ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ


Team Udayavani, Oct 5, 2024, 3:29 PM IST

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ವಿಜಯಪುರ: ನಾನೊಬ್ಬ ಸಣ್ಣ ದಲಿತ. ಆದರೂ, ನನಗೆ ಮುಂದೆ ಗುರಿಗಳು ಇವೆ. ಹಿಂದೆ ಗುರುಗಳು ಇದ್ದಾರೆ. ನನ್ನ ಜೀವ ಇರುವವರಿಗೂ ಮತ್ತು ಆ ಗುರಿಗಳು ಈಡೇರುವವರೆಗೆ ನಾನು ನನ್ನ ಪ್ರಯತ್ನ ಬಿಡಲ್ಲ ಎಂದು ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ಬಾವುಕರಾದರು.

ಜಿಲ್ಲೆಯ ಇಂಡಿ ತಾಲೂಕಿನ ಕ್ಯಾತನಕೇರಿ ಗ್ರಾಮದಲ್ಲಿ ಶನಿವಾರ ಕೆರೆಗೆ ಬಾಗಿನ ಅರ್ಪಿಸಿ ಮಾತನಾಡಿದ ಅವರು, ನನ್ನ ಪ್ರಯತ್ನ ಯಶಸ್ಸು ಆಗುತ್ತೋ, ಇಲ್ಲವೋ ಗೊತ್ತಿಲ್ಲ. ನನ್ನಂತಹ ದಲಿತರಿಗೆ ಒಳ್ಳೆಯದು ಆಗದಿದ್ದರೆ, ಮುಂದೆ ಯಾವ ದಲಿತರಿಗೂ ಒಳ್ಳೆಯದು ಆಗಲ್ಲ ಎಂಬುದು ಬಹಳ ಸ್ಪಷ್ಟ ಎಂದರು. ಈ ಮೂಲಕ ಮುಂದೆ ಬಿಜೆಪಿಗೆ ಬಹುಮತ ಬಂದರೆ ಮುಖ್ಯಮಂತ್ರಿ ಆಗುವ ಆಸೆಯನ್ನು ಜಿಗಜಿಣಗಿ ಬಿಚ್ಚಿಟ್ಟರು.

ನಾನು ಯಾರ ಮನ ನೋಯಿಸಿಲ್ಲ. ಯಾರ ಮನೆ ಮುರಿದಿಲ್ಲ. ಯಾರಿಗೂ ತೊಂದರೆಯನ್ನೂ ಮಾಡಿಲ್ಲ. ನನ್ನ ಜೀವನದಲ್ಲಿ ಕೆಲವು ಗುರಿಗಳು ಇವೆ. ನಮ್ಮಂತೋರು ಆಗದೇ ಇದ್ದರೆ, ಈ ದೇಶದಲ್ಲಿ ಮತ್ತ್ಯಾರು ಆಗುವವರು ಇದ್ದಾರೆ ಎಂದೂ ಪ್ರಶ್ನಿಸಿದರು.

ನಾನು 7 ಚುನಾವಣೆಗಳನ್ನು ಗೆದ್ದಿದ್ದೇನೆ. ಚಿಕ್ಕೋಡಿಯಲ್ಲಿ ಬೇರೆ-ಬೇರೆ ಪಕ್ಷದಿಂದ ಜನ ನನ್ನನ್ನು 3 ಸಲ ಗೆಲ್ಲಿಸಿದರು. ಮರಳಿ ಬಿಜಾಪುರಕ್ಕೆ ಬಂದೆ, ನೀವು 4 ಸಲ ಗೆಲ್ಲಿಸಿದಿರಿ. ಈ ಸಲ ನನ್ನನ್ನು ಸೋಲಿಸಲು ಬಹಳ ಪ್ರಯತ್ನ ಮಾಡಿದರು. ಕೋಟಿಗಟ್ಟಲೆ ಹಣ ಖರ್ಚು ಮಾಡಿದರು. ಆದರೆ, ನಾನು ‘ಪುಕ್ಕಟೆ ಗಿರಾಕಿ’ ಎಂದು ಹೇಳಿಕೊಂಡೇ ಪ್ರಚಾರ ಮಾಡಿದೆ ಎಂದರು.

ರಾಜಕಾರಣ ಮಾಡಲು ನಾವು ಹಣ ಎಲ್ಲಿಂದ ತರೋದು. ಹಣ ತರೋದು ಒಬ್ಬ ದಲಿತನಿಂದ ಸಾಧ್ಯ ಇದೆಯಾ?, ಮಕ್ಕಳು ದೊಡ್ಡೋರು ಆಗಿದ್ದಾರೆ. ಇರುವ ಆಸ್ತಿ ಮಾರಲು ಬಿಡಲ್ಲ. ನನ್ನದು ಒಣಗೈ ರಾಜಕಾರಣ. ಅದಕ್ಕೆ ನೀವು (ಜನ) ನನಗಾಗಿ ಒಂದು ದಿನ ಕೆಲಸ ಮಾಡಿ. ನಾನು ನಿಮಗಾಗಿ 5 ವರ್ಷ ಪುಕ್ಕಟೆ ಕೆಲಸ ಮಾಡುತ್ತೇನೆ ಅಂತಾ ಕೇಳಿಕೊಂಡೆ. ಅದಕ್ಕೆ ಜನರೂ ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದರು.

ಜೀವನದಲ್ಲಿ ಹಣವಷ್ಟೇ ಮುಖ್ಯವಲ್ಲ, ನಡತೆಯೂ ಇರಬೇಕು. ಸಮಾಜ ಕೂಡ ಸೂಕ್ಷ್ಮವಾಗಿ ನೋಡುತ್ತದೆ. ಚುನಾವಣೆ ಬಂದರೆ ಎಲ್ಲ ರಾಜಕಾರಣಿಗಳು ತಮ್ಮ-ತಮ್ಮ ಸಮಾಜಗಳ ಹಿಂದೆ ಗಂಟು ಬೀಳುತ್ತಾರೆ. ನಾನು ಒಂದು ದಿನ ಸಹ ದಲಿತರ ಕೇರಿಗೆ ಹೋಗಿಲ್ಲ. ಹೋಗೋದು ಇಲ್ಲ. ಈ ಇಂತಹ ಧೈರ್ಯ ರಾಜಕಾರಣದಲ್ಲಿ ಯಾರಾದರೂ ಮಾಡ್ತಾರಾ?. ನಾನು 50 ವರ್ಷ ರಾಜಕಾರಣದಲ್ಲಿ ಎಲ್ಲ ಸಮಾಜಗಳನ್ನು ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ

ಟಾಪ್ ನ್ಯೂಸ್

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Goa-iffai

IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.