ಭೀಮಾ ಸಂತ್ರಸ್ತರ ನೆರವಾಗಲು ತಾಂತ್ರಿಕ ಕಾರಣ ಅಡ್ಡಿ: ಶಿವಾನಂದ ಪಾಟೀಲ್


Team Udayavani, Oct 24, 2020, 3:24 PM IST

ಭೀಮಾ ಸಂತ್ರಸ್ತರ ನೆರವಾಗಲು ತಾಂತ್ರಿಕ ಕಾರಣ ಅಡ್ಡಿ: ಶಿವಾನಂದ ಪಾಟೀಲ್

ವಿಜಯಪುರ: ವಿಜಯಪುರ ಜಿಲ್ಲೆ ಸೇರಿದಂತೆ ಪ್ರವಾಹ ಬಾಧಿತ ಉತ್ತರ ಕರ್ನಾಟಕದಲ್ಲಿ ಭೀಮಾ ನದಿ ಪಾತ್ರದ ಸಂತ್ರಸ್ತರಿಗೆ ನೆರವಾಗಲು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಿದ್ಧವಿದೆ. ಆದರೆ ಸರ್ಕಾರ ತಾನೇ ಪಡೆದ ದೇಣಿಗೆ ಹಣಕ್ಕೆ ಅನುಮತಿ ನೀಡುತ್ತಿಲ್ಲ. ನಬಾರ್ಡ್ ಕೂಡ ಅನುಮತಿಸುತ್ತಿಲ್ಲ. ಹೀಗಾಗಿ ಭೀಮಾ ಪ್ರವಾಹ ಪೀಡಿತರಿಗೆ ನೆರವಾಗಲು ಸಾಧ್ಯವಾಗುವುದಿಲ್ಲ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ, ಶಾಸಕ ಶಿವಾನಂದ ಪಾಟೀಲ ಹೇಳಿದರು.

ಶನಿವಾರ ಡಿಸಿಸಿ ಬ್ಯಾಂಕ್‍ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಸರ್ಕಾರಕ್ಕೆ ಕೋವಿಡ್-19 ಸಂಕಷ್ಟದ ಪರಿಹಾರಕ್ಕೆ 1 ಕೋಟಿ ರೂ. ಹಾಗೂ ಕೋವಿಡ್ ವಾರಿಯರ್ ಆಶಾ ಕಾರ್ಯಕರ್ತೆಯರಿಗೆ 50 ಲಕ್ಷ ರೂ. ನೀಡಿದ್ದೇವೆ. ಸರ್ಕಾರ ದೇಣಿಗೆ ನೀಡಿದ ಹಣಕ್ಕೆ ಅನುಮತಿ ಪತ್ರ ನೀಡುತ್ತಿಲ್ಲ. ಇದರಿಂದ ನಬಾರ್ಡ್‍ನಲ್ಲೂ ತಕರಾರು ಆಗಲಿದ್ದು, ಭೀಮಾ ಸಂತ್ರಸ್ತರಿಗೆ ನೆರವಾಲು ತೊಡಕಾಗಿದೆ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಇದಲ್ಲದೇ ಕೋವಿಡ್ ಸಂಕಷ್ಟಕ್ಕಾಗಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ನಿಡಿರುವ 1 ಕೋಟಿ ರೂ. ಇತರೆ ಕಾರಣಗಳು, ಸರ್ಕಾರ ತಾನು ನೀಡುತ್ತಿದ್ದ ಬಡ್ಡಿ ದರದಲ್ಲಿ 0.30 ಕಡಿತ ಮಾಡಿದೆ. ಸಾಲ ಮರುಪಾವತಿ ವಿಷಯದಲ್ಲಿ ಬಲವಂತ ಮಾಡದ ಕಾರಣವೂ ಮರುಪಾವತಿ ಕಡಿಮೆ ಆಗಿದೆ. ಇಂಥ ಹಲವು ಕಾರಣಗಳಿಂದ ಪ್ರಸಕ್ತ ವರ್ಷದ ನಿವ್ವಳ ಲಾಭದಲ್ಲಿ ಸುಮಾರು 2 ಕೋಟಿ ರೂ. ಕಡಿಮೆಯಾಗಿದೆ. ಕಳೆದ ವರ್ಷ 12 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದರೆ, ಪ್ರಸಕ್ತ ಆರ್ಥಿಕ ವರ್ಷದಲ್ಲಿ 10.69 ಕೋಟಿ ರೂ. ಮಾತ್ರ ನಿವ್ವಳ ಲಾಭ ಗಳಿಸಿದೆ. ಆದರೆ ರೈತರಿಗೆ ಸಾಲ ನೀಡಿಕೆಯಲ್ಲಿ ಕಳೆದ ವರ್ಷ 50 ಸಾವಿರ ರೂ. ನೀಡಲು ಇದ್ದ ಅವಕಾಶವನ್ನು ಈ ಬಾರಿ 55 ಸಾವಿರ ರೂ.ಗೆ ಏರಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ:ರಾಜ್ಯದ ಪ್ರತಿಯೊಬ್ಬ ಚಾಲಕರ ಕಷ್ಟ- ಸುಖದ ಜತೆ ನಾವಿರುತ್ತೇವೆ: ಡಿ.ಕೆ ಶಿವಕುಮಾರ್

ಕೋವಿಡ್ ಕಾರಣದಿಂದಾಗಿ ಉದ್ದೇಶಿತ ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಶತಮಾನೋತ್ಸವದ ಅದ್ದೂರಿ ಸಮಾರಂಭವನ್ನು ರದ್ದು ಮಾಡಿ, ಸಾಂಕೇತಿಕ ಹಾಗೂ ಸರಳ ರೀತಿಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಆದರೆ ನವೆಂಬರ್ 20 ರಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೇತೃತ್ವದಲ್ಲಿ ನಗರದಲ್ಲಿ ಅಖಿಲ ಭಾರತ 67ನೇ ಸಹಕಾರಿ ಸಪ್ತಾಹ ಸಮಾರೋಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನವೆಂಬರ್ 14 ರಿಂದ 20 ರ ವರೆಗೆ ದೇಶದಲ್ಲಿ ಸಹಕಾರ ಸಪ್ತಾಹ ಹಮ್ಮಿಕೊಂಡಿದ್ದು, ಸಮಾರೋಪ ಕಾರ್ಯಕ್ರಮ ವಿಜಯಪುರದಲ್ಲಿ ನಡೆಯಲಿದೆ ಎಂದರು.

ಸಹಕಾರಿ ಸಂಸ್ಥೆಗಳ ಮೂಲಕ ಆರ್ಥಿಕ ಸೇರ್ಪಡೆ, ಡಿಜಿಟಲೈಸೇಶನ್ ಮತ್ತು ಸಾಮಾಜಿಕ ಜಾಲತಾಣ ವಿಷಯದೊಂದಿಗೆ ಸಹಕಾರಿ ಸಪ್ತಾಹ ಸಮಾರೋಪ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರಿ ಮಹಾ ಮಂಡಳ, ಜಿಲ್ಲಾ ಸಹಕಾರಿ ಯೂನಿಯನ್, ಕರ್ನಾಟಕ ರಾಜ್ಯದ ಉಣ್ಣೆ ಕೈಮಗ್ಗ ನೇಕಾರರ ಮಹಾ ಮಂಡಲ, ರಾಜ್ಯ ಕುಕ್ಕುಟ ಮಹಾಮಂಡಳ, ಸಹಕಾರಿ ನೂಲಿನ ಗಿರಣಿಗಳ ಮಹಾಮಂಡಲ ಸಹಯೋಗದಲ್ಲಿ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Basangouda Patil Yatnal

BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ

ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್

Gadinadu-Award

Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ

2-muddebihal

Muddebihal: ನಿಂತಿದ್ದ ಕ್ಯಾಂಟರ್‌ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.