![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 30, 2019, 11:23 AM IST
ವಿಜಯಪುರ: ಸೊಸೆಯನ್ನು ಕರೆದುಕೊಂಡು ಹೋಗಲು ಬಂದಿದ್ದ ಗಂಡನ ಮನೆಯವರು ಸೊಸೆಯನ್ನು ಹಲ್ಲೆ ಮಾಡಿದ ಘಟನೆಯಿಂದ ಕುಪಿತಗೊಂಡ ಗ್ರಾಮಸ್ತರು 9 ಜನರನ್ನು ಹಗ್ಗದಿಂದ ಕಟ್ಟಿ ಥಳಿಸಿದ ಘಟನೆ ಮುದ್ದೇಬಿಹಾಳ ತಾಲೂಕಿನಲ್ಲಿ ಜರುಗಿದೆ.
ಮುದ್ದೇಬಿಹಾಳ ತಾಲೂಕಿನ ಆಲಕೊಪ್ಪ ಗ್ರಾಮದಲ್ಲಿನ ತವರು ಮನೆಯಲ್ಲಿದ್ದ ಸೊಸೆಯ ಮನೆಗೆ ಬಂದಿದ್ದ ಮೂವರು ಮಹಿಳೆಯರು ಹಾಗೂ ಆರು ಜನ ಪುರುಷರನ್ನು ಹಗ್ಗದಿಂದ ಕೈ-ಕಾಲು ಕಟ್ಡಿ ಮನಬಂದಂತೆ ಥಳಿಸಿದ್ದಾರೆ.
ಗಂಡನೊಂದಿಗೆ ಜಗಳ ಮಾಡಿಕೊಂಡಿದ್ದ ಕಮಲವ್ವ ವಡ್ಡರ ಎಂಬ ಮಹಿಳೆ ಆಲಕೊಪ್ಪ ಗ್ರಾಮದ ತವರು ಮನೆಗೆ ಬಂದಿದ್ದಳು. ಸೊಸೆಯನ್ನು ಕರೆಯಲು ಬಂದರೂ ಗಂಡನ ಮನೆಗೆ ಬರುವಲ್ಲಿ ತಕರಾರು ಮಾಡಿದಳೆಂದು ಸೊಸೆಯನ್ನು ಆಕೆಯ ತವರು ಮನೆಯಲ್ಲೇ ಗಂಡನ ಮನೆಯವರು ಥಳಿಸಿದ್ದಾರೆ. ಇದರಿಂದ ಕೆರಳಿದ ಗ್ರಾಮಸ್ತರು ಗಂಡನ ಮನೆಯ ಎಲ್ಲರನ್ನೂ ಕಟ್ಟಿ ಹಾಕಿ ಥಳಿಸಿದ್ದಾರೆ.
ಥಳಿತಕ್ಕೊಳಗಾದವರನ್ನು ಬಸವನಬಾಗೇವಾಡಿ ತಾಲೂಕಿನ ಬಿದ್ನಾಳ, ಚಡಚಣ ತಾಲೂಕಿನ ಕಪನಿಂಬರಗಿ, ಇಂಡಿ ತಾಲೂಕಿನ ಭುಯ್ಯಾರ ಗ್ರಾಮದವರೆಂದು ತಿಳಿದು ಬಂದಿದೆ.
ಸುದ್ದಿ ತಿಳಿದು ಸ್ಥಳಕ್ಕೆ ತೆರಳಿದ ಮುದ್ದೇಬಿಹಾಳ ಪೊಲೀಸರು ಗಾಯಗಳುಗಳನ್ನು ತಕ್ಷಣ ಮುದ್ದೇಬಿಹಾಳ ತಾಲೂಕಾ ಆಸ್ಪತ್ರೆಗೆ ರವಾನೆಸಿದ್ದಾರೆ.
ಹಲ್ಲೆ ಮಾಡಿದ ಹಾಗೂ ಹಲ್ಲೆಗೊಳಗಾದವರ ವಿವರ ಲಭ್ಯವಾಗಿಲ್ಲ.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.