ವರಿಷ್ಠರು ಲೆಕ್ಕಾಚಾರ ಮಾಡಿ ವಿಜಯೇಂದ್ರಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ: ಕಾರಜೋಳ
Team Udayavani, Nov 12, 2023, 3:05 PM IST
ವಿಜಯಪುರ: ಬಿಜೆಪಿ ಕೇಂದ್ರ ವರಿಷ್ಠರು ಲೆಕ್ಕಾಚಾರ ಮಾಡಿಯೆ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಸಕ್ರಿಯ ರಾಜಕೀಯದಲ್ಲಿರುವ ಆಕಾಂಕ್ಷಿಗಳು ಅವಕಾಶ ತಪ್ಪಿದ್ದಕ್ಕೆ ಸಹಜವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸಹಜ ಪ್ರಕ್ರಿಯೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದ್ದಾರೆ.
ಭಾನುವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ನಮ್ಮ ಪಕ್ಷ ಸರ್ಕಾರವನ್ನು ಕಳೆದುಕೊಂಡಿದೆ. ಹೀಗಾಗಿ ಪಕ್ಷದ ವರಿಷ್ಠರು ಅಳೆದು ತೂಗಿ ಯುವನಾಯಕ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದಾರೆ. ಮನೆಯಲ್ಲಿ ಅನುಭವಿ ತಂದೆ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ವಿಜಯೇಂದ್ರ ಎಲ್ಲ ಸಮುದಾಯದ ನಾಯಕರನ್ನು ಒಗ್ಗೂಡಿಸಿ ಕರೆದೊಯ್ಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
2013 ರಲ್ಲಿ ಯಶಸ್ವಿಯಾಗಿದ್ದ ಸಿದ್ದರಾಮಯ್ಯ ತಮ್ಮದೇ ಸರ್ಕಾರವಿದ್ದರೂ 2018ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ ಕಾರಜೋಳ, ಆಯಾ ಕಾಲಘಟ್ಟದಲ್ಲಿ ಜನರ ಮನಸ್ಥಿತಿಯೂ ಬದಲಾಗುತ್ತದೆ. ಗ್ಯಾರಂಟಿ ತೋರಿಸಿ ಕಾಂಗ್ರೆಸ್ ಗೆದ್ದಿದೆ. ಹಾಗಂತ ಯಾವುದೂ ಶಾಶ್ವತವಾಗಿ ಇರಲು ಸಾಧ್ಯವಿಲ್ಲ ಎಂದರು.
ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಒಬ್ಬರೇ ಕಾರಣರಲ್ಲ. ಗ್ಯಾರಂಟಿ ಹೆಸರಿನ ಸುಳ್ಳು ಕಾರಣ. ಹೀಗಾಗಿ ಸಿದ್ದರಾಮಯ್ಯ ಅವರಿಗೆ ತಾಕತ್ತಿದ್ದರೆ ಮತ್ತೊಮ್ಮೆ ಚುನಾವಣೆ ಎದುರಿಸಿ ಗೆದ್ದು ಬರಲಿ ಎಂದು ಸವಾಲು ಹಾಕಿದರು.
ಲೋಕಸಭೆ ಚುನಾವಣೆಯಲ್ಲಿ ನಾನು ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿರುವ ಕಾರಜೋಳ, ಯುವಕರಿಗೆ ಅವಕಾಶ ನೀಡಲು ಹಾಲಿ ಸಂಸದ ಸದಾನಂದಗೌಡ ಮರು ಸ್ಪರ್ಧೆ ಇಲ್ಲವೆಂದಿದ್ದಾರೆ. ಸದಾನಂದಗೌಡ ಅವರ ಈ ನಿರ್ಧಾರದ ಹಿಂದೆ ಪಕ್ಷದ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ನಾಯಕರ ಗ್ಯಾರಂಟಿ ಅಸೆಯ ಮಾತು ಕೇಳಿ ರಾಜ್ಯದ ಮತದಾರ ಮೋಸ ಹೋಗಿದ್ದು, ರಾಜ್ಯ ಸರ್ಕಾರದ ವಿರುದ್ಧ ರೋಷಗೊಂಡಿದ್ದಾನೆ. ರಾಜ್ಯದ ಜನರು ದೀಪಾವಳಿ ಹಬ್ಬದಲ್ಲೂ ಕತ್ತಲಲ್ಲಿ ಕುಳಿತುಕೊಳ್ಳುವಂತೆ ಮಾಡಿದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾಕ್ರೋಶ ಭಾರಿ ಪ್ರಮಾಣದಲ್ಲಿ ವ್ಯಕ್ತವಾಗಿದೆ ಎಂದರು.
ಇದನ್ನೂ ಓದಿ:World Cup: ಉಪಾಂತ್ಯಕ್ಕೆ ಮೊದಲು ಟೀಂ ಇಂಡಿಯಾಗೆ ಡಚ್ಚರ ಸವಾಲು; ಟಾಸ್ ಗೆದ್ದ ಭಾರತ
ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ ಸರ್ಕಾರ ಅನ್ನದಾತರ ನೆರವಿಗೆ ಧಾವಿಸಿಲ್ಲ. ಪಂಪ್ ಸೆಟ್ ಗಳಿಗೆ ವಿದ್ಯುತ್ ಕೊಡಲಾಗದ ಸುಳ್ಳು ಗ್ಯಾರಂಟಿ ಸರ್ಕಾರ, ರೈತರ ಪಂಪ್ ಸೆಟ್ ವಿದ್ಯುತ್ ಸಂಪರ್ಕ ಪಡೆಯಲು ಲಕ್ಷಾಂತರ ರೂ. ಹೊರೆ ಹೇರಲು ಮುಂದಾಗಿದೆ. ಹೀಗಾಗಿ ಕಾಂಗ್ರೆಸ್ ಸರ್ಕಾರದ ಆಡಳಿತಕ್ಕೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ ಎಂದು ಹರಿಹಾಯ್ದರು.
ಪಕ್ಷದ ವರಿಷ್ಠರು ಯುವ ನಾಯಕರಿಗೆ ಪಕ್ಷ ಕಟ್ಟುವ ಜವಾಬ್ದಾರಿ ನೀಡಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಕಟ್ಟಲು ಯಡಿಯೂರಪ್ಪ 50 ವರ್ಷ ದುಡಿದಿದ್ದು, ಅವರೊಂದಿಗೆ ದುಡಿದ ನನಗೂ ಉತ್ತಮ ಅವಕಾಶ ಸಿಕ್ಕಿವೆ ಎಂದರು.
ಲೋಕಸಭೆ ಚುನಾವಣೆಯಲ್ಲಿ ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ 25 ಸ್ಥಾನ ಮಾತ್ರವಲ್ಲ 28 ಕ್ಷೇತ್ರಗಳಲ್ಲೂ ವಿಜಯ ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಿಜಯೇಂದ್ರ ನೇಮಕದಿಂದ ಕಾಂಗ್ರೆಸ್ ಪಕ್ಷ, ಸರ್ಕಾರದ ಮೇಲೆ ಏನೂ ಪರಿಣಾಮ ಬೀರದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರಬಹುದು. ಹಾಗಿದ್ದರೆ ಈ ಹಿಂದೆ ಅವರೇ ಮುಖ್ಯಮಂತ್ರಿ ಆಗಿದ್ದರೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರಲು ಏಕೆ ಸಾಧ್ಯವಾಗಲಿಲ್ಲ ಎಂದು ತಿರುಗೇಟು ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Delhi CM; ಕೇಜ್ರಿವಾಲ್ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
Shiv sena:ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ: ಶಿವಸೇನಾ ಶಾಸಕ
Delhi Govt: ದೆಹಲಿ ಸಿಎಂ ರೇಸ್ ನಲ್ಲಿದ್ದಾರೆ ಹಲವರು..: ಇಲ್ಲಿದೆ ವಿವರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.