ಧರ್ಮಗಳು ಸಮಾಜ ಕಟ್ಟುವ ಕೆಲಸ ಮಾಡಲಿ: ಸಿದ್ದಲಿಂಗಶ್ರೀ


Team Udayavani, Jan 2, 2018, 1:21 PM IST

vij-4.jpg

ವಿಜಯಪುರ: ಸಾತ್ವಿಕರು, ತಪಸ್ವಿಗಳು ಹಾಗೂ ದುರ್ಗಾದೇವಿ ಆರಾಧಕರಾದ ಸಂತ ಸೇವಾಲಾಲರ ಸಂದೇಶಗಳು ಲಿಂಗಾಯತ ಧರ್ಮ ಸ್ಥಾಪಕರಾದ ಬಸವಾದಿ ಶರಣರ ತತ್ವಾದರ್ಶಗಳಿಗೆ ಸಮಾನವಾಗಿವೆ. ಧರ್ಮ ಹಾಗೂ ಜಾತಿಯನ್ನು ಮೀರಿದ ದಾರ್ಶನಿಕರು, ಶರಣ ಸಂತರು ನೀಡಿದ ದಿವ್ಯ ಸಂದೇಶಗಳನ್ನು ಸಮಾಜ ಸುಧಾರಣೆಯಲ್ಲಿ ಬಳಸಿಕೊಂಡರೆ ಬದುಕು ಸುಂದರವಾಗುತ್ತದೆ ಎಂದು ಲಿಂಗಸ್ಗೂರಿನ ಅನುಭವ ಮಂಟಪದ ಸಿದ್ದಲಿಂಗ ಶ್ರೀಗಳು ಹೇಳಿದರು.

ನಗರದಲ್ಲಿ ಶರಣ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಬಂಜಾರಾ ಸಮಾಜದ ಸಂತ ಸೇವಾಲಾಲರ ಬದುಕು-ಸಾಧನೆ ಕುರಿತ ದತ್ತಿ ಕಾರ್ಯಕ್ರಮದಲ್ಲಿ ಇಂದುಮತಿ ಲಮಾಣಿ ಅವರ ನವರತ್ನ ಕಥಾ ಸಂಕಲನ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಸಂತರು, ಶರಣದ ಸಂದೇಶ ಸಾರುವ ಇಂಥ ಕಾರ್ಯಕ್ರಮಗಳಿಂದ ಧರ್ಮ-ಧರ್ಮಗಳ ಮಧ್ಯದ ಗೋಡೆಗಳು ಉರುಳಿ ಬೀಳುತ್ತವೆ. ಜೊತೆಗೆ ಜಗತ್ತಿನಲ್ಲಿ ಸೌಹಾರ್ದತೆ ಬೆಳೆದು ಸುಖ ಶಾಂತಿ ನೆಲೆಸುತ್ತವೆ. ಹೀಗಾಗಿ ಧರ್ಮಗಳು ಸಮಾಜ ಕಟ್ಟುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಕೃತಿ ಪರಿಚಯಿಸಿದ ಪ್ರೊ| ಶರಣಗೌಡ ಪಾಟೀಲ, ಸದರಿ ಕೃತಿಯಲ್ಲಿರುವ 9 ಕಥೆಗಳು ವೈವಿಧ್ಯಮಯ ಕಥಾವಸ್ತು ಹೊಂದಿದ್ದು ಸುಂದರ ನಿರೂಪಣೆಯಿಂದ ಕೂಡಿವೆ. ಪ್ರಸ್ತುತ ಸಮಾಜದ ಸಮಸ್ಯೆಗಳನ್ನು ಕುರಿತು ಕಥೆಗಳು ಮಾರ್ಮಿಕವಾಗಿ ಮೂಡಿಬಂದಿವೆ ಎಂದು ಬಣ್ಣಿಸಿದರು.

ಅಧ್ಯಕ್ಷತೆ ವಹಿಸಿದ್ದ ಬಂಜಾರಾ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಿ.ಎಲ್‌. ಚವ್ಹಾಣ ಮಾತನಾಡಿ, ಜಗತ್ತಿನಲ್ಲಿ ಎಲ್ಲ ಧರ್ಮಗಳನ್ನು ಮೀರಿದ ಧರ್ಮವೇ ಮಾನವ ಧರ್ಮ. ಮಾನವ ಧರ್ಮಕ್ಕೆ ಸಮನಾದ ಧರ್ಮ ಮತ್ತೂಂದಿಲ್ಲ. ಮಾನವ ಧರ್ಮ ಪಾಲನೆಯಿಂದ ಜೀವನ ಪಾವನವಾಗುತ್ತದೆ ಎಂದು ಹೇಳಿದರು. 

ಸಾನ್ನಿಧ್ಯ ವಹಿಸಿದ್ದ ಕೆಸರಟ್ಟಿಯ ಶಂಕರಲಿಂಗ ಗುರುಪೀಠದ ಬಾಲಯೋಗಿ ಸೋಮಲಿಂಗ ಶ್ರೀಗಳು ಮಾತನಾಡಿ, ಜಗತ್ತಿನ
ದಾರ್ಶನಿಕರ ಸಾಲಿನಲ್ಲಿ ಸಂತ ಸೇವಾಲಾಲರ ಹೆಸರು ಸೇರಿದ್ದು ಬಂಜಾರಾ ಸಮಾಜದ ಹಿರಿಮೆ ಹೆಚ್ಚಿಸಿದೆ. ಸಂತ ಸೇವಾಲಾಲರು ಸದಾ ನಮ್ಮೊಡನೆ ಇರುತ್ತಾರೆ. ಆದ್ದರಿಂದ ನಾವೆಲ್ಲ ತಪ್ಪು ಮಾಡದೆ ಸಕಲ ಜೀವಿಗಳನ್ನು ಸಮಾನವಾಗಿ ಕಾಣಬೇಕೆಂದು ಕಿವಿಮಾತು ಹೇಳಿದರು.

ಶರಣ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಜಂಬುನಾಥ ಕಂಚ್ಯಾಣಿ ಪ್ರಾಸ್ತಾವಿಕ ಮಾತನಾಡಿದರು. ಸಂತ ಸೇವಾಲಾಲರ ಬದುಕು-ಸಾಧನೆ ಕುರಿತು ಬಸವನಬಾಗೇವಾಡಿ ಪುರಸಭೆ ಸದಸ್ಯ ನೀಲು ನಾಯಕ ಉಪನ್ಯಾಸ ನೀಡಿದರು. ಸಭೆಯಲ್ಲಿ ಬಿ.ಎಚ್‌. ಬಾದರಬಂಡಿ, ವಿ.ಸಿ. ನಾಗಠಾಣ, ಎಸ್‌.ಎಸ್‌. ಪಾಟೀಲ, ಬಸವರಾಜ ಲಮಾಣಿ, ಎಸ್‌. ವೈ. ಗದಗ, ಎಂ.ಎಂ.ಅಂಗಡಿ, ಶಂಕರ ಲಮಾಣಿ ಹಾಗೂ ಜಾಧವ ಇದ್ದರು.

ಇಂದುಮತಿ ಲಮಾಣಿ ಮಾತನಾಡಿದರು. ಶರಣ ಸಾಹಿತ್‌ ಪರಿಷತ್‌ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಮ.ಗು. ಯಾದವಾಡ ಸ್ವಾಗತಿಸಿದರು. ಸಿದ್ದಲಿಂಗಪ್ಪ ಹದಿಮೂರ ನಿರೂಪಿಸಿದರು. ಸಾಹೇಬಗೌಡ ಬಸರಕೋಡ ವಂದಿಸಿದರು.

ಟಾಪ್ ನ್ಯೂಸ್

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Krantiveer Brigade launched by worshipping the feet of 1008 saints: KS Eshwarappa

Politicss; 1008 ಸಾಧುಸಂತರ ಪಾದಪೂಜೆ‌ ಮೂಲಕ‌ ಕ್ರಾಂತಿವೀರ ಬ್ರಿಗೇಡ್‌ ಗೆ ಚಾಲನೆ: ಈಶ್ವರಪ್ಪ

INDvAUS: Is captain Rohit Sharma standing against to Shami?; Aussie tour difficult for pacer!

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?;‌ ವೇಗಿಗೆ ಆಸೀಸ್‌ ಪ್ರವಾಸ ಕಷ್ಟ!

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ

2-bntwl

Bantwala: ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

23-

Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್

22-

ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

State Govt; ಆಲಮಟ್ಟಿ ಎತ್ತರಿಸಲು ಬದ್ಧ : ಸಿಎಂ, ಡಿಸಿಎಂ

Government will not turn a blind eye if public is inconvenienced: CM Siddaramaiah

Vijayapura; ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿ ಕೂರದು: ಸಿದ್ದರಾಮಯ್ಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Ambedkar row: Amit Shah gone mad, he should leave politics says Lalu Prasad Yadav

Ambedkar row: ಅಮಿತ್‌ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್

New Year Guidelines: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಹೈದರಾಬಾದ್ ಪೊಲೀಸರು

Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.