ದುಶ್ಚಟಗಳಿಂದ ದೂರವಿರಿ: ಪಿಎಸೈ ನಾಯಕ ಸಲಹೆ
Team Udayavani, Jun 4, 2022, 3:51 PM IST
ಕೊಲ್ಹಾರ: ಪೊಲೀಸ್ ಇಲಾಖೆಯ ಕರ್ತವ್ಯಕ್ಕೆ ಪೂರಕವಾಗಿ ಯುವಕರು ಸಮಾಜಮುಖೀ ಕೆಲಸಕ್ಕೆ ಸಹಕರಿಸಬೇಕು. ದುಶ್ಚಟಕ್ಕೆ ದಾಸರಾಗದೆ ಸದೃಢ ಆರೋಗ್ಯ ಕಾಪಾಡಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಬೇಕು ಎಂದು ಪಿಎಸೈ ಪ್ರೀತಮ್ ನಾಯಕ ಹೇಳಿದರು.
ಪೊಲೀಸ್ ಠಾಣೆಯಲ್ಲಿ ಯುವಕರ ಸಭೆ ನಡೆಸಿ ಮಾತನಾಡಿದ ಅವರು, ತಮ್ಮ ಆಸುಪಾಸಿನ ವ್ಯಾಪ್ತಿಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿದ್ದರೆ ಪೊಲೀಸ್ ಇಲಾಖೆಯ ಗಮನಕ್ಕೆ ತರುವ ಮೂಲಕ ಇಲಾಖೆಯ ಕಾರ್ಯಕ್ಕೆ ಕೈಜೊಡಿಸಿ ಅಪರಾಧ ತಡೆಗಟ್ಟುವಲ್ಲಿ ಸಹಕಾರ ನೀಡಬೇಕು ಎಂದು ಕೋರಿದರು.
ಪತ್ರಕರ್ತ ಈರಯ್ಯ ಗಣಕುಮಾರ ಮಾತನಾಡಿ, ಯುವಕರು ಅನೇಕ ದುಶ್ಚಟಗಳಿಗೆ ಶರಣಾಗಿ ತಮ್ಮ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ಈ ದುಶ್ಚಟಗಳಿಗೆ ದಾಸರಾಗದೆ ಸಮಾಜಕ್ಕೆ ಪೂರಕವಾಗುವಂತೆ ಬದುಕಬೇಕು ಮನೆಯ ಹಿರಿಯರು ಕೂಡ ಯುವಕರ ಕಡೆ ಗಮನ ಕೊಡುತ್ತಾ ತಪ್ಪು ಮಾಡಿದಾಗ ತಿದ್ದುತ್ತಾ ಇರಬೇಕು ಎಂದು ಹೇಳಿದರು.
ಎಎಸ್ಐ ವಿ.ಎಚ್. ಹತ್ತಳ್ಳಿ ಹಾಗೂ ಇಮ್ರಾನ್ ಪೆಂಡಾರಿ ಯುವಕರಿಗೆ ಕಾನೂನಿನ ಅರಿವು ಹಾಗೂ ದುಶ್ಚಟಗಳಿಂದ ದೂರವಿರುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಕೊಲ್ಹಾರ ಪಟ್ಟಣದ ಹಾಗೂ ಕೊಲ್ಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಅನೇಕ ಗ್ರಾಮಗಳ ಯುವಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು
Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ
Basangouda Patil Yatnal: ಫಸ್ಟ್ ಲೈನ್ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ
Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.