ಕನ್ನಡ ಭಾಷೆ ಮೇಲಿನ ಪಾಪು ಪ್ರೀತಿ ಪ್ರಶ್ನಾತೀತ


Team Udayavani, Mar 18, 2020, 6:32 PM IST

18-March-34

ಸಿಂದಗಿ: ಮೊನಚು ಬರಹಗಳಿಂದ ಪ್ರಸಿದ್ಧರಾಗಿದ್ದ ಹಿರಿಯ ಪತ್ರಕರ್ತ, ಲೇಖಕ, ಕನ್ನಡಪರ ಹೋರಾಟಗಾರ ಡಾ|ಪಾಟೀಲ ಪುಟ್ಟಪ್ಪ ಅವರು ಸೋಮವಾರ ಪ್ರಪಂಚಕ್ಕೆ ವಿದಾಯ ಹೇಳಿದ ಹಿನ್ನೆಲೆಯಲ್ಲಿ ಸಿಂದಗಿ ತಾಲೂಕಿನ ಜನಪ್ರತಿನಿಧಿಗಳು, ಮಠಾಧೀಶರು, ಸಾಹಿತಿಗಳು, ಪತ್ರಕರ್ತರು ಮಂಗಳವಾರ ಸಂತಾಪ ಸೂಚಿಸಿದ್ದಾರೆ.

ಗೋಕಾಕ ಚಳವಳಿ ಸಮಿತಿ ತಾಲೂಕಾಧ್ಯಕ್ಷ ಡಾ| ಬಿ.ಆರ್‌.ನಾಡಗೌಡ ನೇತೃತ್ವದಲ್ಲಿ ಸಿಂದಗಿ ಪಟ್ಟಣದಲ್ಲಿ ನಡೆದ ಗೋಕಾಕ ಚಳವಳಿ ಪ್ರಚಾರ ಕಾರ್ಯಕ್ರಮದಲ್ಲಿ ನಟ ಡಾ|ರಾಜಕುಮಾರ,ಶಂಕರನಾಗ ಅವರ ಜೊತೆಗೆ ಡಾ| ಪಾಟೀಲ ಪುಟ್ಟಪ್ಪ ಭಾಗವಹಿಸಿದ್ದರು. ಅವರು ಭಾರತೀಯ ಬರಹಗಾರ, ಅನುಭವಿ ಪತ್ರಕರ್ತರು. 1940 ಮತ್ತು 1950ರ ದಶಕದ ಅಂತ್ಯದಲ್ಲಿ ಕನ್ನಡಿಗರು ಬಹುಸಂಖ್ಯಾತರಾಗಿದ್ದ ಪ್ರದೇಶಗಳನ್ನು ಏಕೀಕರಿಸುವಂತೆ ಒತ್ತಾಯಿಸಿ ಆಂದೋಲನದಲ್ಲಿ ಮುಂಚೂಣಿಯಲ್ಲಿದ್ದರು. ಅವರು ಕನ್ನಡ ಭಾಷಾ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾಗಿದ್ದರು. ನಂತರ ಇದನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಎಂದು ಮರು ನಾಮಕರಣ ಮಾಡಲಾಯಿತು. 2003ರಲ್ಲಿ ಬೆಳಗಾವಿಯಲ್ಲಿ ನಡೆದ 70ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿದ್ದರು. 1949ರಲ್ಲಿ ಕ್ಯಾಲಿಫೋರ್ನಿಯಾ ಸ್ಟೇಟ್‌ ಯೂನಿವರ್ಸಿಟಿಯಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದರು.

ಪಾಟೀಲ ಪುಟ್ಟಪ್ಪನವರ ಕನ್ನಡ ಭಾಷೆ ಮೇಲಿನ ಪ್ರೀತಿ, ನೆಲ, ಜಲದ ಮೇಲಿನ ಕಾಳಜಿ ಮತ್ತು ಬದ್ಧತೆ ಪ್ರಶ್ನಾತೀತವಾದ್ದು. ಎಂಥ ವೈರಿಯೂ ಮೆಚ್ಚುವಂತಹದ್ದು. ನಲವತ್ತು-ಐವತ್ತು ದಶಕಗಳ ಕಾಲ ಕನ್ನಡ ಭಾಷೆ ಕುರಿತಂತೆ ಎಂಥದೇ ಸಮಸ್ಯೆ ಎದುರಾದಾಗ ಪುಟ್ಟಪ್ಪ ಏನು ಹೇಳುತ್ತಾರೆ ಎಂದು ನಾಡಿಗೆ ನಾಡೇ ಎದುರು ನೋಡುತ್ತಿತ್ತು. ಒಂದು ಕಾಲಕ್ಕೆ ಏಳು ಪತ್ರಿಕೆಗಳನ್ನು ನಡೆಸಿ, ಪತ್ರಿಕೋದ್ಯಮದ ಭೀಷ್ಮ ಎನಿಸಿಕೊಂಡವರು. ಅವರ ಅಗಲಿಕೆಯಿಂದ ಕನ್ನಡ ನಾಡಿಗೆ, ಕನ್ನಡ ಸಾಹಿತ್ಯಕ್ಕೆ ಹಾಗೂ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ಸೂಚಿಸಿದ್ದಾರೆ.

ಸಾರಂಗಮಠ-ಗಚ್ಚಿನಮಠದ ಡಾ| ಪ್ರಭುಸಾರಂಗದೇವ ಶಿವಾಚಾರ್ಯರು, ಶಾಸಕ ಎಂ.ಸಿ. ಮನಗೂಳಿ, ಮಾಜಿ ಶಾಸಕ ರಮೇಶ ಭೂಸನೂರ, ಅಂಬಿಕಾತನಯದತ್ತ ವೇದಿಕೆ ಅಧ್ಯಕ್ಷ ಡಾ| ಬಿ.ಆರ್‌. ನಾಡಗೌಡ, ಹಿರಿಯ ಸಂಶೋಧಕ ಡಾ| ಎಂ.ಎಂ. ಪಡಶೆಟ್ಟಿ, ಹಿರಿಯ ಸಾಹಿತಿ ಡಾ| ಚನ್ನಪ್ಪ ಕಟ್ಟಿ, ಕಜಾಪ ಜಿಲ್ಲಾಧ್ಯಕ್ಷ ಬಿ.ಎನ್‌. ಪಾಟೀಲ ಇಬ್ರಾಹಿಂಪುರ, ಮಕ್ಕಳ ಸಾಹಿತಿ ಹ.ಮ. ಪೂಜಾರ, ಪ್ರಸ್‌ ಕ್ಲಬ್‌ ಅಧ್ಯಕ್ಷ ಶಾಂತು ಹಿರೇಮಠ, ಮಕ್ಕಳ ಸಾಹಿತಿ ರಾ.ಸಿ. ವಾಡೇದ, ಕಸಾಪ ಜಿಲ್ಲಾ ಪ್ರಧಾನ ಸಂಚಾಲಕ ಚಂದ್ರಶೇಖರ ದೇವರೆಡ್ಡಿ, ಸಾಹಿತಿ ವಿ.ವಿ. ಗಣಾಚಾರಿ, ಕಸಾಪ ತಾಲೂಕಾಧ್ಯಕ್ಷ ಎಸ್‌.ಬಿ. ಚೌಧರಿ, ಕಾನಿಪ ಅಧ್ಯಕ್ಷ ಆನಂದ ಶಾಬಾದಿ, ಪ್ರಭುಲಿಂಗ ಲೋಣಿ, ಪತ್ರಕರ್ತರಾದ ವೀರೇಶ ಮಠಪತಿ, ಇಂದುಶೇಖರ ಮಣೂರ, ಡಾ| ರಮೇಶ ಕತ್ತಿ, ರಮೇಶ ಪೂಜಾರ, ಸಿದ್ದಲಿಂಗ ಕಿಣಗಿ, ನಿಂಗರಾಜ ಅತನೂರ, ಅವಧೂತ ಬಂಡಗಾರ, ಚಂದ್ರಕಾಂತ ಮಾವೂರ, ಸಾಹಿತಿ ಈರನಗೌಡ ಪಾಟೀಲ ಹಂದಿಗನೂರ, ರಾಗರಂಜನಿಯ ಡಾ| ಪ್ರಕಾಶ, ಸ್ಥಳೀಯ ನೆಲೆ ಪ್ರಕಾಶನ ಹಾಗೂ ವಿದ್ಯಾಚೇತನ ಪ್ರಕಾಶನದ ಬಳಗ ಸಂತಾಪ ಸೂಚಿಸಿದ್ದಾರೆ.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.