ಕಚೇರಿ ಸುಗಮ ಕೆಲಸಕೆ ಹೊಸ ತಂತ್ರಜ್ಞಾನ-ಕೌಶಲ್ಯ ಸಹಕಾರಿ

ವಿವಿಧ ರೀತಿಯ ಕೆಲಸಗಳಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು

Team Udayavani, Mar 25, 2021, 7:06 PM IST

kacheri

ವಿಜಯಪುರ: ಪ್ರಸ್ತುತ ವಿಜ್ಞಾನ-ತಂತ್ರಜ್ಞಾನದ ಯುಗದಲ್ಲಿ ಕಚೇರಿ ಕೆಲಸಗಳು ಕಾಗದ ರಹಿತ ಸಂವಹನದ ಮೂಲಕ ನಡೆಯುತ್ತಿದೆ. ಕಾರಣ ಕಂಪ್ಯೂಟರ್‌ ಕಲಿಕೆ, ಜ್ಞಾನಾರ್ಜನೆ ಇಂದಿನ ಅಗತ್ಯವಾಗಿದೆ. ಹೊಸ ತಂತ್ರಜ್ಞಾನ-ಕೌಶಲ್ಯಗಳನ್ನು ಅಳವಡಿಸಿಕೊಂಡರೆ ಕಚೇರಿ ಕೆಲಸ ಸುಗಮದ ಜೊತೆಗೆ ಸಮಯದ ಉಳಿತಾಯವೂ ಆಗುತ್ತದೆ ಎಂದು ಬಿಎಲ್‌ಡಿಇ ಸಂಸ್ಥೆಯ ಚಾರ್ಟ್‌ರ್ಡ್‌ ಅಕೌಂಟಂಟ್‌ ರಾಜೀವ್‌ ನಾಯಕ ಹೇಳಿದರು.

ನಗರದ ಎ.ಎಸ್‌. ಪಾಟೀಲ ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಹಾಗೂ ಐಕ್ಯೂಎಸಿ ಸಹಯೋಗದಲ್ಲಿ ಬೋಧಕೇತರ ಸಿಬ್ಬಂದಿಯವರಿಗೆ ಹಮ್ಮಿಕೊಂಡಿದ್ದ ಕೌಶಲ್ಯದ ಜೊತೆಗೆ ಹೊಸ ತಂತ್ರಜ್ಞಾನದ ಅಳವಡಿಕೆ ಎಂಬ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಬೋಧಕೇತರ ಸಿಬ್ಬಂದಿ ಹೊಸ ಹೊಸ ತಂತ್ರಜ್ಞಾನ ಅರಿಯುವುದು ಇಂದಿನ ಜರೂರಾಗಿದೆ. ಶೀಘ್ರ ಲಿಪಿಯನ್ನು ಕಲಿತರೆ ಹೆಚ್ಚು ಉಪಯೋಗಕ್ಕೆ ಬರಲಿದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿದ್ದ ಪದವಿ ಪೂರ್ವ ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಜೆ.ಎಸ್‌. ಪೂಜೇರಿ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳು ಸುಗಮವಾಗಿ
ಸಾಗಲು ಬೋಧಕರ ಕಾರ್ಯ ಎಷ್ಟು ಮುಖ್ಯವೋ ಅಷ್ಟೆ ಜವಾಬ್ದಾರಿ ಬೋಧಕೇತರ ಸಿಬ್ಬಂದಿ ಮೇಲಿದೆ. ಸಮಯ ಪಾಲನೆ ಮತ್ತು ಕರ್ತವ್ಯದ ಪ್ರಜ್ಞೆ ಇರಬೇಕು.
ಎಷ್ಟೇ ಒತ್ತಡವಿದ್ದರೂ ತಾಳ್ಮೆ, ಸಹನೆಯಿಂದ ವರ್ತಿಸಿದರೆ ಸಂಸ್ಥೆ, ಮಹಾವಿದ್ಯಾಲಯಕ್ಕೆ ಒಳ್ಳೆ ಹೆಸರು ಬರುತ್ತದೆ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜೊತೆ ಉತ್ತಮ ಸಂಬಂಧವಿಟ್ಟುಕೊಳ್ಳುವುದು ಬೋಧಕೇತರ ಸಿಬ್ಬಂದಿಗೆ ಅವಶ್ಯ ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ| ವಿ.ಎಸ್‌. ಬಗಲಿ ಮಾತನಾಡಿ, ಯಾವುದೇ ಶಿಕ್ಷಣ ಸಂಸ್ಥೆಯ ಅಭಿವೃದ್ಧಿಯಲ್ಲಿ ಬೋಧಕೇತರ ಸಿಬ್ಬಂದಿ ಪಾತ್ರವೂ ಬಹಳ ಮುಖ್ಯವಾಗಿದ್ದು ಕರ್ತವ್ಯ ಪ್ರಜ್ಞೆಗೆ ಮಹತ್ವ ಕೊಡಬೇಕು. ಸರಕಾರ, ವಿವಿಧ ಇಲಾಖೆ ಹೊರಡಿಸಿದ ಆದೇಶ-ಸುತ್ತೋಲೆಗಳನ್ನು ಗಮನದಲ್ಲಿ  ಇರಿಸಿಕೊಂಡು ಕೆಸಿಎಸ್‌ಆರ್‌ ನಿಯಮದಂತೆ ಕಾರ್ಯ ನಿರ್ವಹಿಸಬೇಕು. ಸೇವಾ ಪುಸ್ತಕ, ಹಣಕಾಸು, ದಾಖಲಾತಿ, ವರ್ಗಾವಣೆ, ಅಂಕಪಟ್ಟಿ ನಿರ್ವಹಣೆ, ಅನುದಾನ ಬಳಕೆ ಹೀಗೆ ವಿವಿಧ ರೀತಿಯ ಕೆಲಸಗಳಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಕಿವಿಮಾತು ಹೇಳಿದರು.

ಶಶಿಧರ ಹೇರಲಗಿ, ರಾಕೇಶ ಪಾಟೀಲ, ಎಸ್‌.ಪಿ. ಪಾಟೀಲ, ಡಿ.ಎಚ್‌. ಸಾವಳಗಿ, ವಿ.ವೈ. ಸಕ್ರಿ ಸೇರಿದಂತೆ ವಿವಿಧ ಕಾಲೇಜುಗಳ ಬೋಧಕೇತರ ಸಿಬ್ಬಂದಿ
ಇದ್ದರು. ಐಕ್ಯೂಎಸಿ ಸಂಯೋಜಕಿ ಡಾ| ಬಿ.ಆರ್‌. ಹಿರೇಮಠ, ಸಂಘಟನಾ ಕಾರ್ಯದರ್ಶಿ ಪ್ರೊ| ಕೆ.ಐ. ಹಿರೇಮಠ ವೇದಿಕೆಯಲ್ಲಿದ್ದರು. ಸುಭಾಷ್‌ಚಂದ್ರ ಕನ್ನೂರ ಪರಿಚಯಿಸಿದರು. ಸುಜಾತಾ ಜಾಧವ ಪ್ರಾರ್ಥಿಸಿದರು. ಕಾರ್ಯಕ್ರಮ ಆಯೋಜಕರಾದ ಕಾಲೇಜಿನ ಅಧಿಧೀಕ್ಷಕ ಎಸ್‌.ಪಿ. ಕನ್ನೂರ ಪ್ರಾಸ್ತಾವಿಕ ಮಾತನಾಡಿದರು. ರೇಣುಕಾ ಬಿರಾದಾರ ಸ್ವಾಗತಿಸಿದರು. ಎಸ್‌.ಎಸ್‌. ಗೋನಾಳ, ಪವಿತ್ರಾ ಜಾಧವ ನಿರೂಪಿಸಿದರು. ರವಿ ಮನಗೂಳಿ ವಂದಿಸಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.