ನೆಗೆಟಿವ್‌ ವರದಿ ಇದ್ದರೆ ಮಾತ್ರ ಜಿಲ್ಲೆಗೆ ಪ್ರವೇಶ


Team Udayavani, Apr 26, 2021, 8:38 PM IST

ಜಕಹಗ್ಗ

ವಿಜಯಪುರ : ವಿಜಯಪುರ ಜಿಲ್ಲೆ ಮಹಾರಾಷ್ಟ್ರ ರಾಜ್ಯದ ಗಡಿಗೆ ಹೊಂದಿಕೊಂಡಿದೆ. ಸೋಂಕಿನ ಪ್ರಮಾಣ ಹೆಚ್ಚಾಗಿರುವ ಆ ರಾಜ್ಯದಿಂದ ವಿಜಯಪುರ ಜಿಲ್ಲೆಗೆ ಬರುವರಿಗೆ ಕಡ್ಡಾಯವಾಗಿ ಕೋವಿಡ್‌ ನೆಗೆಟಿವ್‌ ವರದಿ ದಾಖಲೆ ತರುವಂತೆ ತಾಕೀತು ಮಾಡಲಾಗಿದೆ ಎಂದು ಕೋವಿಡ್‌ ನಿಯಂತ್ರಣ ಚಟುವಟಿಕೆಯ ವಿಜಯಪುರ ಉಸ್ತುವಾರಿ ಅಧಿಕಾರಿಯಾಗಿರುವ ಎಡಿಜಿಪಿ ಭಾಸ್ಕರರಾವ್‌ ಹೇಳಿದರು.

ರವಿವಾರ ವಿಜಯಪುರ ಜಿಲ್ಲೆಯ ಕೋವಿಡ್‌ ಪರಿಸ್ಥಿತಿ ನಿರ್ವಹಣೆಯಲ್ಲಿ ಪೊಲೀಸರ ಸ್ಥಿತಿಗತಿ ಕುರಿತು ಜಿಲ್ಲೆಯ ಪೊಲೀಸ್‌ ಅ ಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ರಾಜ್ಯದಿಂದ ಬರುವರ ಮೇಲೆ ನಿಗಾ ಇಡಲು ಗಡಿಯಲ್ಲಿ ತೆರೆದಿರುವ ಚೆಕ್‌ಪೋಸ್‌ rಗಳಲ್ಲಿ ನೆಗೆಟಿವ್‌ ವರದಿಗಳಿದ್ದವರಿಗೆ ಮಾತ್ರ ಜಿಲ್ಲೆಯ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಈ ಕ್ರಮ ಸಮರ್ಪಕವಾಗಿ ನಿರ್ವಹಣೆ ಆಗುತ್ತಿದೆ ಎಂದರು.

ಕೋವಿಡ್‌ ಪರಿಸ್ಥಿತಿ ನಿರ್ವಹಣೆ ಸಂದರ್ಭದಲ್ಲಿ ಪೊಲೀಸರು ಕರ್ತವ್ಯದಲ್ಲಿದ್ದಾಗಲೂ ಕೋವಿಡ್‌ ಸೋಂಕು ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕರ್ತವ್ಯ ನಿರ್ವಹಿಸಬೇಕಿದೆ. ಜೀವ-ಜೀವನ ಎರಡು ರಕ್ಷಣೆ ಆಗಬೇಕಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸರಳವಾದ ಕರ್ಫ್ಯೂ ಜಾರಿ ಮಾಡಿದೆ, ಜನತೆ ಸರ್ಕಾರದ ನಿಯಮ ಪಾಲಿಸಿ ಕೋವಿಡ್‌ ರೋಗದಿಂದ ರಕ್ಷಿಸಿಕೊಳ್ಳಲು ಜನರೂ ಕರ್ತವ್ಯ ನಿರತ ಪೊಲೀಸರೊಂದಿಗೆ ಸಹಕರಿಸಬೇಕು ಎಂದರು. ರಾಜ್ಯದಲ್ಲಿ ಸರಳವಾದ ಕರ್ಫ್ಯೂ ನಿಯಮ ಜಾರಿಯಲ್ಲಿದೆ. ಪ್ರತಿ ಜಿಲ್ಲೆಯ ವ್ಯವಸ್ಥೆಯ ಉಸ್ತುವಾರಿಗೆ ಸರ್ಕಾರ ಹಿರಿಯ ಅ ಧಿಕಾರಿಗಳನ್ನು ನೇಮಿಸಿದೆ. ನನಗೆ ಈ ಭಾಗದ ಉಸ್ತುವಾರಿ ನೀಡಿದ್ದು, ಹುಬ್ಬಳ್ಳಿ, ಬೆಳಗಾವಿ ಜಿಲ್ಲೆಗಳ ಭೇಟಿ ಬಳಿಕ ವಿಜಯಪುರ ಜಿಲ್ಲೆಯ ಪರಿಸ್ಥಿತಿ ಅವಲೋಕನ ನಡೆಸಿದ್ದೇನೆ. ನಾಳೆ ಬಾಗಲಕೋಟೆ ಜಿಲ್ಲೆಗೆ ಭೇಟಿ ಬಳಿಕ ಈ ಭಾಗದ ಪರಿಸ್ಥಿತಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸುವುದಾಗಿ ಹೇಳಿದರು. ಕೋವಿಡ್‌ ಸೋಂಕು ನಿಗ್ರಹಕ್ಕಾಗಿ ಕರ್ಫ್ಯೂ ಜಾರಿಗೆ ತಂದಿದ್ದರೂ ಜನರ ಹಿತದೃಷ್ಟಿಯಿಂದ ಅನೇಕ ಚಟುವಟಿಕೆಗಳಿಗೆ ವಿನಾಯ್ತಿ ನೀಡಲಾಗಿದೆ.

ಮತ್ತೂಂದೆಡೆ ಎರಡನೇ ಅಲೆಯ ವೇಗ ತಗ್ಗಿಸಿ ಸೋಂಕಿನ ಕೊಂಡಿ ಕಳಚುವ ಕುರಿತು ಸರ್ಕಾರದೊಂದಿಗೆ ಸಹಕರಿಸಲು ಜನರೂ ಮುಂದಾಗಿದ್ದಾರೆ. ಕರ್ಫ್ಯೂ ಸಂದರ್ಭದಲ್ಲಿ ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಬಂದ್‌ ಮಾಡಿ ಮನೆಗಳಲ್ಲಿ ಉಳಿದಿದ್ದಾರೆ. ಜನರು ಕೂಡ ನಿಯಮ ಪಾಲಿಸುವ ಮೂಲಕ ಸಹಕರಿಸುತ್ತಿದ್ದಾರೆ. ಒಂದೊಮ್ಮೆ ಲಾಕ್‌ಡೌನ್‌ ಮಾಡಿದ್ದರೆ ಆರ್ಥಿಕ ಪರಿಸ್ಥಿತಿ ಮೇಲೆ ಗಂಭೀರ ಪರಿಣಾಮ ಬೀರಿ, ಜನ ಜೀವನ ಕಷ್ಟವಾಗಲಿತ್ತು ಎಂದು ಸರ್ಕಾರದ ನಡೆಯನ್ನು ಸಮರ್ಥಿಸಿದರು. ವಾರಾಂತ್ಯದ ಕರ್ಫ್ಯೂ ಸಂದರ್ಭದಲ್ಲಿಯೂ ಸಹ ಜನರ ಮೇಲೆ ಯಾವುದೇ ರೀತಿ ಬಲ ಪ್ರಯೋಗ, ಪೊಲೀಸ್‌ ಬಲವಂತದ ಕ್ರಮಗಳು ನಡೆಯುತ್ತಿಲ್ಲ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪೊಲೀಸರು ಮನವೊಲಿಸುವ ಕೆಲಸ ಮಾಡುವಲ್ಲಿ ಯಶಸ್ವಿಯಾಗಿದ್ದರಿಂದ ವ್ಯಾಪಾರಿಗಳೇ ಸ್ವಯಂ ಪ್ರೇರಿತವಾಗಿ ವಹಿವಾಟು ಬಂದ್‌ ಮಾಡಿದ್ದು, ಜನರೂ ಅನಗತ್ಯವಾಗಿ ಮನೆಗಳಿಂದ ಹೊರ ಬರದೇ ಸಹಕರಿಸಲು ಕಾರಣವಾಗಿದೆ ಎಂದರು. ಈಗಾಗಲೇ ಹಳ್ಳಿಗಳಲ್ಲಿಯೂ ಕೊರೊನಾ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುತ್ತಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಗ್ರಾಮೀಣ ಭಾಗದಲ್ಲಿ ಇನ್ನಷ್ಟೂ ಜಾಗೃತಿ ಕಾರ್ಯಕ್ರಮ ಸಂಘಟಿಸಲಾಗುವುದು ಎಂದು ವಿವರಿಸಿದರು. ಎಸ್ಪಿ ಅನುಪಮ್‌ ಅಗರವಾಲ್‌, ಎಎಸ್‌ಪಿ ಡಾ| ಶ್ರೀರಾಮ ಅರಸಿದ್ಧಿ ಇದ್ದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.