ಸಿಂದಗಿಯಲ್ಲಿ ಸಾವಯವ ಕೃಷಿ ಕ್ರಾಂತಿ ! ಸಂಸ್ಥೆಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ


Team Udayavani, Oct 1, 2020, 5:18 PM IST

ಸಿಂದಗಿಯಲ್ಲಿ ಸಾವಯವ ಕೃಷಿ ಕ್ರಾಂತಿ ! ಸಂಸ್ಥೆಯ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ

ಸಿಂದಗಿ: ಅತಿಯಾದ ರಸಗೊಬ್ಬರ, ಕೀಟನಾಶಕ ಮತ್ತು ನೀರು ಬಳಸುವ ಕೃಷಿಯಿಂದ ರೈತರು ಕೈ ಸುಟ್ಟಿಕೊಂಡಿದ್ದೇ ಹೆಚ್ಚು. ಇಂತಹ ಕೃಷಿಯಿಂದ ಉತ್ಪಾದನಾ ವೆಚ್ಚ ಹೆಚ್ಚಾಗುವ ಜೊತೆಗೆ ಭೂಮಿಯ ಸತ್ವವೂ ಸಾಯುತ್ತದೆ. ಆದರೆ ಸಾವಯವ ಕೃಷಿ ಕೈಗೊಂಡು ಹೆಚ್ಚಿನ ಆದಾಯ ಗಳಿಸುವ  ಜೊತೆಗೆ ಭೂಮಿಯ ಫಲವತ್ತತೆಯನ್ನೂ ಕಾಪಾಡಿಕೊಳ್ಳಲು ಸಾಧ್ಯ ಎಂಬುದನ್ನು ಇಲ್ಲಿನ ಯುವಕನೊಬ್ಬ ತೋರಿಸಿಕೊಟ್ಟಿದ್ದಾನೆ.

ರೈತರಿಗೆ ಸಾವಯವ ಕೃಷಿ ಬಗ್ಗೆ ಜಾಗೃತಿ ಮೂಡಿಸಬೇಕು. ವಿಷಮುಕ್ತ ಆಹಾರ ಉತ್ಪಾದಿಸಬೇಕು ಎಂಬ ಮಹತ್ತರ ಗುರಿ ಇಟ್ಟುಕೊಂಡ ತಾಲೂಕಿನ ಹರನಾಳ ಗ್ರಾಮದ ಬಿಎಸ್ಸಿ (ಕೃಷಿ) ಪದವಿ ಪಡೆದ ಯುವಕ ಮಹಾದೇವ ಶಿವಶಂಕ್ರಪ್ಪ ಅಂಬಲಿ 2006ರಲ್ಲಿ ಪರಮಾನಂದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸ್ಥಾಪಿಸುವ ಮೂಲಕ ಈ ಭಾಗದ ರೈತರಿಗೆ ಸಾವಯವ ಕೃಷಿ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ.

ಹಳ್ಳಿಯಲ್ಲಿ ಸ್ಥಾಪಿತವಾದ ಪರಮಾನಂದ ಗ್ರಾಮೀಣಾಭಿವೃದ್ಧಿ ಸಂಸ್ಥೆ ತನ್ನ 14 ವರ್ಷದ ಶ್ರಮದ ಫಲವಾಗಿ ಇಂದು ವಿಜಯಪುರ, ಬಾಗಲಕೋಟೆ, ಯಾದಗಿರಿ, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಕಾರ್ಯ ನಿರ್ವಹಿಸಿ ಸಾವಯವ ಕೃಷಿ ಕ್ರಾಂತಿ ಮಾಡುತ್ತಿದೆ. ಸಂಸ್ಥೆ ಈಗ ವಿಜಯಪುರ ಜಿಲ್ಲೆ ಸಾವಯವ ಕೃಷಿ ಪ್ರಾಂತಿಯ ಒಕ್ಕೂಟವಾಗಿ ಬೆಳೆದಿದೆ.

ಇದನ್ನೂ ಓದಿ :ಶಾಲೆ- ಕಾಲೇಜು ಆರಂಭದ ಬಗ್ಗೆ ಶೀಘ್ರವೇ ಸ್ಪಷ್ಟ ಮಾಹಿತಿ ಎಂದ ಡಿಸಿಎಂ ಅಶ್ವತ್ಥನಾರಾಯಣ

ಪರಮಾನಂದ ಗ್ರಾಮೀಣಾಭಿವೃದ್ಧಿ ಸಂಸ್ಥೆ ಪ್ರಾರಂಭದ ದಿನದಲ್ಲಿ ತಾಲೂಕಿನಲ್ಲಿ 250 ಎಕರೆ ಕೃಷಿ ಭೂಮಿಯನ್ನು ಸಾವಯವ ಕೃಷಿಗೆ ಅಳವಡಿಸಿತು. ಇಂದು ಸಾವಿರಾರು ಹೆಕ್ಟೇರ್‌ ಭೂಮಿ ಸಾವಯವ ಕೃಷಿ ಭೂಮಿಯಾಗಿ ಪರಿವರ್ತನೆಯಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳಿಂದ ಸಾಕಷ್ಟು ಪ್ರಶಸ್ತಿ ಪಡೆದು ಸಾಧನೆಯತ್ತ ಹೆಜ್ಜೆಯಿಡುತ್ತಿದೆ. ಯುವಕ ಮಹಾದೇವ ಅಂಬಲಿ ಸರಕಾರದ ವಿವಿಧ ಯೋಜನೆಗಳನ್ನು ಸಂಸ್ಥೆ ಮೂಲಕ ಸಾವಿರಾರು ರೈತರಿಗೆ ಎರೆಹುಳು ಗೊಬ್ಬರ ಘಟಕ, ಜೀವಸಾರ ಘಟಕ, ಜೀವಾಂಮೃತ ಘಟಕ ನಿರ್ಮಿಸಿಕೊಟ್ಟಿದ್ದಾರೆ.

ಲಾಕ್‌ಡೌನ್‌ ವೇಳೆ ಸಾವಯವ ಕೃಷಿಯಲ್ಲಿ ಬೆಳೆದ ಹಣ್ಣು ಮತ್ತು ತರಕಾರಿ ಮನೆ ಮನೆಗೆ ತಲುಪಿಸುವ ಕಾರ್ಯ ಮಾಡಿದ್ದಾರೆ. ಸಿರಿಧಾನ್ಯ ಕೃಷಿಯನ್ನು ಉತ್ತೇಜಿಸುವ ಸಲುವಾಗಿ ಪಟ್ಟಣದ ಕೈಗಾರಿಕಾ ಪ್ರದೇಶದಲ್ಲಿ ವಿಜಯಪುರ ಜಿಲ್ಲೆ ಸಾವಯವ ಕೃಷಿ ಪ್ರಾಂತಿಯ ಒಕ್ಕೂಟ ಅಡಿಯಲ್ಲಿ ಮರುಳಾರಾಧ್ಯ ಶಿವಾಚಾರ್ಯರ ಸಿರಿಧಾನ್ಯ ಸಂಸ್ಕರಣಾ ಘಟಕ ಸ್ಥಾಪಿಸಲಾಗಿದೆ.

– ರಮೇಶ ಪೂಜಾರ

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.