ರನ್‌ ವೇ ಉನ್ನತೀಕರಣಕ್ಕೆ ಪ್ರಸ್ತಾವನೆ


Team Udayavani, Apr 18, 2021, 8:02 PM IST

ಗಹಜಗ್ಷ

ವಿಜಯಪುರ: ಈಗಾಗಲೇ ನಿರ್ಮಾಣ ಹಂತದಲ್ಲಿರುವ ವಿಜಯಪುರ ವಿಮಾನ ನಿಲ್ದಾಣದಲ್ಲಿರುವ ಮೊದಲ ಹಂತದ ಕಾಮಗಾರಿ ಭರದಿಂದ ಸಾಗಿದ್ದು, ನಿಗದಿಗಿಂತ ಒಂದು ತಿಂಗಳ ಮೊದಲೇ ಕಾಮಗಾರಿ ಮುಗಿಯಲಿದೆ.

ಇದೇ ವೇಳೆ ಸರಕು ಸಾಗಿಸುವ ಬೃಹತ್‌ ವಿಮಾನಗಳು ಇಳಿಯಲು ಅವಕಾಶ ಕಲ್ಪಿಸುವ ರನ್‌ ವೇ ಉನ್ನತೀಕರಣಕ್ಕೆ 90 ಕೋಟಿ ರೂ. ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಮಾಜಿ ಸಚಿವರೂ ಆಗಿರುವ ವಿಜಯಪುರ ಸಂಸದ ರಮೇಶ ಜಿಗಜಿಣಗಿ ಹೇಳಿದರು.

ಶನಿವಾರ ಮದಭಾವಿ-ಬುರಣಾಪುರ ಪ್ರದೇಶದಲ್ಲಿ ಉದ್ದೇಶಿತ ವಿಜಯಪುರ ವಿಮಾನ ನಿಲಾœಣ ಯೋಜನಾ ಪ್ರದೇಶದಲ್ಲಿ ಕಾಮಗಾರಿ ವೀಕ್ಷಣೆ ಬಳಿಕ ಮಾತನಾಡಿದ ಅವರು, ಸದ್ಯ 80ಆರ್‌72 ಮಾದರಿಯಲ್ಲಿ ಕೇವಲ ಪ್ರಯಾಣಿಕರ ಸಣ್ಣ ವಿಮಾನ ಇಳಿಯುವ ವ್ಯವಸ್ಥೆಯ ರನ್‌ವೇ ನಿರ್ಮಿಸಲಾಗುತ್ತಿದೆ.

ಆದರೆ ರಫ್ತು ಗುಣಮಟ್ಟದ ದ್ರಾಕ್ಷಿ, ಲಿಂಬೆ, ದಾಳಿಂಬೆಯಂಥ ತೋಟಗಾರಿಕೆ ಬೆಳೆ ಬೆಳೆಯುವ ವಿಜಯಪುರ ಜಿಲ್ಲೆಯಲ್ಲಿ ರೈತರ ಉತ್ಪನ್ನಗಳು ವಿದೇಶಕ್ಕೆ ರವಾನಿಸಲು ಅವಕಾಶ ಕಲ್ಪಿಸಬೇಕಿದೆ. ಹೀಗಾಗಿ ಸರಕು ಸಾಗಾಣಿಕೆಯ ಬೃಹತ್‌ ಸಾಮರ್ಥ್ಯದ ವಿಮಾನ ಇಳಿಯುವ ವ್ಯವಸ್ಥೆ ಕಲ್ಪಿಸಲು ಯೋಜಿಸಿದೆ ಎಂದರು. ಇದಕ್ಕಾಗಿ 3 ಕಿ.ಮೀ. ಉದ್ದದ ಹಾಗೂ 40 ಮೀಟರ್‌ ಅಗಲದ ರನ್‌ವೇ ಮಾಡಬೇಕಿದೆ. ಒಂದೊಮ್ಮೆ ಇದೀಗ ನಡೆದಿರುವ ಕಾಮಗಾರಿಯಂತೆ 2050 ಮೀಟರ್‌ ಉದ್ದ ಹಾಗೂ 30 ಮೀಟರ್‌ ಅಗಲದ ರನ್‌ವೇ ಮಾಡಿದಲ್ಲಿ ಭವಿಷ್ಯದಲ್ಲಿ ಉನ್ನತೀಕರಣಕ್ಕೆ ಈ ರನ್‌ವೇ ಕಿತ್ತು ಹಾಕಿಯೇ ಉನ್ನತೀಕರಿಸಬೇಕು.

ಇದರಿಂದ ಸರ್ಕಾರಕ್ಕೆ ನೂರಾರು ಕೋಟಿ ರೂ. ನಷ್ಟವಾಗಲಿದೆ. ನಮ್ಮಲ್ಲಿ ಅಗತ್ಯ ಸ್ಥಳ ಇರುವ ಕಾರಣ ಈಗಲೇ ದೊಡ್ಡ ಪ್ರಮಾಣದ ವಿಮಾನ ಇಳಿಯುವ ರನ್‌ವೇ ನಿರ್ಮಿಸುವ ಚಿಂತನೆ ನಡೆದಿದೆ ಎಂದರು. ದೊಡ್ಡ ಗಾತ್ರದ ಸರಕು ವಿಮಾನಗಳ ರನ್‌ವೇ ನಿರ್ಮಾಣಕ್ಕಾಗಿ ಮೂರನೇ ಹಂತದ ಯೋಜನೆ ರೂಪಿಸಿ, ತಾಂತ್ರಿಕ ಸಲಹೆ ನೀಡಿರುವ ಅ ಧಿಕಾರಿಗಳು ಇದಕ್ಕಾಗಿ 90 ಕೋಟಿ ರೂ. ವೆಚ್ಚದ ಅಂದಾಜು ಮಾಡಿದ್ದಾರೆ.

ಈ ಪ್ರಸ್ತಾವನೆ ಸಲ್ಲಿಸಿ ಕೇಂದ್ರ-ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿ ನನ್ನ ಕನಸಿನ ವಿಮಾನ ನಿಲ್ದಾಣ ಯೋಜನೆ ಮಾಡಿಯೇ ತೀರುತ್ತೇನೆ ಎಂದರು. ಈಗಾಗಲೇ 220 ಕೋಟಿ ರೂ. ವೆಚ್ಚದಲ್ಲಿ ಎರಡು ಹಂತದ ಕಾಮವಾರಿ ರೂಪಿಸಿದ್ದು, ಮೊದಲ ಹಂತದಲ್ಲಿ 905 ಕೋಟಿ ರೂ. ಕಾಮಗಾರಿ ಭರದಿಂದ ನಡೆದಿದೆ. ಕಾಮಗಾರಿ ಗುತ್ತಿಗೆ ಪಡೆದಿರುವ ಆಲೂರ ಹಸರಿನ ಗುತ್ತಿಗೆದಾರರು ಹಗಲು-ರಾತ್ರಿ ಎನ್ನದೇ ಕೆಲಸ ಮಾಡುತ್ತಿದ್ದು, 11 ತಿಂಗಳ ಕಾಲಮಿತಿಯ ಕಾಮಗಾರಿ 10 ತಿಂಗಳಲ್ಲೇ ಮುಗಿಸುವ ನಿರೀಕ್ಷೆ ಇದೆ ಎಂದರು. ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹೆಚ್ಚಿನ ಹಣ ನೀಡಿ, ವಿಜಯಪುರ ವಿಮಾನ ನಿಲ್ದಾಣಕ್ಕೆ ಕಡಿಮೆ ಅನುದಾನದ ಕೊಟ್ಟು ತಾರತಮ್ಯ ಮಾಡಿದ್ದಾರೆ ಎಂಬ ವಾದ ಸರಿಯಲ್ಲ.

ಯಾವುದೇ ವ್ಯಕ್ತಿ ಅಧಿಕಾರಕ್ಕೆ ಬಂದಾಗ ತನ್ನ ತವರಿಗೆ ಹೆಚ್ಚಿನ ಆದ್ಯತೆಯ ಪ್ರೀತಿ ತೋರುವುದು ಸಾಮಾನ್ಯ. ಹಾಗಂತ ಇದನ್ನು ಅನ್ಯಾಯ ಮಾಡಿದ್ದಾರೆ ಎನ್ನಲಾದು. ಇಷ್ಟಕ್ಕೂ ಶಿವಮೊಗ್ಗಕ್ಕೂ, ವಿಜಯಪುರಕ್ಕೂ ಹೋಲಿಕೆ ಮಾಡದೇ ನಮಗೂ ಹೆಚ್ಚಿನ ಅನುದಾನ ನೀಡಿ ಎಂದು ಆಗ್ರಹಿಸುವುದು ಸೂಕ್ತ. ನಾನು ಇದನ್ನೇ ಮಾಡಲು ಹೊರಟಿದ್ದೇನೆ ಎಂದು ಸಮರ್ಥಿಸಿದರು. ಮೂಡಾ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರು, ಮಹಾನಗರ ಪಾಲಿಕೆ ಮಾಜಿ ಉಪ ಮೇಯರ್‌ ಘಟಕಾಂಬಳೆ, ಲೋಕೋಪಯೋಗಿ ಎಎ ಬಿ.ಬಿ. ಪಾಟೀಲ, ಬಿಜೆಪಿ ಮಾಧ್ಯಮ ಪ್ರಮುಖ ವಿಜಯ ಜೋಶಿ ಇದ್ದರು.

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.