ಎಸ್‌ಟಿ ಪ್ರಮಾಣ ಪತ್ರಕ್ಕೆ ಆಗ್ರಹ


Team Udayavani, Feb 10, 2022, 5:30 PM IST

28ST

ವಿಜಯಪುರ: ಬೇಡ ಜಂಗಮ ಸಮುದಾಯದವರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡಲು ಆಗ್ರಹಿಸಿ ಅಖೀಲ ಕರ್ನಾಟಕ ಜಂಗಮ ಕ್ಷೇಮಾಭಿವೃದ್ಧಿ ಮಹಾಸಭಾ ವಿಜಯಪುರ ಜಿಲ್ಲಾ ಘಟಕದಿಂದ ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಹಾಸಭೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧರಾಮಯ್ಯ ಸಾವಳಗಿಮಠ ಮಾತನಾಡಿ, ಸಣ್ಣ ಕಾರಣದ ನೆಪವೊಡ್ಡಿ ಕರ್ನಾಟಕದಲ್ಲಿ ಜಂಗಮ ಜಾತಿಯನ್ನು ರಾಜ್ಯ ಸರಕಾರ ಯಾವದೇ ಜಾತಿಗಳ ಪ್ರವರ್ಗದಲ್ಲಿ ಸೇರಿಸದೇ ಅನ್ಯಾಯ ಮಾಡಲಾಗಿದೆ ಎಂದು ದೂರಿದರು.

ಜಂಗಮ ಸಮುದಾಯ 1921ರಲ್ಲಿ ದುರ್ಬಲ ವರ್ಗದಲ್ಲಿ ಇದ್ದ ಪಟ್ಟಿಯನ್ನೇ 1935ರ ಕೇಂದ್ರ ಸರ್ಕಾರದ ಪಟ್ಟಿಯಲ್ಲಿ ಪರಿಶಿಷ್ಟ ಜಾತಿ ಎಂದು ಉಪ ಬಂಧಿಸಿದೆ. ಸದರಿ ಪರಿಶಿಷ್ಟ ಜಾತಿ ಪಟ್ಟಿಯನ್ನು ಆಧರಿಸಿ 11-8-1950ರಲ್ಲಿ ರಚಿಸಲಾದ ಭಾರತ ಸಂವಿಧಾನ ಅಧಿ ನಿಯಮ 341ರ ಪ್ರಕಾರ ರಾಷ್ಟ್ರಪತಿಗಳು ವಂಶ ಪಾರಂಪರ್ಯ ಧಾರ್ಮಿಕ ಭಾಷಾ ವೃತ್ತಿಯಾದ ಕುಲ ಕಸುಬಿನ ಆಧಾರದ ಅಡಿಯಲ್ಲಿ ಬರುವ ಜಾತಿಗಳ ಪಟ್ಟಿಯಲ್ಲಿ ಪರಿಶಿಷ್ಟ ಜಾತಿಗಳ ಪಟ್ಟಿ ಎಂದು ಒಪ್ಪಿಕೊಂಡಿದೆ. ಇದನ್ನು ಆಧರಿಸಿ 1950 ಆದೇಶ 18-11-1950ರಂದು ಜಾರಿಗೊಳಿಸಿದೆ ಎಂದು ವಿವರಿಸಿದರು.

ಭಾಷಾವಾರು ರಾಜ್ಯಗಳ ಪುನಾರಚನೆ ಸಂದರ್ಭದಲ್ಲಿ ಹೈದರಾಬಾದ್‌ ರಾಜ್ಯದಲ್ಲಿದ್ದ ಕಲಬುರಗಿ, ಬೀದರ, ರಾಯಚೂರು ಜಿಲ್ಲೆಗಳನ್ನು ಅಂದಿನ ಮೈಸೂರು ರಾಜ್ಯಕ್ಕೆ ವರ್ಗಾಯಿಸಿ, ಈ ಜಲ್ಲೆಗಳಲ್ಲಿ ವಾಸಿಸುತ್ತಿರುವ ಜಂಗಮ ಸಮುದಾಯದ ಬೇಡ ಜಂಗಮರಿಗೆ ಜಿಲ್ಲಾ ಸಿಮಿತಗೊಳಿಸಿ ಕೇಂದ್ರ ಸರಕಾರ ಜಾರಿಗೊಳಿಸಿದೆ. ನಂತರ ವಿಧಿಸಿದ ಕ್ಷೇತ್ರ ನಿರ್ಭಂದನೆಯನ್ನು 1976ರಲ್ಲಿ ತೆಗೆದು ಹಾಕಿ 27-7-1977ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಾದ್ಯಂತ ಬೇಡ ಜಂಗಮರು ವಾಸಿಸುತ್ತಾರೆ. ಇದು ಇಡಿ ರಾಜ್ಯದ ಬೇಡ ಜಂಗಮರು ಪರಿಶಿಷ್ಟ ಜಾತಿಯ ಎಲ್ಲ ಸೌಲಭ್ಯ ಪಡೆಯುವ ಅರ್ಹತೆಯ ತಿದ್ದುಪಡಿ ಆದೇಶ ಹೊರಡಿಸಿದೆ. ಸಂವಿಧಾನದ ಅನುಚ್ಛೇದದಲ್ಲಿ ಸೂಚಿಸಿದ ಜಾತಿಗಳ 101ರ ಪಟ್ಟಿಯಲ್ಲಿ ಕ್ರಮಾಂಕ 19ರಲ್ಲಿ ಬೇಡ ಜಂಗಮ ಜಾತಿ ಎಂದು ನಮೂದಾಗಿರುತ್ತದೆ ಎಂದು ವಿವರಿಸಿದರು.

ಜಂಗಮರೆಂದ ಕೂಡಲೇ ಲಿಂಗಾಯತರು ಅಥವಾ ವೀರಶೈವರೆಂದೆ ಅನೇಕರು ಭಾವಿಸುತ್ತಾರೆ. ಈ ತಿಳಿವಳಿಕೆ ಯಿಂದಾಗಲೇ ಜಂಗಮರು ಸಹ ತಮ್ಮ ಶಾಲೆಯ ದಾಖಲೆ ಮುಂತಾದವುಗಳಲ್ಲಿ ಜಾತಿ ಕಾಲಂದಲ್ಲಿ ಲಿಂಗಾಯತ ಅಥವಾ ವೀರಶೈವ ಜಂಗಮ ಎಂದು ಬರೆಯುವ ರೂಢಿಯಾಗಿದೆ. ಆದ ಕಾರಣ ಸರ್ಕಾರ ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಮನವಿ ಮಾಡಿದರು.

ಮಹಾಸಭೆ ಜಿಲ್ಲಾಧ್ಯಕ್ಷ ಸಂಜೀವ ಹಿರೇಮಠ ಮಾತನಾಡಿ, ಕರ್ನಾಟಕ ಉತ್ಛ ನ್ಯಾಯಾಲಯ ಗೀತಾ ಕುಲಕರ್ಣಿ ಪ್ರಕರಣದಲ್ಲಿ ವೀರಶೈವ ಲಿಂಗಾಯತ ಇದು ಜಾತಿ ಎ ಅಲ್ಲ ಅದು ಒಂದು ಪಂಥ ಎಂದು ತೀರ್ಪುಕೊಟ್ಟಿದೆ. ಆದರು ಸಹ ಕರ್ನಾಟಕ ಸರಕಾರ ಪ್ರವರ್ಗ 3ಬಿ ಯಲ್ಲಿ ಜಾತಿ ಪ್ರಮಾಣ ಪತ್ರ ಕೊಡುತ್ತ ಬಂದಿದೆ. ಅದು ಸಹ ನ್ಯಾಯಾಂಗ ನಿಂದನೆ ಎಂದು ತಿಳಿದುಕೊಂಡರು ಸಹಿತ ಇನ್ನೂವರೆಗೆ 3ಬಿಯನ್ನು ಮುಂದುವರಿಸಿಕೊಂಡು ಬಂದಿದೆ ಎಂದು ದೂರಿದರು.

ಬೇಡ ಜಂಗಮ ಸಮಾಜದ ನೀಲಕಂಠ ಮಠ, ಶಾಂತೇಶ ನಿಂಬರಗಿಮಠ, ಎಸ್‌.ಎಸ್‌. ರೂಗಿಮಠ, ಐ.ಬಿ. ಮಠ, ಸಿ.ಎನ್‌. ಹಿರೇಮಠ, ಬಿ.ಐ. ಹಿರೇಮಠ, ಷಡಕ್ಷರಿ ಹಿರೇಮಠ, ಸದಾಶಿವಯ್ಯ ಅರಕೇರಿಮಠ, ಘನಕುಮಾರ, ಮಲ್ಲಯ್ಯ ಹಿರೇಮಠ, ಸಂಗಮೇಶ ಹಿರೇಮಠ, ಶ್ರೀಕಾಂತ ಹಿರೇಮಠ, ವಿಶ್ವನಾಥ ಹಿರೇಮಠ, ರಾಚಯ್ಯ ಚೌಕಿಮಠ, ಕುಮಾರ ವಿಭೂತಿಮಠ, ಸಂಗಮೇಶ ಹಿರೇಮಠ, ದಾನಮ್ಮ ತೆಗ್ಗಳ್ಳಿ, ಶಾಂತಾ ಹಿರೇಮಠ ಇರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.