ದೇಶದ ಯುವಶಕ್ತಿಗೆ ನೇತಾಜಿ ಸ್ಫೂರ್ತಿ: ಪೂಜಾರಿ


Team Udayavani, Feb 10, 2022, 5:43 PM IST

29netaji

ವಿಜಯಪುರ: ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಬ್ರಿಟಿಷರ ವಶದಲ್ಲಿ ಭಾರತದ ಕೆಲ ಭೂ ಪ್ರದೇಶ ವಶಪಡಿಸಿಕೊಂಡು ಭಾರತದ ಮೊದಲ ಪ್ರಧಾನಿಯಾಗಿದ್ದ ಸುಭಾಷ್‌ ಚಂದ್ರ ಬೋಸ್‌ ಅವರು ದೇಶದ ಇಂದಿನ ಯುವಶಕ್ತಿಗೆ ಸ್ಫೂರ್ತಿಯಾಗಿದ್ದಾರೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಸಂಗಮೇಶ ಪೂಜಾರಿ ಹೇಳಿದರು.

ಬುಧವಾರ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗ ಮತ್ತು ಭಾರತಿಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸುಭಾಷ್‌ ಚಂದ್ರ ಬೋಸ್‌ ಅವರ 125ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ನೇತಾಜಿ ಕಂಡ ಕನಸಿನ ಭಾರತದ ಕುರಿತು ಅವರು ಉಪನ್ಯಾಸ ನೀಡಿದರು.

ತಮ್ಮಲ್ಲಿದ್ದ ಅಪ್ರತಿಮ ನಾಯಕತ್ವ ಗುಣ ಹಾಗೂ ದೇಶದ ಜನರಲ್ಲಿ ಚೈತನ್ಯ ತುಂಬುವ ಶಕ್ತಿ ಹೊಂದಿದ್ದ ಕಾರಣಕ್ಕೆ ನೇತಾಜಿ ಎಂಬ ಅಭಿದಾನ ಪಡೆದಿದ್ದರು ಎಂದು ಬಣ್ಣಿಸಿದ ಅವರು, ನೇತಾಜಿ ಭಾರತ ಕಂಡ ಅಪ್ರತಿಮ ಸ್ವಾತಂತ್ರ್ಯ ಸೇನಾನಿ. ಅವರ ಕ್ರಾಂತಿಕಾರಿ ನಿಲುವುಗಳು, ಕೆಚ್ಚೆದೆಯ ಹೋರಾಟಗಳು ಇಂದಿನ ಯುವ ಪೀಳಿಗೆಗೆ ಮಾದರಿ ಎಂದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಎಂ.ಎನ್‌. ಚೋಗರಸ್ತಿ ಮಾತನಾಡಿ, ದೇಶದ ಅಪ್ರತಿಮ ನಾಯಕ ಸುಭಾಷ್‌ ಚಂದ್ರ ಬೋಸ್‌ ಅವರು ಮಾಹಾನ್‌ ದೇಶಭಕ್ತರಾಗಿದ್ದರು. ದೇಶದ ಏಕತೆಗಾಗಿ ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲೇ ಭಾರತೀಯರಿಗೆ ಜೈ ಹಿಂದ್‌ ಘೋಷಣೆ ನೀಡಿ ದೇಶಪ್ರೇಮದ ಕೆಚ್ಚು ಮೂಡಿಸಿದ್ದರು ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಬಿ.ಕೆ. ತುಳಸಿಮಾಲ ಮಾತನಾಡಿ, ವಿಚಾರಗಳು ವ್ಯಕ್ತಿತ್ವವನ್ನು ನಿರ್ಮಿಸುತ್ತವೆ. ಎಲ್ಲ ಪ್ರಕಾರದ ಸ್ವಾತಂತ್ರ್ಯಕ್ಕಾಗಿ ಶ್ರಮಿಸಿದ ಸುಭಾಷ್‌ ಚಂದ್ರ ಬೋಸ್‌ ಅವರ ವಿಚಾರಗಳನ್ನು ಎಲ್ಲ ವಿದ್ಯಾರ್ಥಿಗಳು ಅರ್ಥೈಸಿಕೊಂಡು ಜೀವನದಲ್ಲಿ ಮುನ್ನಡೆ ಸಾಧಿ ಸಬೇಕು ಎಂದರು.

ಸಂಗಮೇಶ ಮೇತ್ರಿ ಮಾತನಾಡಿದರು. ಸಮಾಜ ವಿಜ್ಞಾನ ನಿಕಾಯದ ಡೀನ್‌ ಡಿ.ಎಂ. ಮದರಿ, ನಾಮದೇವ ಗೌಡ, ರಾಜು ಬಾಗಲಕೋಟ, ಆನಂದ ಕುಲಕರ್ಣಿ, ಹನುಮಂತಯ್ಯ ಪೂಜಾರಿ, ಗುಲಾಬ ರಾಠೊಡ ಸೇರಿದಂತೆ ಇತರರು ಇದ್ದರು.

ರಾಜಕುಮಾರ ಮಾಲಿಪಾಟೀಲ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ರಮೇಶ ಸೋನಕಾಂಬಳೆ ಸ್ವಾಗತಿಸಿದರು. ಸತೀಶ ಪಾಟೀಲ ಪರಿಚಯಿಸಿದರು. ಅಶ್ವಿ‌ನಿ ನಿರೂಪಿಸಿದರು. ಯಲ್ಲಪ್ಪ ಕೊಂಬಿನೂರ ವಂದಿಸಿದರು.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

arrested

Vijayapura; ಮಹಿಳೆಯ ಕೊ*ಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

Vijayapura: ಮಹಿಳೆಯ ಕೊಲೆಗೈದ ಅಪರಾಧಿಗೆ ಜೀವಾವಧಿ ಶಿಕ್ಷೆ, 86 ಸಾವಿರ ರೂ. ದಂಡ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.