ಮತದಾನಕ್ಕೆ ಸಕಲ ಸಿದ್ಧತೆ

•ವಿದ್ಯುನ್ಮಾನ ಮತಯಂತ್ರಗಳಿಗೆ ಅಭ್ಯರ್ಥಿಗಳ ಚಿಹ್ನೆ ಅಳವಡಿಕೆ•ಅಣಕು ಮತದಾನ ಪ್ರಾತ್ಯಕ್ಷಿಕೆ

Team Udayavani, May 27, 2019, 11:13 AM IST

vp-tdy-1..

ತಾಳಿಕೋಟೆ: ಪುರಸಭೆ ಚುನಾವಣೆಗೆ ಸಂಬಂಧಿಸಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಚಿಹ್ನೆಯನ್ನು ಅಭ್ಯರ್ಥಿಗಳ ಸಮ್ಮುಖದಲ್ಲಿ ಸೆಕ್ಟರ್‌ ಆಫೀಸರ್‌ ಪ್ರಶಾಂತ ಶೇವಳಕರ ಅಳವಡಿಸಿದರು.

ತಾಳಿಕೋಟೆ: ಪಟ್ಟಣದ ಪುರಸಭೆ ಚುನಾವಣೆಗೆ ಸಂಬಂಧಿಸಿ ಮೇ 29ರಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ಸಂಬಂಧಿಸಿ ರವಿವಾರ ವಿದ್ಯುನ್ಮಾನ ಮತಯಂತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಚಿಹ್ನೆಗಳನ್ನು ಅಳವಡಿಸುವುದರೊಂದಿಗೆ ಅಭ್ಯರ್ಥಿಗಳಿಂದ ಅಣಕು ಮತದಾನ ಮಾಡಿಸಲಾಯಿತು.

ಪಟ್ಟಣದ ಎಸ್‌.ಕೆ. ಕಾಲೇಜ್‌ನಲ್ಲಿ ಚುನಾವಣಾಧಿಕಾರಿಯೂ ಆದ ತಹಶೀಲ್ದಾರ್‌ ನಿಂಗಪ್ಪ ಬಿರಾದಾರ ಅವರು ಪುರಸಭೆಯ ಚುನಾವಣೆಯಲ್ಲಿ ಸ್ಪರ್ಧಿಸಿರುವ 23 ವಾರ್ಡ್‌ಗಳ ಅಭ್ಯರ್ಥಿಗಳ ಸಭೆ ನಡೆಸಿ ಅಭ್ಯರ್ಥಿಗಳ ಸಮ್ಮುಖದಲ್ಲಿ ಇವಿಎಂನಲ್ಲಿ ಅಭ್ಯರ್ಥಿಗಳ ಭಾವಚಿತ್ರ ಮತ್ತು ಚಿಹ್ನೆ ಅಳವಡಿಸಿ ಅವರಿಂದಲೇ ಅಣಕು ಮತದಾನ ಮಾಡಿಸುವ ಮೂಲಕ ಇವಿಎಂ ಭದ್ರಗೊಳಿಸಿ ಸ್ಟ್ರಾಂಗ್‌ ರೂಂಗೆ ಕಳುಹಿಸಿದರು.

ನಂತರ ಪತ್ರಿಕೆಯೊಂದಿಗೆ ಮಾತನಾಡಿದ ತಹಶೀಲ್ದಾರ್‌ ನಿಂಗಪ್ಪ ಬಿರಾದಾರ, ಪುರಸಭೆ 23 ವಾರ್ಡ್‌ಗಳ ಮತದಾನಕ್ಕೆ 28 ಮತಗಟ್ಟೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿತ್ತು. ಅದರಲ್ಲಿ ವಾರ್ಡ್‌ ನಂ. 9, 19, 20, 22ಕ್ಕೆ ಅವಿರೋಧ ಆಯ್ಕೆಗೊಂಡಿದ್ದರಿಂದ ಇವುಗಳನ್ನು ಹೊರತು ಪಡಿಸಿ 24 ಮತಗಟ್ಟೆಗಳ ನಿರ್ಮಾಣಕ್ಕೆ ಮುಂದಾಗಿದ್ದೇವೆ.

ಚುನಾವಣೆಗೆ ಸಂಬಂಧಿಸಿ ಈಗಾಗಲೇ ಎಲ್ಲ ರೀತಿಯಿಂದಲೂ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ಕಾರ್ಯ ನಿರ್ವಹಿಸುವ ಪಿಆರ್‌ಒ ಸಿಬ್ಬಂದಿಗಳಿಗೆ ತರಬೇತಿಯನ್ನೂ ಸಹ ನೀಡಲಾಗಿದೆ. ಮೇ 29ರಂದು ಮತದಾನದ ದಿನ ಬೆಳಗ್ಗೆ 7ಕ್ಕೆ ಮೊದಲು ಮತದಾನಕ್ಕೂ ಮುಂಚೆ ಅಭ್ಯರ್ಥಿಗಳಿಗೆ ಇವಿಎಂತಿಳಿವಳಿಕೆ ನೀಡಿ ನಂತರ ಮತದಾನಕ್ಕೆ ಅವಕಾಶ ಮಾಡಿಕೊಡಬೇಕು.

ಮತದಾನ ಸಮಯದಲ್ಲಿ ಯಾವುದೇ ರೀತಿಯ ಗೊಂದಲಗಳು ಸೃಷ್ಟಿಯಾಗದಂತೆ ನೊಡಿಕೊಳ್ಳಬೇಕು. ಇವಿಎಂ ಮುಂದೆ ಒಬ್ಬರು ಮತದಾನ ಮಾಡುವ ಸಮಯದಲ್ಲಿ ಮತ್ತೂಬ್ಬರು ಹೋಗದಂತೆ ನೋಡಿಕೊಳ್ಳಬೇಕು ಎಂದು ಕಾರ್ಯ ನಿರ್ವಹಿಸುವ 130 ಸಿಬ್ಬಂದಿಗಳಿಗೆ ಸೂಚಿಸಲಾಗಿದೆ ಎಂದರು.

ಈ ಸಮಯದಲ್ಲಿ ಚುನಾವಣಾಧಿಕಾರಿಗಳಾದ ವಿನೋದ ನಾಯಕ, ಜಿ.ವೈ. ಮುರಾಳ, ಎ.ಜಿ. ಗುಜರಿ, ಸೆಕ್ಟರ್‌ ಆಫಿಸರ್‌ ಎನ್‌.ಆರ್‌. ಉಂಡಿಗೇರಿ, ಪ್ರಶಾಂತ ಶೇವಳಕರ, ಮಾಸ್ಟರ್‌ ಟ್ರೈನರ್‌ ನಾಗರಾಜ ಕ್ಷತ್ರಿ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.