ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯಲ್ಲಿ 144 ಕಲಂರನ್ವಯ ನಿಷೇಧಾಜ್ಞೆ ಜಾರಿ


Team Udayavani, Mar 15, 2022, 4:45 PM IST

ಕಾನೂನು ಸುವ್ಯವಸ್ಥೆ ಕಾಪಾಡಲು ವಿಜಯಪುರ ಜಿಲ್ಲೆಯಲ್ಲಿ 144 ಕಲಂರನ್ವಯ ನಿಷೇಧಾಜ್ಞೆ ಜಾರಿ

Representative Image Used

ವಿಜಯಪುರ: ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ಹೊರಬಿದ್ದಿರವ ಹಿನ್ನಲೆಯಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮುಂಜಾಗೃತ ಕ್ರಮವಾಗಿ ವಿಜಯಪುರ ಜಿಲ್ಲೆಯಾದ್ಯಂತ ಮಾ. 15 ರಿಂದ 17 ರ ಬೆಳಗ್ಗೆ 6 ಗಂಟೆ ವರೆಗೆ ಷರತ್ತು‌ ಬದ್ಧವಾಗಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುನಿಲಕುಮಾರ ಆದೇಶ ಹೊರಡಿಸಿದ್ದಾರೆ.

ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ರ ಪ್ರತಿಬಂಧಕ ಆಜ್ಞೆಯನ್ನು ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಬಂಧಿಸಿದೆ. ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ, ರ್ಯಾಲಿಗಳನ್ನು ನಿಷೇಧಿಸಲಾಗಿದೆ.

ಕಾನೂನು-ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಿದೆ.  ಶವ ಸಂಸ್ಕಾರಕ್ಕೆ, ಹೊಟೇಲ್‍ಗಳಿಗೆ, ಚಲನಚಿತ್ರ ಮಂದಿರಗಳಿಗೆ, ಧಾರ್ಮಿಕ ಮತ್ತು ಮದುವೆ ಮೆರವಣಿಗೆ ನಡೆಸಲು‌ ಈ ಆದೇಶ ಅನ್ವಯಿಸುವುದಿಲ್ಲ.

ಇದನ್ನೂ ಓದಿ:ಹಿಜಾಬ್ ಇಲ್ಲದೆ ಕಾಲೇಜಿಗೆ ಹೋಗುವುದಿಲ್ಲ; ಕೋರ್ಟ್ ಮೆಟ್ಟಿಲೇರಿದ್ದ ಉಡುಪಿ ವಿದ್ಯಾರ್ಥಿನಿಯರು

ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕರಿಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ. ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗಧೆ, ಬಂದೂಕು, ಚಾಕು, ಕೋಲು ಅಥವಾ ಲಾಠಿ ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರೆ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ. ಪಟಾಕಿಗಳನ್ನು ಸಿಡಿಸುವುದು, ಯಾವುದೇ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ. ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆ ಉಂಟು ಮಾಡಬಹುದಾದ, ರಾಜ್ಯದ ಭದ್ರತೆ ಕುಗ್ಗಿಸಬಹುದಾದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಮಾಡುವುದು, ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಸಂಕೇತಗಳನ್ನು, ಭಿತ್ತಿ ಪತ್ರಗಳನ್ನು ಅಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥ ತಯಾರಿಸುವ, ಪ್ರದರ್ಶಿಸುವ ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಇದನ್ನೂ ಓದಿ:ಹಿಜಾಬ್ ಕುರಿತಾಗಿ ‘ಹೈ’ ತೀರ್ಪು: ಮಹತ್ತರ ತೀರ್ಪಿನಲ್ಲಿ ಹೈಕೋರ್ಟ್ ಉಲ್ಲೇಖಿಸಿದ ಅಂಶಗಳೇನು?

ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸದರಿ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು ಎಂದು ಆದೇಶಿಸಿದ್ದಾರೆ.

ಅಲ್ಲದೇ ಸದರಿ ಆದೇಶ ಉಲ್ಲಂಘಿಸಿದವರ ಮೇಲೆ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು. ಈ ಪ್ರತಿಬಂಧಕಾಜ್ಞೆ ಜಿಲ್ಲೆಯಲ್ಲಿ ಕಾನೂನು-ಸುವ್ಯವಸ್ಥೆಯ ಪರಿಸ್ಥಿತಿಯ ಅವಲೋಕನೆ ಮಾಡಿ, ಅವಶ್ಯವಿದ್ದಲ್ಲಿ ಮುಂದಿನ ವಿಸ್ತರಿಸುವ ಷರತ್ತಿಗೆ ಒಳಪಟ್ಟಿರುತ್ತದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.