ವಿಡಿಯೋ… ಲಿಫ್ಟ್‌ನೊಳಗೆ ಶಾಲಾ ಬಾಲಕನಿಗೆ ಕಚ್ಚಿದ ಸಾಕು ನಾಯಿ


Team Udayavani, Nov 16, 2022, 3:24 PM IST

ವಿಡಿಯೋ… ಲಿಫ್ಟ್‌ನೊಳಗೆ ಶಾಲಾ ಬಾಲಕನಿಗೆ ಕಚ್ಚಿದ ಸಾಕು ನಾಯಿ

ನವದೆಹಲಿ : ಇತ್ತೀಚಿನ ದಿನಗಳಲ್ಲಿ ನಾಯಿಗಳ ದಾಳಿ ಪ್ರಕರಣಗಳು ಹೆಚ್ಚುತ್ತಿರುವುದು ಕಂಡು ಬರುತ್ತಿದೆ ಅದರಂತೆ ನೋಯ್ಡಾದಲ್ಲಿ ನಡೆದ ಘಟನೆ ಜನರನ್ನು ಬೆಚ್ಚಿ ಬೀಳಿಸುವಂತಿದೆ, ಇಲ್ಲಿನ ವಸತಿ ಸಮುಚ್ಚಯದಲ್ಲಿ ಶಾಲಾ ಬಾಲಕನಿಗೆ ಸಾಕು ನಾಯಿಯೊಂದು ಕಚ್ಚಿದ ಪ್ರಕರಣ ನಡೆದಿದೆ.

ಶಾಲೆ ಮುಗಿಸಿ ಮನೆಗೆ ಬರುತ್ತಿದ್ದ ಬಾಲಕ ತನ್ನ ತಾಯಿಯ ಜೊತೆ ವಸತಿ ಸಮುಚ್ಚಯದ ಲಿಫ್ಟ್ ನಲ್ಲಿ ನಿಂತಿದ್ದ ವೇಳೆ ಸಾಕು ನಾಯಿಯೊಂದು ಕಚ್ಚಿ ಗಾಯಗೊಳಿಸಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದ್ದು ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ವಿಡಿಯೋ ಸೆರೆಯಾಗಿದೆ.

ಸಾಮಾನ್ಯವಾಗಿ ಬೀದಿ ನಾಯಿಗಳಿಂದ ಮಕ್ಕಳಿಗೆ ಅಪಾಯವಾಗುತ್ತಿತ್ತು, ಆದರೆ ಈಗ ಸಾಕು ನಾಯಿಗಳು ಕೂಡ ಮಕ್ಕಳ ಮೇಲೆ ದಾಳಿ ಮಾಡಲು ಆರಂಭಿಸಿವೆ. ಅಪಾರ್ಟ್ಮೆಂಟ್ಗಳಲ್ಲಿ ವಾಸಿಸುವ ಸಾಕು ನಾಯಿಗಳು ವಿಶೇಷವಾಗಿ ಹೆಚ್ಚು ಆಕ್ರಮಣಕಾರಿ ಆಗುತ್ತಿವೆ. ಇಂತಹ ಪ್ರಕರಣಗಳು ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರವಾಗಿ ಬರುತ್ತಿದ್ದು, ಸಾಕು ನಾಯಿಯು ಮಾಲೀಕರ ಮುಂದೆ ಮಕ್ಕಳು ಮತ್ತು ಹಿರಿಯರ ಮೇಲೆ ದಾಳಿ ಮಾಡಿದೆ. ಲಿಫ್ಟ್‌ನಲ್ಲೂ ಇಂತಹ ಹಲವು ಘಟನೆಗಳು ನಡೆದಿವೆ.

ಈ ಪ್ರಕರಣ ಬಿಸ್ರಖ್ ಪ್ರದೇಶದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು. ನೋಯ್ಡಾ ಪ್ರದೇಶದ ಲಾ ರೆಸಿಡೆನ್ಸಿಯ ವಸತಿ ಸಮುಚ್ಚಯದ ಲಿಫ್ಟ್‌ನಲ್ಲಿ ಈ ಘಟನೆ ನಡೆದಿದೆ. ತನ್ನ ತಾಯಿ ಜೊತೆಗೆ ಲಿಫ್ಟ್ ನೊಳಗೆ ಪ್ರವೇಶಿಸಿದ ವೇಳೆ ನಾಯಿಯನ್ನು ಅದರ ಮಾಲಕ ಲಿಫ್ಟ್ ನೊಳಗೆ ತಂದಿದ್ದಾರೆ ಈ ವೇಳೆ ಬಾಲಕನ ಕೈಗೆ ನಾಯಿ ಕಚ್ಚಿ ಗಾಯಗೊಳಿಸಿದೆ, ಕೂಡಲೇ ಆಸ್ಪತ್ರೆಗೆ ಬಾಲಕನನ್ನು ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ ಇದುವರೆಗೆ ಒಟ್ಟು ನಾಲ್ಕು ಚುಚ್ಚುಮದ್ದುಗಳನ್ನು ನೀಡಲಾಗಿದೆ ಎಂದು ಪೋಷಕರು ಹೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ನಾಯಿ ಕಚ್ಚುವ ಅನೇಕ ಘಟನೆಗಳು ನಡೆಯುತ್ತಿವೆ. ಅಲ್ಲದೆ ಇತ್ತೀಚೆಗೆ ನಗರದಲ್ಲಿ ನಾಯಿ ಕಡಿತದಿಂದ 8 ತಿಂಗಳ ಮಗು ಸಾವನ್ನಪ್ಪಿತ್ತು. ಗಮನಾರ್ಹವಾದ ವಿಚಾರ ಏನೆಂದರೆ ಸಾಕು ನಾಯಿಗಳ ಕಾಟ ಹೆಚ್ಚುತ್ತಿರುವ ಬಗ್ಗೆ ನೋಯ್ಡಾದಲ್ಲಿ ಹೊಸ ನಾಯಿ ನೀತಿಯನ್ನು ಜಾರಿಗೆ ತರಲಾಗಿದೆ. ಅದರಂತೆ ಸಾಕುಪ್ರಾಣಿಗಳನ್ನು ಸಾಕಲು ನೋಯ್ಡಾ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಈಗ ಕಡ್ಡಾಯವಾಗಿದೆ. ಇದಲ್ಲದೆ ಸಾಕು ನಾಯಿ ಕಚ್ಚಿದರೆ ಅದರ ಮಾಲೀಕರಿಂದ ಚಿಕಿತ್ಸಾ ವೆಚ್ಚ ಹಾಗೂ 10 ಸಾವಿರ ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ :ಕೋಲಾರ ಕಡೆ ಮುಖಮಾಡಿದ ಸಿದ್ದುಗೆ ಸಿಕ್ಕಿದ್ದೇ ಶ್ರೀಪಾದ : ಯತ್ನಾಳ್

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.