ಜೆಡಿಎಸ್‌ ಪ್ರಣಾಳಿಕೆ ಬಿಡುಗಡೆ

ಅಭಿವೃದ್ಧಿ ಪರ 36 ಕಾಮಗಾರಿಗಳಿಗೆ 165 ಕೋಟಿ ರೂ. ಮಂಜೂರು

Team Udayavani, Feb 2, 2020, 3:59 PM IST

2-Febraury-23

ಸಿಂದಗಿ: ನನ್ನ ಅಧಿಕಾರದ ಅವಧಿಯಲ್ಲಿ ಸಿಂದಗಿ ಪಟ್ಟಣದ ಅಭಿವೃದ್ಧಿಗಾಗಿ ಮಾಡಿದ ಕೆಲಸ ನೋಡಿ ಪಟ್ಟಣದ ಮತದಾರರು ಪಕ್ಷದ ಎಲ್ಲ ಅಭ್ಯರ್ಥಿಗಳಿಗೆ ಮತ ನೀಡುವ ಮೂಲಕ ಗೆಲ್ಲಿಸುತ್ತಾರೆ ಎಂದು ಭರವಸೆ ಇಟ್ಟಿದ್ದೇನೆ ಎಂದು ಶಾಸಕ ಎಂ.ಸಿ. ಮನಗೂಳಿ ಹೇಳಿದರು.

ಶನಿವಾರ ಪಕ್ಷದ ಕಾರ್ಯಾಲಯದಲ್ಲಿ ಪಟ್ಟಣದ ಅಭಿವೃದ್ಧಿಗೆ ಇರುವ ಪ್ರಮುಖ 13 ಕಾಮಗಾರಿಗಳು ಇರುವ ಸಿಂದಗಿ ಪುರಸಭೆ ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುರಸಭೆ ಚುನಾವಣೆಯಲ್ಲಿ ಎಲ್ಲ 23 ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ನಿಲ್ಲಿಸಿದ್ದು ಎಲ್ಲ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುತ್ತಿದ್ದೆ. ಎಲ್ಲ ಅಭ್ಯರ್ಥಿಗಳ ಗೆಲುವು ಖಚಿತ. ಜೆಡಿಎಸ್‌ ಪಕ್ಷದ ಪುರಸಭೆ ಆಡಳಿತದ ಚುಕ್ಕಾಣಿ ಹಿಡಿಯುವುದು ಖಚಿತ ಎಂದರು.

ಸಮ್ಮಿಶ್ರ ಸರಕಾರವಿದ್ದ ಸಂದರ್ಭದಲ್ಲಿ 20 ತಿಂಗಳ ಅವ ಧಿಯಲ್ಲಿ ಒಳಚರಂಡಿ ಯೋಜನೆ, ಬಳಗಾನೂರ ಕೆರೆಯಿಂದ ಸಿಂದಗಿವರೆಗೆ ಪೈಪ್‌ಲೈನ್‌ ಮಾಡಿಸುವ ಯೋಜನೆ, ಪಟ್ಟಣದಲ್ಲಿ ಮಿನಿ ವಿಧಾನಸೌಧ ಕಟ್ಟಡದ ಮಂಜೂರು, ರಸ್ತೆ ನಿರ್ಮಾಣ ಸೇರಿದಂತೆ 36 ಕಾಮಗಾರಿಗಳಿಗೆ ಒಟ್ಟು 165 ಕೋಟಿ ರೂ. ಮಂಜೂರು ಮಾಡಿಸಿದ್ದೇನೆ. ಕೆಲ ಕಾಮಗಾರಿಗಳು ಕೆಲಸ ಪ್ರಾರಂಭವಾಗಿದ್ದು, ಕೆಲವು ಟೆಂಡರ್‌ ಆಗಿದ್ದು, ಚುನಾವಣಾ ನೀತಿ ಸಂಹಿತೆ ಇರುವುದರಿಂದ ಚುನಾವಣೆ ನಂತರ ಕೆಲಸ ಪ್ರಾರಂಭವಾಗುತ್ತವೆ ಎಂದು ಹೇಳಿದರು.

1994ರಲ್ಲಿ ಸಚಿವನಿದ್ದ ಸಂದರ್ಭದಲ್ಲಿ ಪಟ್ಟಣದ ಜನತೆಗೆ ಕುಡಿಯುವ ಪೂರೈಸಲು ಪಟ್ಟಣದಲ್ಲಿ ಕೆರೆ ನಿರ್ಮಾಣ ಮಾಡಲಾಯಿತು. 8 ಕಿ.ಮೀ. ದೂರದಿಂದ ಪೈಪ್‌ಲೈನ್‌ ಮಾಡಿ ಕೆರೆಗೆ ನೀರು ತರಲಾಯಿತು. ಈಗ ನೀರಿನ ಅಭಾವವಿದೆ. ಈಗ 27.10 ಕೋಟಿ ರೂ. ವೆಚ್ಚದಲ್ಲಿ ಪೈಪ್‌ ಲೈನ್‌ ಮಾಡಿ ಬಳಗಾನೂರ ಕೆರೆಯಿಂದ ಸಿಂದಗಿಗೆ ನೀರು ತರಲಾಗುವುದು. ಸಿಂದಗಿಗೆ ಏಪ್ರಿಲ್‌-ಮೇ ತಿಂಗಳಲ್ಲಿ ನೀರು ಬರುತ್ತದೆ ಎಂದು ಹೇಳಿದರು.

ಪಟ್ಟಣದ ಜನತೆಗಾಗಿ 3 ಉದ್ಯಾನ ಮಾಡಲಾಗಿದೆ. ಇನ್ನೂ 2-3 ಉದ್ಯಾನ ಮಾಡಲಾಗುವುದು. ಪಟ್ಟಣದಲ್ಲಿ ಮಿನಿವಿಧಾನ ಸೌಧ ನಿರ್ಮಾಣಕ್ಕಾಗಿ 9.75 ಕೋಟಿ ರೂ. ಹಣ ಮಂಜೂರಾಗಿದೆ. ಈ ವಿಷಯ ಕುರಿತು ನ್ಯಾಯಾಲಯದಲ್ಲಿ ವ್ಯಾಜ್ಯವಿರುವದರಿಂದ ಕಾಮಗಾರಿ ಪ್ರಾರಂಭವಾಗಿಲ್ಲ. ಇನ್ನೆನು ಕೆಲ ದಿನಗಳಲ್ಲಿ ಪ್ರಕರಣ ಇತ್ಯರ್ಥವಾಗಿ ಮಿನಿ ವಿಧಾನಸೌಧ ನಿರ್ಮಾಣ ಮಾಡಲಾಗುವುದು. ಪಟ್ಟಣದಲ್ಲಿ ವಿದ್ಯುತ್‌, ಸಿಸಿ ರಸ್ತೆ, ಒಳಚರಂಡಿ, ಕುಡಿಯುವ ನೀರು ಪೂರೈಸಿ ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಶಿವಪ್ಪಗೌಡ ಬಿರಾದಾರ, ಸೋಮುಗೌಡ ಬಿರಾದಾರ, ಶಿರುಗೌಡ ಬಿರಾದಾರ, ಶರಣಪ್ಪಣ್ಣ ಕುರಡೆ, ಅಶೋಕ ಮನಗೂಳಿ, ಸಿದ್ದಣ್ಣ ಚೌಧರಿ ಕನ್ನೋಳ್ಳಿ, ನಿಂಗನಗೌಡ ಬಿರಾದಾರ, ಮಂಜು ಬಿಜಾಪುರ, ಶ್ರೀಕಾಂತ ಸೋಮಜಾಳ, ಸಲೀಮ ಜುಮನಾಳ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.