ಮೋರಟಗಿ ಪೊಲೀಸ್‌ ಠಾಣೆಗೆ ಸಿಬ್ಬಂದಿ ಕೊರತೆ


Team Udayavani, Jan 17, 2022, 6:04 PM IST

20police

ಮೋರಟಗಿ: ಗ್ರಾಮದ ಹೊರ ವಲಯದಲ್ಲಿರುವ ಹೊರ ಪೊಲೀಸ್‌ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿಂದ ಪೊಲೀಸರು ಪರದಾಡುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 218 ಅಪಘಾತ ವಲಯವಾಗಿದ್ದು ದಿನ ನಿತ್ಯ ಒಂದಿಲ್ಲ ಒಂದು ದುರಂತಗಳು ನಡೆಯುತ್ತಿವೆ. ಇದನ್ನು ನಿಭಾಯಿಸುವಲ್ಲಿ ಇಲ್ಲಿರುವ ಮೂವರು ಪೊಲೀಸರು ಕಷ್ಟಪಡುತ್ತಿದ್ದಾರೆ. ಹೀಗಾಗಿ ಈ ಠಾಣೆಗೆ ಇನ್ನೂ ಎರಡು ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಅಗ್ರಹಿಸಿದ್ದಾರೆ.

ಮೋರಟಗಿ ಹೊರ ಪೊಲೀಸ್‌ ಠಾಣೆಯು ನಗಾವಿ (ಬಿಕೆ ), ಭಂಟನೂರ, ಗುತ್ತರಗಿ, ಗೊರವಗುಂಡಗಿ, ನಗಾವಿ (ಕೆಡಿ ), ಕೆರೂರ, ಗಾಬಸಾವಳಗಿ, ಹಂಚಿನಾಳ, ಜಾಟ್ನಾಳ, ಕಕ್ಕಳಮೆಲಿ, ಬಗಲೂರ್‌, ಶಿರಸಗಿ, ಕುಳೇಕುಮಟಗಿ, ಮೋರಟಗಿ ಸೇರಿದಂತೆ ಸುಮಾರು 15 ಹಳ್ಳಿಗಳಿಗೆ ಕೇಂದ್ರ ಬಿಂದುವಾಗಿದೆ. ಪ್ರತಿ ಮಂಗಳವಾರ ಇಲ್ಲಿ ಸಂತೆ ನಡೆಯುತ್ತದೆ. ಸಂತೆಯಲ್ಲಿ ಸುಮಾರು ಸಾವಿರಕ್ಕಿಂತ ಅಧಿಕ ಜನರು ವ್ಯಾಪಾರಕ್ಕೆ ಬರುತ್ತಾರೆ. ಸಂತೆಯಲ್ಲಿ ಮೊಬೈಲ್‌, ಕಿಸೆಗಳ್ಳತನ ಹೆಚ್ಚಾಗಿದೆ ಮತ್ತು ಸಂತೆಯ ದಿನದಂದು ರಾಷ್ಟ್ರೀಯ ಹೆದ್ದಾರಿಯಲ್ಲೇ ಆಟೋ ರಿಕ್ಷಾ, ಜಿಪ್‌, ದ್ವಿಚಕ್ರ ವಾಹನಗಳು ಸರತಿ ಸಾಲಿನಲ್ಲಿ ನಿಲ್ಲಿಸುತ್ತಿರುವುದರಿಂದ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿದೆ.

ದಿನ ಬೆಳಗಾದರೆ ಸಾರ್ವಜನಿಕರು ನೂರಾರು ಸಮಸ್ಯೆ ಹೊತ್ತು ಪೊಲೀಸ್‌ ಠಾಣೆಗೆ ಬರುತ್ತಾರೆ. ಕೆಲವೊಮ್ಮೆ ಅಹವಾಲು ಸ್ವೀಕರಿಸಲು ಠಾಣೆಯಲ್ಲಿ ಸಿಬ್ಬಂದಿಗಳು ಕೂಡಾ ಇರುವುದಿಲ್ಲ. ಇರುವ ಮೂವರು ಸಿಬ್ಬಂದಿ ಕೆಲಸದ ನಿಮಿತ್ತ ಪಕ್ಕದ ಹಳ್ಳಿಗೆ ಬಂದಿದ್ದೇವೆ ಎಂದು ಹೇಳುವುದು ಸಾಮಾನ್ಯವಾಗಿದೆ.

ಅಕ್ರಮ ದಂಧೆಗಳಿಗಿಲ್ಲ ಬ್ರೇಕ್‌

ಅಕ್ರಮ ಮರಳು ಸಾಗಾಣಿಕೆಗೆ ಹೆಸರಾದ ಘತ್ತರಗಿ ಗ್ರಾಮ ಇಲ್ಲಿಂದ ಕೇವಲ 8 ಕಿ.ಮೀ ಮಾತ್ರ ದೂರವಿದೆ. ಮಧ್ಯರಾತ್ರಿ ಅಡ್ಡ ರಸ್ತೆಯಿಂದ ಮರಳು ಸಾಗಿಸುತ್ತಾರೆ. ಇದನ್ನು ತಡೆಗಟ್ಟಲು ಪೊಲೀಸರು ಹರಸಾಹಸ ಪಟ್ಟರು ವಾಹನಗಳು ಸಿಗುತ್ತಿಲ್ಲ. ಸಿಬ್ಬಂದಿ ಕೊರತೆಯಿಂದ ಅಕ್ರಮಕೋರರು ಲಾಭ ಪಡೆದುಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಕ್ರಮ ಮರಳು ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಮಟಕಾ, ಇಸ್ಪೀಟ್‌, ಜೂಜಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಇದನ್ನು ತಡೆಗಟ್ಟುವಲ್ಲಿ ಪೊಲೀಸ್‌ ಸಿಬ್ಬಂದಿಗಳು ಸಂಪೂರ್ಣ ವಿಫಲವಾಗುತ್ತಿದ್ದಾರೆ ಎಂದು ಜನ ಆರೋಪಿಸಿದ್ದಾರೆ. ಕೂಡಲೇ ಅಕ್ರಮ ದಂಧೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮೇಲಧಿಕಾರಿಗಳು ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಬೇಕು ಎಂದು ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ.

ರಾತ್ರಿ ಪೊಲೀಸರು ಹಳ್ಳಿಗಳಲ್ಲಿ ಏನ್‌ ಬರತಾರೆ ಬಿಡಿ ಎಂದು ಹಳ್ಳಿ ಜನ ಕಡೆಗಣಿಸುವುದು ಸರ್ವೇ ಸಾಮಾನ್ಯವಾಗಿದೆ. ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲೇ ಇಸ್ಪೀಟ್‌, ಮಟಕಾ, ಸಾರಾಯಿ ಅಕ್ರಮ ದಂಧೇಗಳು ನಡೆಯುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿವೆ. ಇದನ್ನು ತಡೆಗಟ್ಟಲು ಮೋರಟಗಿ ಠಾಣೆಗೆ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಲೇಬೇಕು. -ಪ್ರಧಾನಿ ಮೂಲಿಮನಿ, ಭಂಟನೂರ ಗ್ರಾಮಸ್ಥ

ಈಗಾಗಲೇ ಮೋರಟಗಿ ಹೊರ ಠಾಣೆಗೆ ಸಿಬ್ಬಂದಿ ಕೊರತೆ ಇರುವುದು ಗಮನಕ್ಕೆ ಬಂದಿದೆ. ಇಷ್ಟು ದಿನ ಸಿಂದಗಿ ತಾಲೂಕಿನಲ್ಲಿ ಸಿಬ್ಬಂದಿನಗಳು ಕಡಿಮೆ ಇರುವುದರಿಂದ ಮೋರಟಗಿ ಠಾಣೆಗೆ ಸಾಕಷ್ಟು ಸಿಬ್ಬಂದಿ ನಿಯೋಜನೆ ಮಾಡಲು ಆಗಿಲ್ಲ. ಸದ್ಯಕ್ಕೆ ಒಬ್ಬ ಎಎಸೈ, ಇಬ್ಬರು ಪಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೂಡಲೇ ಎರಡು ದಿನಗಳಲ್ಲಿ ಇನ್ನೊರ್ವ ಸಿಬ್ಬಂದಿಗೆ ನಿಯೋಜನೆ ಮಾಡುತ್ತೇನೆ. -ಶ್ರೀಧರ ದಡ್ಡಿ ,ಡಿವೈಎಸ್‌ಪಿ, ಇಂಡಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.