ದ್ರಾಕ್ಷಿ ಬೆಳೆಗೆ ಕಾಡುತ್ತಿದೆ ಮೋಡ ಕವಿದ ವಾತಾವರಣ: ದೌಣಿ, ಬೂದಿ, ಗೊನೆ ಕೊಳೆ ರೋಗದ ಆತಂಕ


Team Udayavani, Nov 18, 2021, 2:49 PM IST

ದ್ರಾಕ್ಷಿ ಬೆಳೆಗೆ ಕಾಡುತ್ತಿದೆ ಮೋಡ ಕವಿದ ವಾತಾವರಣ: ದೌಣಿ, ಬೂದಿ, ಗೊನೆ ಕೊಳೆ ರೋಗದ ಆತಂಕ

ವಿಜಯಪುರ: ರಾಜ್ಯದಲ್ಲಿ ದ್ರಾಕ್ಷಿ ಕಣಜ ಎಂದು ಕರೆಸಿಕೊಂಡಿರುವ ವಿಜಯಪುರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರು ಮೋಡ ಕವಿದ ವಾತಾರಣದಿಂದ ಕಂಗಾಲಾಗಿದ್ದಾರೆ. ಮೋಡ ಕವಿದ ವಾತಾವರಣದಿಂದ ದ್ರಾಕ್ಷಿ ಬೆಳೆ ದೌಣಿ ಹಾಗೂ ಬೂದು ರೋಗಕ್ಕೆ ಸಿಲಕಿದ್ದು, ವರ್ಷದ ಅನ್ನ ಕಳೆದುಕೊಳ್ಳುವ ಆತಂಕ ಎದುರಾಗಿದೆ.

ವಿಜಯಪುರ ಜಿಲ್ಲೆಯಲ್ಲಿ 17 ಸಾವಿರ ಹೆಕ್ಟೇರ್ ದ್ರಾಕ್ಷಿ ಬೆಳೆ ಇದ್ದು, ಬಹುತೇಕರು ಚಾಟ್ನಿ (ಫ್ರೂನಿಂಗ್) ಮಾಡಿದ್ದಾರೆ. ಮುಂಚಿತವಾಗಿ ಚಾಟ್ನಿ ಮಾಡಿದ ತೋಟಗಳಲ್ಲಿ ಅದಾಗಲೇ ಹೂಗಳು ಮಾಡಿ, ಕಾಯಿ ಕಟ್ಟುವ ಹಂತದಲ್ಲಿವೆ. ಇಂತ ಸ್ಥಿತಿಯಲ್ಲಿ ಮೋಡ ಕವಿತ ವಾತಾವರಣ ಹಾಗೂ ಮಳೆ ಸುರಿದಲ್ಲಿ ಬೆಳೆಗೆ ವಿವಿಧ ರೋಗಗಳು ಬಾಧಿಸುತ್ತವೆ.

ಕಳೆದ ಹಲವು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣವಿದೆ. ಬೆಳಿಗ್ಗೆ ಮಂಜು ಕವಿದ ವಾತಾವರಣದಿಂದ ತಂಗಾಳಿ ಬೀಸುತ್ತಿದ್ದು, ಮಧ್ಯಾಹ್ನ ಬಿಸಿಲಿನ ತಾಪ ಹೆಚ್ಚುತ್ತಿದೆ. ಕಳೆದ ಎರಡು ದಿನಗಳಿಂದ ಸಂಜೆ ಮೋಡ ತುಂತುರು ಮಳೆ ಸುರಿಯುತ್ತಿದೆ. ಇಂತ ವಾತಾವರಣ ದ್ರಾಕ್ಷಿ ಬೆಳೆ ವಿಷಮವಾಗಿದ್ದು, ದೌಣಿ ರೋಗ ಹಾಗೂ ಬೂದಿ ರೋಗ ಬೇಗನೇ ವ್ಯಾಪಿಸಿ ಹೂ ಹಾಗೂ ಕಾಯಿ ಕಟ್ಟುವ ಹೀಚುಗಳನ್ನು ಮುರುಟುವಂತೆ ಮಾಡುತ್ತದೆ. ಮುರಿಟಿದ ಹೂ-ಹೀಚುಗಳು ಗೊನೆಯಿಂದ ಕಳಚುತ್ತಿವೆ. ಹೆಚ್ಚು ತಂಪು ಕಾಣಿಸಿಕೊಂಡರೆ ಕೊಳೆ ರೋಗ ಕಾಣಿಸಿಕೊಂಡು ಗೊನೆಯೇ ಕಳಚಿ ನೆಲಕ್ಕೆ ಬೀಳುತ್ತವೆ.

ಇದನ್ನೂ ಓದಿ:ಕಾಂಗ್ರೆಸ್‌ನವರನ್ನೇ ಗುರಿಯಾಗಿಟ್ಟುಕೊಂಡು ಸಿದ್ದರಾಮಯ್ಯ ಆರೋಪ: ಶೆಟ್ಟರ್ ಬಾಂಬ್

ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ವಾತಾವರಣದಲ್ಲಿನ ತಂಪು ಪರಿಸ್ಥಿತಿ ದ್ರಾಕ್ಷಿ ಬೆಳೆಗೆ ರೋಗಗಳ ಬಾಧೆ ಆವರಿಸುವಂತೆ ಮಾಡಿದೆ. ಇದರಿಂದ ರೈತರು ಕಂಗಾಲಾಗಿದ್ದು, ಸರ್ಕಾರ ತಮ್ಮ ರಕ್ಷಣೆಗೆ ಬರಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇದರಿಂದ ಎಚ್ಚೆತ್ತಿರುವ ವಿಜಯಪುರ ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಪರಿಸ್ಥಿತಿ ಅಧ್ಯಯನ ನಡೆಸಲು ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯಕ್ಕೆ ಮನವಿ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

“ಹಲವು ದಿನಗಳಿಂದ ಮಂಜು ಕವಿದ ವಾತಾವರಣವಿದ್ದು, ಹಲವು ಕಡೆಗಳಲ್ಲಿ ತುಂತುರು ಮಳೆಯೂ ಬೀಳುತ್ತಿದೆ. ಇದರಿಂದ ದ್ರಾಕ್ಷಿ ಬೆಳೆಗೆ ದೌಣಿ, ಕೊಳೆ ರೋಗ ಸೇರಿದಂತೆ ಹಲವು ರೋಗಗಳು ಬಾಧಿಸುತ್ತಿವೆ. ಇದರಿಂದ ವರ್ಷದ ಬೆಳೆ ಕೈಕೊಟ್ಟರೆ ಲಕ್ಷಾಂತರ ರೂ. ಸಾಲ ಮೈಮೇಲೆ ಬರುತ್ತದೆ” ಎನ್ನುತ್ತಾರೆ ಸೋಮದೇವರಹಟ್ಟಿಯ ಬೆಳೆಗಾರ ರವಿ ಎನ್. ಬಾಗಲಕೋಟ.

“ತಡವಾಗಿ ಚಾಟ್ನಿ ಮಾಡಿದ ತೋಟಗಳಲ್ಲಿ ಈ ದೌಣಿ ರೋಗದ ಭೀತಿ ಕೊಂಚ ಕಡಿಮೆ. ಆದರೆ ಮೊದಲು ಚಾಟ್ನಿ ಮಾಡಿದ ಬಹುತೇಕ ತೋಟಗಳಲ್ಲಿ ಹೂ-ಮಿಡಿಗಾಯಿ ಕಾಣಿಸಿಕೊಂಡಿದ್ದು, ರೋಗಕ್ಕೆ ಸಿಲುಕುತ್ತಿವೆ. ಬಹುತೇಕ ರೈತರು ಮೊದಲೇ ಚಾಟ್ನಿ ಮಾಡಿದ್ದಾರೆ” ಎನ್ನುತ್ತಾರೆ ತಿಕೋಟದ ದ್ರಾಕ್ಷಿ ಬೆಳೆಗಾರ ರಮೇಶ ಕೊಣ್ಣೂರು.

ಈ ಬಗ್ಗೆ ಮಾಹಿತಿ ನೀಡಿರುವ ವಿಜಯಪುರ ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕರಾದ ಎಸ್.ಎಂ.ಬರಗಿಮಠ, “ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಮಂಜು ಹಾಗೂ ಮೋಟ ಕವಿದ ವಾತಾವರಣದಿಂದ ದ್ರಾಕ್ಷಿ ಬೆಳೆಗೆ ವಿವಿಧ ರೋಗಗಳು ಬಾಧಿಸುತ್ತಿವೆ. ರೋಗ ನಿಯಂತ್ರಣಕ್ಕೆ ತುರ್ತು ಕ್ರಮ ಕಐಗೊಳ್ಳಲು ಅಧ್ಯಯನ ನಡೆಸುವಂತೆ ತಜ್ಞರಿಗೆ ಮನವಿ ಮಾಡಲು ಮುಂದಾಗಿದ್ದೇವೆ” ಎಂದಿದ್ದಾರೆ.

ವರದಿ: ಜಿ.ಎಸ್.ಕಮತರ

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.