![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Apr 6, 2022, 2:39 PM IST
ವಿಜಯಪುರ: ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಇತ್ಯರ್ಥಕ್ಕಾಗಿ ಶೀಘ್ರದಲ್ಲಿ ತಹಶೀಲ್ದಾರರಿಗೆ ಅನುಭೋಗದ ಹಕ್ಕಿನಡಿ ದಾರಿ ಮಾಡಿ ಕೊಡುವ ಅಧಿಕಾರವನ್ನು ವಹಿಸಿಕೊಡುವುದಾಗಿ ಕಂದಾಯ ಸಚಿವ ಆರ್. ಅಶೋಕ ಭರವಸೆ ನೀಡಿದ್ದಾರೆ.
ಅಖಂಡ ಕರ್ನಾಟಕ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ ನೇತೃತ್ವದಲ್ಲಿ ರೈತರು ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಕಂದಾಯ ಸಚಿವ ಆರ್.ಅಶೋಕ, ರೈತರ ಬೇಡಿಕೆಯನ್ನು ಸಹಾನುಭೂತಿಯಂದ ಪರಿಶೀಲಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ರೈತರು ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ತೀವ್ರವಾಗುತ್ತಿದೆ. ದಾರಿ ಇಲ್ಲದ ಕಾರಣ ಜಮೀನುಗಳಿಗೆ ಮಳೆಯಾದರೂ ಬಿತ್ತನೆಗಾಗಿ ಹೊಲಕ್ಕೆ ಹೋಗುವುದು ತೊಂದರೆಯಾಗುತ್ತಿದೆ. ಆದ್ದರಿಂದ ಹಳ್ಳಿಗಳಲ್ಲಿ ರೈತರ ಮಧ್ಯೆ ಹೊಡೆದಾಟಗಳು, ಪೊಲೀಸ್ ಪ್ರಕರಣಗಳು, ಕೋರ್ಟ್ ಕಚೇರಿ ಅಲೆದಾಟಗಳು ನಡೆಯುತ್ತಿವೆ ಎಂದು ಸಮಸ್ಯೆಯ ಗಂಭೀರತೆಯನ್ನು ಮನವರಿಕೆ ಮಾಡಿಕೊಟ್ಟರು. ಮಳೆಯಾದರೂ ದಾರಿಯ ಸಮಸ್ಯೆಯ ಕಾರಣ ಜಮೀನು ಹೂಳು ಬಿದ್ದು ರೈತ ಕುಟುಂಬಗಳು ಬೀದಿಪಾಲಾಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೊಲಗಳಿಗೆ ಹೋಗುವ ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ಈ ಹಿಂದೆ ತಹಶೀಲ್ದಾರರಿಗೆ ಇತ್ತು. ಹೀಗಾಗಿ ಮೊದಲಿದ್ದಂತೆ ಹೊಲದ ದಾರಿ ಸಮಸ್ಯೆ ಪರಿಹಾರದ ಅಕಾರವನ್ನು ತಹಶೀಲ್ದಾರರಿಗೆ ನೀಡಬೇಕು ಎಂದು ಆಗ್ರಹಿಸಿದರು.
ಇದಲ್ಲದೇ ರಾಜ್ಯಾದ್ಯಂತ ಜಮೀನುಗಳನ್ನು ಪುನಃ ಮೋಜಣಿ ಮಾಡಿಸಿ ಹದ್ದಿ ಗುರುತಿಸಬೇಕು. ಇದರಿಂದ ಖರಾಬು ಕ್ಷೇತ್ರ ಗುರುತಿಸಿ ಅದನ್ನೇ ವಹಿವಾಟು ದಾರಿ ಎಂದು ಪರಿಗಣಿಸಬೇಕು. ಖರಾಬು ಕ್ಷೇತ್ರವಿಲ್ಲದ ಜಮೀನುಗಳಲ್ಲಿ ತಹಶೀಲ್ದಾರರು ಇಜಿಲೆಂಟ್ ಕಾಯ್ದೆ ಒಳಗಡೆ ದಾರಿ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ರೈತರ ಸಮಸ್ಯೆ ಆಲಿಸಿದ ಕಂದಾಯ ಸಚಿವ ಆರ್.ಅಶೊಕ, ರೈತರ ಜಮೀನು ದಾರಿ ಸಮಸ್ಯೆ ಸರ್ಕಾರದ ಗಮನಕ್ಕಿದ್ದು ಇದು ರಾಜ್ಯಾದ್ಯಂತ ರೈತರಿಗೆ ತೀವ್ರ ಸಮಸ್ಯೆಯಾಗಿದೆ. ಆದ್ದರಿಂದ ಶೀಘ್ರದಲ್ಲಿ ದಾರಿ ಸಮಸ್ಯೆ ಇತ್ಯರ್ಥಪಡಿಸಲು ಜಮೀನು ಮೋಜಣಿ ಮಾಡಿಸುವುದಾಗಿ ಭರವಸೆ ನೀಡಿದರು. ಸದಾಶಿವ ಬರಟಗಿ, ಹೊನಕೇರೆಪ್ಪ ತೆಲಗಿ, ಚಂದ್ರಾಪ ಹಿಪ್ಪಲಿ, ಶಕೀಲದಾರ ಕರ್ಜಗಿ ಇದ್ದರು.
ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ
Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ
Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !
Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್
Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.