![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Oct 30, 2021, 2:08 PM IST
ವಿಜಯಪುರ: ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ ಪುನೀತ್ ರಾಜಕುಮಾರ ನಿಧನಕ್ಕೆ ನಗರದಲ್ಲಿ ಅವರ ಅಭಿಮಾನಿಗಳು ಶ್ರದ್ಧಾಂಜಲಿ ಕಾರ್ಯಕ್ರಮಗಳ ಮೂಲಕ ಕಂಬನಿ ಮಿಡಿದಿದ್ದಾರೆ.
ಅಪ್ಪು ನಿಧನದ ಸುದ್ದಿ ತಿಳಿಯುತ್ತಲೇ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಶ್ರದ್ದಾಂಜಲಿ ಸಭೆ ಆಯೋಜಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ್ದಾರೆ.
ಈ ವೇಳೆ ಯುವ ಭಾರತ ಸಮಿತಿ ಸಂಸ್ಥಾಪಕ ಉಮೇಶ ಕಾರಜೋಳ ಮಾತನಾಡಿ, ಯುವಕರ ನೆಚ್ಚಿನ ನಟನಾದ ಪುನೀತ್ ಅವರ ಅಗಲಿಕೆ ದುಃಖ ತಂದಿದೆ. ಯುವಕರಿಗೆ ವ್ಯಾಯಾಮ ಹಾಗೂ ಯೋಗದಲ್ಲಿ ಆದರ್ಶವಾಗಿದ್ದರು. ಪವರ್ ಸ್ಟಾರ್ ಆಗಿದ್ದರೂ ಯಾವುದೇ ಗರ್ವವಿಲ್ಲದೆ ಎಲ್ಲರೊಂದಿಗೆ ಬೆರೆಯುತ್ತಿದ್ದ ಪುನೀತ್ ರಾಜಕುಮಾರ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು.
ಯುವ ಪರಿಷತ್ ಅಧ್ಯಕ್ಷ ಶರಣು ಸಬರದ ಮಾತನಾಡಿ, ತಂದೆ ಹಾದಿಯಲ್ಲಿಯೇ ನಡೆಯುತಿದ್ದಅಪ್ಪು, ರಾಜಕುಮಾರ ಅವರಂತೆ ಸರಳತೆ ಮೈಗೂಡಿಸಿಕೊಂಡಿದ್ದರು. ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ಕೆಲವೇ ವರ್ಷಗಳಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅಪ್ಪು ಅಭಿನಯ ಜನಮಾನಸದಲ್ಲಿ ಅಚ್ಚಳಿಯದೇ ನಿಂತಿದೆ. ನಾಯಕ ನಟನಾಗಿ ಅನೇಕ ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದುದ್ದು ಅಲ್ಲದೆ ಅನೇಕ ವೃದ್ಧಾಶ್ರಮಗಳಿಗೆ ಸಹಾಯ ಹಸ್ತವಾಗಿದ್ದರು. ಪುನೀತ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.
ಇದನ್ನೂ ಓದಿ:ಅಭಿಮಾನಿಗಳ ಒತ್ತಾಯದ ಹಿನ್ನಲೆ ನಾಳೆ ಪುನೀತ್ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ
ವಿನೋದಕುಮಾರ ಮಣೂರ, ಸತೀಶ ಬಾಗಿ, ವೀರೇಶ ಗೋಬ್ಬೂರ, ಬಸವರಾಜ ಕರಿಕಬ್ಬಿ, ಸಂತೋಷ ಝಳಕಿ, ಶೇಶರಾವ್ಮಾನೆ, ದಾನೇಶ ಅವಟಿ, ಮಹೇಶ ಹಂಜಿಖಾನೆ ಇತರರು ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
You seem to have an Ad Blocker on.
To continue reading, please turn it off or whitelist Udayavani.