ಬಸ್‌ ನಿಲುಗಡೆಗೆ ಆಗ್ರಹಿಸಿ ಪ್ರತಿಭಟನೆ


Team Udayavani, Aug 27, 2022, 6:14 PM IST

16-protest

ಮುದ್ದೇಬಿಹಾಳ: ತಾಲೂಕಿನ ವಿಜಯಪುರ ಮಾರ್ಗದಲ್ಲಿ ಬರುವ ಢವಳಗಿ ಗ್ರಾಮದ ಹೊರ ವಲಯದಲ್ಲಿನ ಕೆಇಬಿ ಸ್ಟೇಷನ್‌ ಹತ್ತಿರ ಕಸ್ತೂರಬಾ ಗಾಂಧಿ  ಬಾಲಕಿಯರ ವಸತಿ ನಿಲಯದ ವಿದ್ಯಾರ್ಥಿನಿಯರು ಬಸ್‌ ನಿಲುಗಡೆಗೆ ಆಗ್ರಹಿಸಿ ಶುಕ್ರವಾರ ದಿಢೀರ್‌ನೆ ರಸ್ತೆಯಲ್ಲೇ ಧರಣಿ ಕುಳಿತು ಪ್ರತಿಭಟಿಸಿದ ಪರಿಣಾಮ ಬಹಳ ಹೊತ್ತು ಸಂಚಾರ ಬಂದ್‌ ಆಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣಗೊಂಡಿತ್ತು.

ಕೆಇಬಿ ಸ್ಟೇಷನ್‌ ಹತ್ತಿರ ಇರುವ ಹಾಸ್ಟೆಲ್‌ನಲ್ಲಿ ಢವಳಗಿ, ಮುದ್ದೇಬಿಹಾಳ ಪಟ್ಟಣದ ಪ್ರೌಢಶಾಲೆ, ಕಾಲೇಜುಗಳಿಗೆ ನಿತ್ಯ ಹೋಗಿ ಬರುವ ಹಿಂದುಳಿದ ವರ್ಗದ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡಲಾಗಿದೆ. ಹಾಸ್ಟೆಲ್‌ನಿಂದ ಢವಳಗಿ ಗ್ರಾಮಕ್ಕೆ ಬರಬೇಕೆಂದರೆ ಅಂದಾಜು ಒಂದೂವರೆ ಕಿ.ಮೀ. ದೂರವಿದ್ದು ಬಸ್‌ ಹತ್ತಲು, ಇಳಿಯಲು ನಿತ್ಯವೂ ತೊಂದರೆ ಅನುಭವಿಸುವ ಪರಿಸ್ಥಿತಿ ಇದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ಕೆಇಬಿ ಸ್ಟೇಷನ್‌ ಹತ್ತಿರ ಎಲ್ಲ ರೀತಿಯ ಬಸ್‌ ಗಳ ನಿಲುಗಡೆ ಕಲ್ಪಿಸುವಂತೆ ಹಲವು ಬಾರಿ ಸಾರಿಗೆ ಘಟಕದವರಿಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿರಲಿಲ್ಲ. ಇದು ವಿದ್ಯಾರ್ಥಿನಿ ಯರ ಪ್ರತಿಭಟನೆಗೆ ಕಾರಣವಾಗಿತ್ತು.

ಹಾಸ್ಟೆಲ್‌ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡಲು ಗ್ರಾಪಂ ವತಿಯಿಂದ ಕೆಇಬಿ ಸ್ಟೇಷನ್‌ ಹತ್ತಿರ ಬಸ್‌ ತಂಗುದಾಣ ನಿರ್ಮಿಸಲಾಗಿದೆ. ವಿನಂತಿ ಮೇರೆಗೆ ಬಸ್‌ ನಿಲುಗಡೆ ನಾಮ ಫಲಕವನ್ನೂ ಅಳವಡಿಸಲಾಗಿದೆ. ಇಲ್ಲಿ ಎಲ್ಲ ರೀತಿಯ ಬಸ್‌ ನಿಲುಗಡೆ ಮಾಡುವಂತೆ ಘಟಕ ವ್ಯವಸ್ಥಾಪಕರಿಗೆ ಮನವಿಗಳನ್ನೂ ಕೊಡಲಾಗಿದೆ. ಆದರೂ ಬಸ್‌ಗಳ ಚಾಲಕರು, ನಿರ್ವಾಹಕರ ಬೇಜವಾಬ್ದಾರಿಯಿಂದ ಬಸ್‌ ನಿಲ್ಲಸದೆ ಹಾಗೆಯೇ ಮುಂದೆ ಹೋಗುತ್ತಿರುವುದು ವಿದ್ಯಾರ್ಥಿನಿಯರ ಸಹನೆಯ ಕಟ್ಟೆ ಒಡೆಯುವಂತೆ ಮಾಡಿತ್ತು.

ಪ್ರತಿಭಟನೆ ವಿಷಯ ತಿಳಿದು ಮುದ್ದೇಬಿಹಾಳ ಸಾರಿಗೆ ಘಟಕದಿಂದ ಸ್ಥಳಕ್ಕೆ ಆಗಮಿಸಿದ್ದ ಸಹಾಯಕ ಸಾರಿಗೆ ನಿಯಂತ್ರಕ ಡಿ.ಎನ್‌ .ಬಿಳೇಭಾವಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ವಿದ್ಯಾರ್ಥಿನಿಯರು ತಮ್ಮ ಅಳಲು, ಸಂಕಟವನ್ನು ತೋಡಿಕೊಂಡರು. ನಾವು ಪಾಸ್‌ ಇರುವವರು ಎನ್ನುವ ಕಾರಣಕ್ಕೆ ತಂಗುದಾಣದ ಬಳಿ ಬಸ್‌ ನಿಲ್ಲಿಸುತ್ತಿಲ್ಲ ಎಂದು ದೂರಿದರು. ಸಮಸ್ಯೆಗೆ ಸಂಪೂರ್ಣ ಪರಿಹಾರ ದೊರಕುವವರೆಗೂ ಪ್ರತಿಭಟನೆ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತರು.

ನಮ್ಮ ಘಟಕದ ಎಲ್ಲ ನಿರ್ವಾಹಕರು, ಚಾಲಕರ ಚಾರ್ಟ್‌ಸೀಟ್‌ ಮೇಲೆ ಢವಳಗಿ ಕೆಇಬಿ ಹತ್ತಿರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಸ್‌ ಸ್ಟಾಪ್‌ ಮಾಡಬೇಕು ಎಂದು ಸೂಚಿಸಿದ್ದೇವೆ. ವಿಜಯಪುರ ಘಟಕದ ಬಸ್‌ಗಳಿಗೂ ಮಾಹಿತಿ ನೀಡುತ್ತೇವೆ. ಇನ್ನು ಮುಂದೆ ಯಾವ ಬಸ್‌ ಸ್ಟಾಪ್‌ ಮಾಡಲ್ಲವೋ ಆ ಬಸ್‌ ನಂಬರ್‌ ನಮಗೆ ತಿಳಿಸಿದರೆ ಆ ನಿರ್ವಾಹಕ, ಚಾಲಕರ ಮೇಲೆ ಕ್ರಮ ತೆಗೆದುಕೊಳ್ಳುತ್ತೆವೆ ಎಂದು ಬಿಳೇಭಾವಿಯವರು ವಿದ್ಯಾರ್ಥಿನಿಯರಿಗೆ ವಾಗ್ಧಾನ ಮಾತಿ ತಮ್ಮನ್ನು ಸಂಪರ್ಕಿಸಲು ತಮ್ಮ ಮೊಬೈಲ್‌ ನಂಬರ್‌ ನೀಡಿ ಪ್ರತಿಭಟನೆ ಕೈ ಬಿಡುವಂತೆ ಮನವಿ ಮಾಡಿದರು. ಇದಕ್ಕೆ ವಿದ್ಯಾರ್ಥಿನಿಯರು ಸ್ಪಂ ದಿಸಿ ಧರಣಿ ಕೈಬಿಟ್ಟರು.

ಟಾಪ್ ನ್ಯೂಸ್

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

2-muddebihal

Muddebihal: ನಿಂತಿದ್ದ ಕ್ಯಾಂಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.