ಸಿಎಎ ವಿರುದ್ಧ ಹರಿಹಾಯ್ದ ನಾಯಕರು


Team Udayavani, Feb 25, 2020, 12:28 PM IST

vp-tdy-1

ಸಾಂದರ್ಭಿಕ ಚಿತ್ರ

ವಿಜಯಪುರ: ಕೇಂದ್ರ ಸರ್ಕಾರ ಜನ ವಿರೋಧಿ ಪೌರತ್ವ ಕಾನೂನುಗಳನ್ನು ಹಿಂಪಡೆಯುವವರೆಗೆ, ಸರ್ಕಾರ ಬೆದರದ ಹೊರತು, ದೆಹಲಿ ಅಧಿಕಾರಸ್ತರ ಕುರ್ಚಿ ಅಲುಗಾಡದ ಹೊರತು, ಅಧಿಕಾರದಿಂದ ಅವರನ್ನು ಕೆಳಗಿಳಿಸಲು 2024ರವರೆಗೆ ಕಾಯಬೇಕಿಲ್ಲ. ಸಂವಿಧಾನ ಉಳಿಸಿ ಹೋರಾಟವನ್ನು ಗಾಂಧೀಜಿ ಮಾರ್ಗದಲ್ಲಿ, ಡಾ| ಬಿ.ಆರ್‌. ಅಂಬೇಡ್ಕರ್‌ ಅವರ ಸಂವಿಧಾನಾತ್ಮಕ ಹಾದಿಯಲ್ಲೇ ಶಾಂತ ರೀತಿಯಲ್ಲಿ ನಿರಂತರ ಹೋರಾಟ ಮುಂದುವರಿಸೋಣ ಎಂದು ಕೇಂದ್ರದ ಮಾಜಿ ಸಚಿವ ಯಶವಂತ ಸಿನ್ಹಾ ಮನವಿ ಮಾಡಿದರು.

ನಗರದ ಹೊರ ವಲಯದ ಜುಮನಾಳ ಕ್ರಾಸ್‌ ಬಳಿ ಬಿಜಾಪುರ ಜಂಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಸಂವಿಧಾನ ಉಳಿಸಿ ಆಂದೋಲನದಲ್ಲಿ ಮಾತನಾಡಿದ ಅವರು, ಎನ್‌ಪಿಆರ್‌, ಎನ್‌ಆರ್‌ಸಿ ಜಾರಿಯಿಂದ ದೇಶದಲ್ಲಿ ಇನ್ನೂ ಗಂಭೀರ ಸ್ಥಿತಿ ನಿರ್ಮಾಣವಾಗಲಿದೆ ಎಂದು ಎಚ್ಚರಿಸಿದರು. ಈ ಹೋರಾಟದಲ್ಲಿ ಪಾಲ್ಗೊಂಡಿರುವ ನನ್ನನ್ನು ದೆಹಲಿಯಲ್ಲಿ ಅಧಿಕಾರದಲ್ಲಿರುವ ವ್ಯಕ್ತಿಗಳು ಹಾಗೂ ಅವರ ಪಕ್ಷಗಳ

ಮುಖಂಡರು ತುಕ್ಡೆ  ಗ್ಯಾಂಗ್‌ ಸದಸ್ಯ ಖಾನ್‌ ಮಾರ್ಕೆಟ್‌, ಅರ್ಬನ್‌ ನಕ್ಸಲ್‌ ಗುಂಪು ಸೇರಿರುವ ದೇಶದ್ರೋಹಿ ಎನ್ನಲು ಹಿಂಜರಿಯರು. ನನ್ನನ್ನು ಕೂಡ ಪಾಕಿಸ್ತಾನಕ್ಕೆ ಹೋಗು ಎಂದರೂ ಅಚ್ಚರಿ ಇಲ್ಲ. ದೇಶ ದಿವಾಳಿತನದತ್ತ ಹೆಜ್ಜೆ ಹಾಕುತ್ತಿದೆ. ಇದನ್ನು ಮುಚ್ಚಿಕೊಳ್ಳಲು ಹಾಗೂ ಆಡಳಿತ ವೈಫಲ್ಯ ಮರೆ ಮಾಚಲು ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ದೇಶದ ಜನರ ಮನಸ್ಥಿತಿಯ ದಿಕ್ಕನ್ನು ತಪ್ಪಿಸುವ ಕೆಲಸ ನಡೆಸಿದೆ ಎಂದು ವಾಗ್ಧಾಳಿ ನಡೆಸಿದರು.

ಸುಪ್ರೀಂ ಕೋರ್ಟ್‌ ಕೂಡ ಏನೂ ಮಾಡಲಾಗದ ಸ್ಥಿತಿ ನಿರ್ಮಾಣ ಮಾಡಿದ್ದಾರೆ. ಹೀಗಾಗಿ ಈ ಪೌರತ್ವ ಕಾಯ್ದೆಗಳನ್ನು ವಿರೋಧಿಸಿ ನಾನು ಜನೆವರಿ 9ರಿಂದ ಆರಂಭಿಸಿದ್ದ ಯಾತ್ರೆ ಜ. 30ರಂದು ರಾಜಘಾಟದಲ್ಲಿ ಕೊನೆಗೊಂಡಿತ್ತು. 6 ಸಾವಿರ ಕಿಮೀ ನಡೆಸಿದ ನನ್ನ ಯಾತ್ರೆ ಸಂದರ್ಭದಲ್ಲಿ ದೇಶದ ಜನರು ಸಂಪೂರ್ಣ ಸಹಮತ ವ್ಯಕ್ತಪಡಿಸಿ ಸ್ಪಂದಿಸಿದ ರೀತಿ ದೆಹಲಿ ಆಡಳಿತಗಾರರನ್ನು ಎಚ್ಚರಿಸುವ ಕೆಲಸ ಮಾಡಿದೆ ಎಂದರು.

ಭಾರತಕ್ಕೆ ಭೇಟಿ ನೀಡಿರುವ ಅಮೆರಿಕ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ಗೆ ಕೃತಕ ಹಿಂದೂಸ್ಥಾನ ಸೃಷ್ಟಿಸಿ ದರ್ಶನ ಮಾಡಿಸಲಾಗುತ್ತಿದೆ. ಟ್ರಂಪ್‌ ವಿಜಯಪುರ ನಗರಕ್ಕೆ ಆಗಮಿಸಿದ್ದರೆ ಟ್ರಂಪ್‌ ಅವರ ಸ್ನೇಹಿತ (ಮೋದಿ) ಹೇಳುವ ಭಾರತ ಎಲ್ಲಿದೆ ಎನ್ನುವುದು ತಿಳಿಯುತ್ತಿತ್ತು ಎಂದು ಗೇಲಿ ಮಾಡಿದರು. ಸೈಯ್ಯದ್‌ ತನ್ವೀರಪೀರಾ ಹಾಶ್ಮಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿ.ಎಂ.ಇಬ್ರಾಹಿಂ, ರಮೇಶಕುಮಾರ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ ಇದ್ದರು.

ಟಾಪ್ ನ್ಯೂಸ್

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

money

Mangaluru: ಹಣ ದ್ವಿಗುಣ ಆಮಿಷ: 3.70 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.