ನೀರಿಗಾಗಿ ಮನಗೂಳಿ-ಬಿಜ್ಜಳ ಹೆದ್ದಾರಿ ತಡೆದು ಪ್ರತಿಭಟನೆ


Team Udayavani, Jan 14, 2022, 2:58 PM IST

18protest

ಬಸವನಬಾಗೇವಾಡಿ: ಕಾನ್ಯಾಳ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಗುರುವಾರ ಪಟ್ಟಣದಲ್ಲಿ ಮನಗೂಳಿ-ಬಿಜ್ಜಳ ರಾಜ್ಯ ಹೆದ್ದಾರಿ ತಡೆದು ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕಣಕಾಲ ಗ್ರಾಪಂ ವ್ಯಾಪ್ತಿಯ ಕಾನ್ಯಾಳ ಗ್ರಾಮಸ್ಥರಿಗೆ ಕುಡಿವ ನೀರು ಪೂರೈಸುವಂತೆ ಒತ್ತಾಯಿಸಿ ಕರವೇ ನೇತೃತ್ವದಲ್ಲಿ ಗ್ರಾಮಸ್ಥರು ಬೆಳಗ್ಗೆ ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟನೆ ನಡೆಸಿ ನಂತರ ಮಧ್ಯಾಹ್ನ ಬಸವೇಶ್ವರ ವೃತ್ತದಲ್ಲಿ ಕೆಲ ಹೊತ್ತು ರಸ್ತೆ ತಡೆ ನಡೆಸಿದರು.

ಖಾಲಿ ಕೊಡ ಹೊತ್ತುಕೊಂಡು ಮಹಿಳೆಯರು ಬಸವೇಶ್ವರ ವೃತ್ತದಿಂದ ತಾಪಂ ಕಚೇರಿವರೆಗೆ ಪ್ರತಿಭಟನೆ ನಡೆಸಿ ಕಚೇರಿ ಎದುರಿನ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿದರು.

ಕರವೇ ಜಿಲ್ಲಾ ಯುವ ಘಟಕದ ಅಧ್ಯಕ್ಷ ಅಶೋಕ ಹಾರಿವಾಳ ಮಾತನಾಡಿ, ವ್ಯಕ್ತಿಯೊಬ್ಬರು ಕಾನ್ಯಾಳ ಗ್ರಾಮಕ್ಕೆ ಪೂರೈಸುವ ಕುಡಿವ ನೀರಿನ ಕೊಳವೆಬಾವಿ ಬಂದ್‌ ಮಾಡಿದ್ದು, ಆ ವ್ಯಕ್ತಿ ವಿರುದ್ಧ ಕ್ರಮ ಜರುಗಿಸಿ ಸಾರ್ವಜನಿಕರಿಗೆ ನೀರು ಪೂರೈಸಬೇಕೆಂದು ಹಲವಾರು ದಿನಗಳಿಂದ ಹೇಳಿದರೂ ತಾಪಂ ಹಾಗೂ ಗ್ರಾಪಂ ಅಧಿ ಕಾರಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ತಕ್ಷಣ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಿ ನೀರು ಪೂರೈಸಬೇಕು. ನಿರ್ಲಕ್ಷ್ಯ ವಹಿಸಿದರೆ ಮುಂದಾಗುವ ಅನಾಹುತಕ್ಕೆ ಅಧಿಕಾರಿಗಳೇ ಹೊಣೆ ಎಂದು ಎಚ್ಚರಿಕೆ ನೀಡಿದರು.

ಮೇಲಾಧಿಕಾರಿಗಳು ಸ್ಥಳಕ್ಕೆ ಬಂದು ಸಮಸ್ಯೆ ಪರಿಹರಿಸುವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ಗ್ರಾಮಸ್ಥರು ತಾಪಂ ಕಚೇರಿ ಎದುರು ಸಂಜೆವರೆಗೂ ಧರಣಿ ನಡೆಸಿದರು.

ಈ ವೇಳೆ ಗ್ರಾಮಸ್ಥರಾದ ಮಾದೇವಿ ಯರಝರಿ, ಲಕ್ಕವ್ವ ಮೇಲಿನಮನಿ, ಕಾಂತವ್ವ ನಾಟಿಕಾರ, ಸುವರ್ಣ ಮೇಲಿನಮನಿ, ಅಲಾಬಿ ಗುಂಡ್ನಾಳ, ಜನ್ನತಬಿ ಚಪ್ಪರಬಂದ್‌, ಅಲಾಬಿ ಚಪ್ಪರಬಂದ, ಗುರುಬಾಯಿ ನಾಟಿಕಾರ, ಈರವ್ವ ಕಲಬುರ್ಗಿ, ಲಕ್ಷ್ಮವ್ವ ಮ್ಯಾಗಿನಮನಿ, ಇಬ್ರಾಹಿಂ ಬೀಳಗಿ, ಸಿದ್ದಪ್ಪ ಹೂಗಾರ, ಸಂಗಪ್ಪ ಸಜ್ಜನ, ರವಿ ವಡ್ಡರ, ಸಿದ್ದಪ್ಪ ಮಾದರ, ಅರವಿಂದ ಹೂಗಾರ, ಮಹಾಂತೇಶ ನಾಟಿಕಾರ, ಸಾಹೇಬಗೌಡ ಮೇಟಿ, ಉಮೇಶ ವಾಲೀಕಾರ, ಶಾಹಿರಬಾನು ಚಪ್ಪರಬಂದ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ರೇಂಜರ್ ಸ್ವಿಂಗ್‌ನಿಂದ ಬಿದ್ದು ಯುವತಿ ಸಾವು, ಕೊನೆ ಕ್ಷಣ ಮೊಬೈಲ್‌ನಲ್ಲಿ ಸೆರೆ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Vijayapura: ಎರಡು ನಾಲಿಗೆ, ಎರಡು ಮೂಗು, ಮೂರು ಕಣ್ಣುಗಳಿರುವ ಕರು ಜನನ

Eshwar1

Caste Census: ಜಾತಿಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯ ಉತ್ತರಕುಮಾರ ರೀತಿ..: ಈಶ್ವರಪ್ಪ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.