ಪಾಕೆಟ್‌ ಮನಿಯಲ್ಲಿ ಪೌಷ್ಟಿಕಾಂಶ ಆಹಾರ ವಿತರಣೆ

ಶಾಸಕ ಎ.ಎಸ್‌.ಪಾಟೀಲ (ನಡಹಳ್ಳಿ) ಅವರ ಮಕ್ಕಳಿಂದ ಸಾಮಾಜಿಕ ಕಾರ್ಯ ಮಕ್ಕಳ ಕಾರ್ಯಕ್ಕೆ ದಂಪತಿ ಮೆಚ್ಚುಗೆ

Team Udayavani, May 18, 2020, 11:15 AM IST

18-May-02

ಮುದ್ದೇಬಿಹಾಳ: ಕಿತ್ತೂರು ಚನ್ನಮ್ಮ ವಸತಿ ಶಾಲೆಯಲ್ಲಿ ಸಾಂಸ್ಥಿಕ ಕ್ವಾರೆಂಟೈನ್‌ಗೊಳಗಾದ ಕಾರ್ಮಿಕರನ್ನುದ್ದೇಶಿಸಿ ಶಾಸಕ ನಡಹಳ್ಳಿ ಮಾತನಾಡಿದರು

ಮುದ್ದೇಬಿಹಾಳ: ಶಾಸಕ ಎ.ಎಸ್‌.ಪಾಟೀಲ (ನಡಹಳ್ಳಿ) ಅವರ ಮಕ್ಕಳು ತಾವು ಉಳಿತಾಯ ಮಾಡಿದ್ದ ಅಂದಾಜು 8 ಲಕ್ಷ ರೂ. ಪಾಕೆಟ್‌
ಮನಿಯಿಂದ ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿರುವ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಒದಗಿಸಲು ಬೆಂಗಳೂರಿನಿಂದ ಕಳುಹಿಸಿರುವ ಪೌಷ್ಠಿಕ ಆಹಾರ ಸಾಮಗ್ರಿ ಮತ್ತು ದಿನಬಳಕೆ ಅವಶ್ಯಕ ವಸ್ತುಗಳ ಕಿಟ್‌ ವಿತರಣೆಗೆ ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ, ಅವರ ಪತ್ನಿ ಮಹಾದೇವಿ ಅವರು ರವಿವಾರ ಸಂಜೆ ಚಾಲನೆ ನೀಡಿದರು.

ಜಮ್ಮಲದಿನ್ನಿ ಗ್ರಾಮದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರೆಂಟೈನ್‌ ಗೊಳಗಾಗಿರುವ ಕೊಪ್ಪತಾಂಡಾ, ಮುಂದೂರತಾಂಡಾ, ಗೆದ್ದಲಮರಿತಾಂಡಾ, ಕೋಳೂರುತಾಂಡಾ, ಬಿದರಕುಂದಿ, ಮುದ್ದೇಬಿಹಾಳ ವ್ಯಾಪ್ತಿಯ 165 ವಲಸೆ ಕಾರ್ಮಿಕರಿಗೆ ದಿನಬಳಕೆಯ ಟೂತ್‌ಪೇಸ್ಟ್‌, ಟೂತ್‌ಬ್ರಶ್‌, ಕೈ ತೊಳೆಯಲು, ಮೈ ತೊಳೆಯಲು ಮತ್ತು ಬಟ್ಟೆ ತೊಳೆಯಲು ಸಾಬುನು, 45 ಮಕ್ಕಳಿಗೆ, 6 ಗರ್ಭಿಣಿಯರಿಗೆ 15 ದಿನಕ್ಕಾಗುವಷ್ಟು ನಂದಿನಿ ಗುಡ್‌ಲೈಫ್‌ ಟೆಟ್ರಾ ಪ್ಯಾಕೇಟ್‌ನ ಹಾಲು, ಬಿಸ್ಕತ್‌, ಚಾಕೋಲೆಟ್‌, ಬ್ರೆಡ್‌, ಬನ್‌ ಮುಂತಾದ ಸಾಮಗ್ರಿ ಇರುವ ವಿಶೇಷ ಕಿಟ್‌ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ನಡಹಳ್ಳಿ ಅವರ ಧರ್ಮಪತ್ನಿ ಮಹಾದೇವಿ, ನಮ್ಮ ಮಕ್ಕಳು ಅವರ ತಂದೆಯ ದಾಸೋಹ ಕಾರ್ಯವನ್ನು ಕಂಡು ತಾವೂ ಏನಾದರೂ ಸಹಾಯ ಮಾಡಬೇಕು ಎಂದು ಯೋಚಿಸಿ ಅವರ ಪಾಕೆಟ್‌ ಮನಿ ಹಣವನ್ನು ಈ ಪುಣ್ಯ ಕಾರ್ಯಕ್ಕೆ ವಿನಿಯೋಗಿಸಿದ್ದು ಸಂತಸ ಸಂಗತಿ. ಸುಮಾರು 8 ಲಕ್ಷ ರೂಗಳನ್ನು ಒಟ್ಟುಗೂಡಿಸಿ, ತಾವೇ ಯೋಜನೆ ರೂಪಿಸಿ ಈ ಸಾಮಗ್ರಿಗಳನ್ನು ಕೊಡುವಂತೆ ನಮಗೆ ಕೇಳಿಕೊಂಡಿದ್ದರು. ಮಕ್ಕಳ ಆಸೆಯಂತೆ ನಾವಿಂದು ಬಡ ಮಕ್ಕಳಿಗೆ ಪೌಷ್ಠಿಕಾಂಶಯುಕ್ತ, ದಿನಬಳಕೆಯ ವಸ್ತುಗಳನ್ನು ವಿತರಣೆ ಮಾಡಿದ್ದೇವೆ. ಮುದ್ದೇಬಿಹಾಳ, ತಾಳಿಕೋಟೆ ಎರಡೂ ತಾಲೂಕಿನ 30 ಸಾಂಸ್ಥಿಕ ಕ್ವಾರೆಂಟೈನ್‌ ಕೇಂದ್ರಗಳಲ್ಲಿರುವ ಎಲ್ಲರಿಗೂ ಈ ವಿಶೇಷ ಕಿಟ್‌ಗಳನ್ನು ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಸಾಂಸ್ಥಿಕ ಕ್ವಾರೆಂಟೈನ್‌ನಲ್ಲಿರುವ ಎಲ್ಲರಿಗೂ ಎರಡು ವಾರಕ್ಕಾಗುವಷ್ಟು ಜೋಳದ ರೊಟ್ಟಿ, ಆಯುರ್ವೇದ ಪದ್ಧತಿಯಲ್ಲಿ ತಯಾರಿಸಿದ ಚಟ್ನಿಯನ್ನು ನಮ್ಮ ಕುಟುಂಬದಿಂದಲೇ ವಿತರಿಸಲಾಗುತ್ತದೆ. ಸರ್ಕಾರ ಕೊಡುತ್ತಿರುವ ಊಟದ ಜತೆಗೆ ನಮ್ಮಿಂದಾದ ಸೇವೆಯನ್ನೂ ಮಾಡಲು ಮುಂದಾಗಿದ್ದೇವೆ ಎಂದು ಮಹಾದೇವಿ ಪಾಟೀಲ ಹೇಳಿದರು.

ಶಾಸಕ ಎ.ಎಸ್‌ ಪಾಟೀಲ(ನಡಹಳ್ಳಿ) ಮಾತನಾಡಿ, ಪ್ರತಿಯೊಬ್ಬ ವಲಸಿಗರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಯಾರೂ ಕೇಂದ್ರ ಬಿಟ್ಟು ಹೊರಗೆ ಬರಬಾರದು. ಅಧಿಕಾರಿಗಳು, ಕೇಂದ್ರದ ಉಸ್ತುವಾರಿ ಸಿಬ್ಬಂದಿಗಳು ಸೂಚಿಸುವ ನಿಯಮಗಳನ್ನು ಚಾಚು ತಪ್ಪದೆ ಪಾಲಿಸಬೇಕು. ಕ್ವಾರೆಂಟೈನ್‌ ಅವಧಿ ಮುಗಿದ ಮೇಲೆ ಎಲ್ಲರಿಗೂ 15-20 ದಿನಗಳಿಗಾಗುವಷ್ಟು ಆಹಾರ ಸಾಮಗ್ರಿ ಕಿಟ್‌ ಕೊಟ್ಟು ಬಸ್‌ಗಳ ಮೂಲಕ ಗೌರವಯುತವಾಗಿ ಅವರವರ ಮನೆಗಳಿಗೆ ಬೀಳ್ಕೊಡಲಾಗುವುದು ಎಂದು ಹೇಳಿದರು.

ತಹಸೀಲ್ದಾರ್‌ ಜಿ.ಎಸ್‌.ಮಳಗಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ, ಪಿಎಸ್‌ಐ ಮಲ್ಲಪ್ಪ ಮಡ್ಡಿ, ವಸಂತ ಬಂಡಗಾರ, ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಬಸಮ್ಮ ಸಿದರಡ್ಡಿ, ಕ್ವಾರೆಂಟೈನ್‌ ಕೇಂದ್ರದ ಉಸ್ತುವಾರಿ ಅಧಿಕಾರಿಗಳು ಇದ್ದರು. ಈ ವೇಳೆ ಶಾಲೆಯ ಮೈದಾನದಲ್ಲಿ ಎಲ್ಲರನ್ನೂ ಸಾಮಾಜಿಕ ಅಂತರ ಕಾಯ್ದುಕೊಂಡು ಸಾಲಾಗಿ ಕೂಡ್ರಿಸಿ ಕಿಟ್‌ ಹಂಚಿಕೆ ಮಾಡಿದ್ದು ವಿಶೇಷವಾಗಿತ್ತು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.