ಅಪ್ಪು ಅಗಲಿಕೆಗೆ ಅಭಿಮಾನಿಗಳ ಭಾವಪೂರ್ಣ ಶ್ರದ್ದಾಂಜಲಿ


Team Udayavani, Oct 30, 2021, 2:08 PM IST

14puneet

ವಿಜಯಪುರ: ಕನ್ನಡ ಚಲನಚಿತ್ರ ರಂಗದ ಖ್ಯಾತ ನಾಯಕ ನಟ ಪುನೀತ್‌ ರಾಜಕುಮಾರ ನಿಧನಕ್ಕೆ ನಗರದಲ್ಲಿ ಅವರ ಅಭಿಮಾನಿಗಳು ಶ್ರದ್ಧಾಂಜಲಿ ಕಾರ್ಯಕ್ರಮಗಳ ಮೂಲಕ ಕಂಬನಿ ಮಿಡಿದಿದ್ದಾರೆ.

ಅಪ್ಪು ನಿಧನದ ಸುದ್ದಿ ತಿಳಿಯುತ್ತಲೇ ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಶ್ರದ್ದಾಂಜಲಿ ಸಭೆ ಆಯೋಜಿಸಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದ್ದಾರೆ.

ಈ ವೇಳೆ ಯುವ ಭಾರತ ಸಮಿತಿ ಸಂಸ್ಥಾಪಕ ಉಮೇಶ ಕಾರಜೋಳ ಮಾತನಾಡಿ, ಯುವಕರ ನೆಚ್ಚಿನ ನಟನಾದ ಪುನೀತ್‌ ಅವರ ಅಗಲಿಕೆ ದುಃಖ ತಂದಿದೆ. ಯುವಕರಿಗೆ ವ್ಯಾಯಾಮ ಹಾಗೂ ಯೋಗದಲ್ಲಿ ಆದರ್ಶವಾಗಿದ್ದರು. ಪವರ್‌ ಸ್ಟಾರ್‌ ಆಗಿದ್ದರೂ ಯಾವುದೇ ಗರ್ವವಿಲ್ಲದೆ ಎಲ್ಲರೊಂದಿಗೆ ಬೆರೆಯುತ್ತಿದ್ದ ಪುನೀತ್‌ ರಾಜಕುಮಾರ ಅವರ ಅಕಾಲಿಕ ನಿಧನ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು.

ಯುವ ಪರಿಷತ್‌ ಅಧ್ಯಕ್ಷ ಶರಣು ಸಬರದ ಮಾತನಾಡಿ, ತಂದೆ ಹಾದಿಯಲ್ಲಿಯೇ ನಡೆಯುತಿದ್ದಅಪ್ಪು, ರಾಜಕುಮಾರ ಅವರಂತೆ ಸರಳತೆ ಮೈಗೂಡಿಸಿಕೊಂಡಿದ್ದರು. ಬಾಲ ನಟನಾಗಿ ಚಿತ್ರರಂಗ ಪ್ರವೇಶಿಸಿದ ಕೆಲವೇ ವರ್ಷಗಳಲ್ಲಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅಪ್ಪು ಅಭಿನಯ ಜನಮಾನಸದಲ್ಲಿ ಅಚ್ಚಳಿಯದೇ ನಿಂತಿದೆ. ನಾಯಕ ನಟನಾಗಿ ಅನೇಕ ಚಿತ್ರಗಳಲ್ಲಿ ಅಮೋಘವಾಗಿ ಅಭಿನಯಿಸಿ ಕೋಟ್ಯಂತರ ಅಭಿಮಾನಿಗಳ ಮನ ಗೆದ್ದುದ್ದು ಅಲ್ಲದೆ ಅನೇಕ ವೃದ್ಧಾಶ್ರಮಗಳಿಗೆ ಸಹಾಯ ಹಸ್ತವಾಗಿದ್ದರು. ಪುನೀತ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದರು.

ಇದನ್ನೂ ಓದಿ:ಅಭಿಮಾನಿಗಳ ಒತ್ತಾಯದ ಹಿನ್ನಲೆ ನಾಳೆ ಪುನೀತ್ ಅಂತ್ಯಕ್ರಿಯೆ : ಸಿಎಂ ಬೊಮ್ಮಾಯಿ

ವಿನೋದಕುಮಾರ ಮಣೂರ, ಸತೀಶ ಬಾಗಿ, ವೀರೇಶ ಗೋಬ್ಬೂರ, ಬಸವರಾಜ ಕರಿಕಬ್ಬಿ, ಸಂತೋಷ ಝಳಕಿ, ಶೇಶರಾವ್‌ಮಾನೆ, ದಾನೇಶ ಅವಟಿ, ಮಹೇಶ ಹಂಜಿಖಾನೆ ಇತರರು ಶ್ರದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.