ್ಕೂ ಸಂಚಕಾರ ಎಂಬುದರ ಮನವರಿಕೆ ಆಗಿತ್ತು. ಹೀಗಾಗಿ ಗಣೇಶೋತ್ಸವ ದಲ್ಲಿ ರಾಸಾಯನಿಕದ ಗಣೇಶ ಮೂರ್ತಿಗಳ ತಯಾರಿ, ಮಾರಾಟ, ಬಳಕೆ ವಿರುದ್ಧ 60-70 ಸ್ನೇಹಿತರ ತಂಡ ಕಟ್ಟಿಕೊಂಡು ಜಾಗೃತಿಗೆ ಮುಂದಾಗಿದ್ದಾರೆ.
ಹೀಗೆ ಆರಂಭಿಸಿದ ಅಭಿಯಾನ ಜಾಗೃತಿ ವಿಜಯಪುರ ನಗರದ ಹೊರತಾಗಿ ಜಿಲ್ಲೆಯ ಪ್ರಮುಖ ತಾಲೂಕು ಕೇಂದ್ರಗಳಿಗೂ ಹಬ್ಬಿದೆ. ಪರಿಣಾಮ ಕಳೆದ ಮೂರು ವರ್ಷಗಳಲ್ಲಿ ಸುಮಾರು 22 ಸಾವಿರ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸುವ ಮೂಲಕ ಜಲ ಮಾಲಿನ್ಯ ತಡೆಯಲು ಮುಂದಾಗಿದ್ದಾರೆ. ಅಲ್ಲದೇ ಗ್ರಾಮೀಣ ಪ್ರದೇಶದಲ್ಲಿ ಕೆರೆಗಳು ಹಾಗೂ ನೈಸರ್ಗಿಕ ಜಲಮೂಲಗಳ ಸಂರಕ್ಷಣೆ ಜಾಗೃತಿಯಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.