Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Team Udayavani, Oct 24, 2024, 1:21 PM IST
ಮುದ್ದೇಬಿಹಾಳ: ಭಾರೀ ಕ್ರೇನ್ ನ ಚಕ್ರ ಹರಿದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ನಾಲತವಾಡ ಹತ್ತಿರ ಹೊಂಡಾ ಶೋರೂಮ್ ಬಳಿ ಮುದ್ದೇಬಿಹಾಳ ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಗುರುವಾರ (ಅ.24) ನಡೆದಿದೆ.
ಮೃತನನ್ನು ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕು ನಾಗರಹಾಳ ಗ್ರಾಮದ ಶಿವಪುತ್ರಪ್ಪ ಭಜಂತ್ರಿ (48) ಎಂದು ಗುರುತಿಸಲಾಗಿದೆ.
ಭಜಂತ್ರಿ ಬೈಕ್ ಮೇಲೆ ಹೊರಟಿದ್ದಾಗ ಎದುರಿನಿಂದ ಬಂದ ಕ್ರೇನ್ ನ ಮುಂದಿನ ಚಕ್ರ ಬಡಿದಿದೆ. ಆಯತಪ್ಪಿ ನೆಲಕ್ಕೆ ಬಿದ್ದ ಆತನ ದೇಹದ ಮೇಲೆ ಕ್ರೇನ್ ನ ಮಧ್ಯದ ಚಕ್ರಗಳು ಹರಿದು ಈ ದುರಂತ ಸಂಭವಿಸಿದೆ.
ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈ ಸಂಜಯ್ ತಿಪ್ಪರಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ರೇಂಜರ್ ಸ್ವಿಂಗ್ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್ನಲ್ಲಿ ಸೆರೆ
Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ
Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ
Vijayapura: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಕೇಸ್ ದಾಖಲು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
MUST WATCH
ಹೊಸ ಸೇರ್ಪಡೆ
UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು
India: ಮತ್ತೆ ಏರ್ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್ ಬೆದರಿಕೆ ಕರೆ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
Salaar 2: ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ -2ʼ ಶೂಟಿಂಗ್ ಆರಂಭ?
Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.