![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
ಕೃಷಿ ವಿಜ್ಞಾನ ಕೇಂದ್ರಕ್ಕೆ ಮೂಲ ಸೌಲಭ್ಯ ಒದಗಿಸಿ
Team Udayavani, Jun 30, 2021, 7:52 PM IST
![ಸದ್ಗಹಜಹಗ್ದಸಅಕ್ಷಛಘಃಝಖಝಃರ್ಘಧ](https://www.udayavani.com/wp-content/uploads/2021/06/ಸದ್ಗಹಜಹಗ್ದಸಅಕ್ಷಛಘಃಝಖಝಃರ್ಘಧ-620x372.jpg)
ಇಂಡಿ: ಪಟ್ಟಣದಲಿ ಕೃಷಿ ವಿಜ್ಞಾನ ಕೇಂದ್ರ ಇದ್ದರೂ ವಿಜ್ಞಾನ ಕೇಂದ್ರದಲ್ಲಿ ರೈತರಿಗೆ ಅವಶ್ಯವಿರುವ ಎಲ್ಲ ಸೌಲಭ್ಯಗಳೂ ಇದುವರೆಗೂ ದೊರೆಯದೇ ಇರುವುದು ಖೇದಕರ ಸಂಗತಿಯಾಗಿದೆ. ಮುಖ್ಯವಾಗಿ ರೈತರಿಗೆ ಅವಶ್ಯವಿರುವ ಮಣ್ಣು ಮತ್ತು ನೀರು ಪರೀûಾ ಘಟಕ ಮತ್ತು ಗೊಬ್ಬರದ ಗುಣಮಟ್ಟ ಪರೀಕ್ಷಿಸಲು ಪ್ರಯೋಗಾಲಯ ಇಲ್ಲ. ಮಣ್ಣು, ನೀರು ಪರೀಕ್ಷೆಗೆ ವಿಜಯಪುರಕ್ಕೆ ಹೋಗಬೇಕಾಗಿದ್ದು, ಗೊಬ್ಬರದ ಗುಣಮಟ್ಟ ಪರಿಶೀಲಿಸಲು ಬೆಳಗಾವಿ ಅಥವಾ ಧಾರವಾಡಕ್ಕೆ ಮಾದರಿ ಕಳುಹಿಸಿ ಕೊಡಬೇಕಾಗಿದೆ.
ಗೊಬ್ಬರದ ಮಾದರಿ ಪರೀಕ್ಷೆಗೆ ಕಳುಹಿಸಿದ 15 ದಿನಗಳ ನಂತರ ಮತ್ತು ಒಂದು ತಿಂಗಳ ಒಳಗಾಗಿ ಪರೀûಾ ವರದಿ ಬರುತ್ತಿದ್ದು ರೈತರಿಗೆ ತೀವ್ರ ತೊಂದರೆಯಾಗುತ್ತಿದೆ. ಸದ್ಯ ಅವಶ್ಯವಾಗಿರುವ ಫರ್ಟಿಲೈಸರ್ ಟೆಸ್ಟಿಂಗ್ ಲ್ಯಾಬ್ ಅನ್ನು ಇಂಡಿ ಕೃಷಿ ವಿಜ್ಞಾನ ಕೇಂದ್ರ ಅಥವಾ ಕೃಷಿ ಇಲಾಖೆಯಲ್ಲಿ ನಿರ್ಮಾಣ ಮಾಡಿ ಅನುಕೂಲ ಮಾಡಿ ಕೊಡಬೇಕೆಂಬುವುದು ರೈತ ಸಂಘಟನೆಗಳು ಮತ್ತು ಪ್ರಗತಿಪರ ರೈತರ ಕೂಗಾಗಿದೆ.
ತಾಲೂಕಿನಲ್ಲಿ ಹಲವು ವರ್ಷಗಳಿಂದ ಹಲವಾರು ಬಾರಿ ನಕಲಿ ಗೊಬ್ಬರ ಮತ್ತು ಕೀಟನಾಶಕ ಔಷ ಧಗಳು ಮಾರಾಟವಾಗುತ್ತಿರುವ ಬಗ್ಗೆ ಕೃಷಿ ಇಲಾಖೆ ಅ ಧಿಕಾರಿಗಳು ದಾಳಿ ನಡೆಸಿದರೂ ಅಂತಹ ದಂಧೆಗಳು ಮರುಕಳಿಸುತ್ತಲೇ ಇವೆ. ಇದಕ್ಕೆ ನಿದರ್ಶನವೆಂಬಂತೆ ಜೂನ್ 21ರಂದು ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಕಲಿ ಗೊಬ್ಬರ ಅಡ್ಡೆ ಮೇಲೆ ಕೃಷಿ ಇಲಾಖೆ ಅಧಿ ಕಾರಿಗಳು ದಾಳಿ ನಡೆಸಿ ಗೊಬ್ಬರ ವಶಪಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಗೊಬ್ಬರ ಗುಣಮಟ್ಟ ಪರಿಶೀಲಿಸಲು ಪ್ರಯೋಗಾಲಯ ಇಲ್ಲದ ಕಾರಣ ಕೃಷಿ ಇಲಾಖೆ ಅಧಿ ಕಾರಿಗಳು ಗೊಬ್ಬರದ ಮಾದರಿ ಸಂಗ್ರಹಿಸಿ ಧಾರವಾಡಕ್ಕೆ ಕಳುಹಿಸಿ ಕೊಟ್ಟಿದ್ದು ಇನ್ನೂ ವರದಿ ಬಂದಿಲ್ಲ.
ವರದಿ ಬರಲು ಇನ್ನೂ ಕನಿಷ್ಠ 10-12 ದಿನಗಳಾದರೂ ಬೇಕು ಎಂದು ಅಧಿ ಕಾರಿಗಳು ತಿಳಿಸಿದ್ದಾರೆ. ಪ್ರಯೋಗಾಲಯ ನಮ್ಮ ಜಿಲ್ಲೆಯಲ್ಲಿ ಅಥವಾ ಕೃಷಿ ವಿಜ್ಞಾನ ಕೇಂದ್ರ ಇಂಡಿಯಲ್ಲಿಯೇ ನಿರ್ಮಿಸಿ ಅದಕ್ಕೆ ಅವಶ್ಯವಿರುವ ಯಂತ್ರೋಪಕರಣ ಮತ್ತು ಸಿಬ್ಬಂದಿ ನೇಮಕ ಮಾಡಿದರೆ ಇಡಿ ಜಿಲ್ಲೆಯ ರೈತರಿಗೆ ಅನುಕೂಲವಾಗುತ್ತದೆ. ರೈತರು ತಾವು ಖರೀದಿಸಿದ ಗೊಬ್ಬರ ಡೂಪ್ಲಿಕೇಟ್ ಎಂದು ತಿಳಿದರೆ ಕೂಡಲೆ ಮಾದರಿ ತೆಗೆದು ಪರೀಕ್ಷೆಗೆ ಒಳಪಡಿಸಲು ಸಾಧ್ಯವಾಗುತ್ತದೆ.
ಟಾಪ್ ನ್ಯೂಸ್
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![23-](https://www.udayavani.com/wp-content/uploads/2024/12/23--150x90.jpg)
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
![22-](https://www.udayavani.com/wp-content/uploads/2024/12/22--150x90.jpg)
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
![State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ](https://www.udayavani.com/wp-content/uploads/2024/12/dam-150x102.jpg)
State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ
![Government will not turn a blind eye if public is inconvenienced: CM Siddaramaiah](https://www.udayavani.com/wp-content/uploads/2024/12/sidda-3-150x85.jpg)
Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
![Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ](https://www.udayavani.com/wp-content/uploads/2024/12/siddeshwara-150x91.jpg)
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
![ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್](https://www.udayavani.com/wp-content/uploads/2024/12/kejriwal-6-150x93.jpg)
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
![BGV-Gruhalkmi](https://www.udayavani.com/wp-content/uploads/2024/12/BGV-Gruhalkmi-150x90.jpg)
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
![Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ](https://www.udayavani.com/wp-content/uploads/2024/12/noida-2-150x92.jpg)
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
![ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು](https://www.udayavani.com/wp-content/uploads/2024/12/CHIKKAMAGALURU-150x98.jpg)
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.