ಸೂಫಿ-ಶರಣರ ಸಂದೇಶಗಳು ಸೌಹಾರ್ದತೆಗೆ ಸಾಕ್ಷಿ


Team Udayavani, Dec 22, 2021, 5:57 PM IST

31saranas

ವಿಜಯಪುರ: ಸೂಫಿ ಸಂತರ ಭಾವೈಕ್ಯದ ನೆಲೆಯಾಗಿರುವ ಭಾರತದ ಶರಣರ ಬಸವಾದಿ ಶರಣರ ಜನ್ಮಭೂಮಿಯೂ ಹೌದು. ಈ ದೇಶದಲ್ಲಿ ಶಾಂತಿ ಸೌಹಾರ್ದ ಸ್ಥಾಪಿಸಲು ಸೂಫಿ ಸಂತರ- ಬಸವವಾದಿಗಳ ಶರಣರ ತತ್ವಗಳು ಮಹತ್ವದ ಪಾತ್ರ ವಹಿಸಿದೆ ಎಂದು ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ಪುನಾರಾಯ್ಕೆ ಆಗಿರುವ ಸುನೀಲಗೌಡ ಪಾಟೀಲ ಅಭಿಪ್ರಾಯಪಟ್ಟರು.

ನಗರದ ಹಜರತ್‌ ಹಾಶೀಂಪೀರ್‌ ಸೂಫಿ ದರ್ಗಾದಲ್ಲಿ ಮಹಿಬೂಬ ಏ ಸುಭಹಾನಿ ಹಜರತ ಸೈಯದನಾ ಗೌಸ ಪಾಕ ಇವರ ಸ್ಮರಣಾರ್ಥ (ಗ್ಯಾರವಿ ಶರೀಫ್‌) ದೊಡ್ಡ ಪ್ರಮಾಣದಲ್ಲಿ ಅನ್ನ ದಾಸೋಹ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಭಾರತ ದೇಶ ಉನ್ನತಿ ಸಾಧಿಸಲು ಸೂಫಿ ಸಂತರ ಶರಣರ ಆಶೀರ್ವಾದ ಅಗತ್ಯ ಎಂದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಸ್ವಾತಂತ್ರ್ಯ ಸುವರ್ಣ ಸಂಭ್ರಮ ಪ್ರಶಸ್ತಿ ಪಡೆದ ಅನುಗ್ರಹ ಕಣ್ಣಿನ ಆಸ್ಪತ್ರೆ ಮುಖ್ಯಸ್ಥ ಡಾ| ಪ್ರಭುಗೌಡ ಪಾಟೀಲ ಮಾತನಾಡಿ, ಪೀರ ಸೈಯದ ಮೊಹಮ್ಮದ ತನವೀರ ಹಾಶ್ಮಿ ಅವರು ಜಾತಿ-ಬೇಧವಿಲ್ಲದೇ ಮಾನವ ಕಲ್ಯಾಣಕ್ಕಾಗಿ ಸೇವೆ ಮಾಡುತ್ತಿದ್ದಾರೆ. ಇವರ ನೇತೃತ್ವದಲ್ಲಿ ನಡೆಸಿದ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನೆರವೇರಿಸುವಲ್ಲಿ ಅತ್ಯಂತ ಹೆಚ್ಚಿನ ಕಾಳಜಿ ನೀಡಿದ್ದನ್ನು ಸ್ಮರಿಸಿದರು.

ಆಶೀರ್ವಚನ ನೀಡಿದ ಪೀರ ಸೈಯದ ಮೊಹಮ್ಮದ ತನವೀರ ಹಾಶ್ಮಿ, 9 ಶತಮಾನಗಳ ಹಿಂದೆ ಮಹಿಬೂಬ ಏ ಸುಭಹಾನಿ ಹಜರತ ಗೌಸ ಪಾಕ (ಮಹಾನ ಸೂಫಿ) ಇವರು ತಮ್ಮ ಖಾನಕಾ (ಆಶ್ರಮ)ದಲ್ಲಿ ಹಸಿದವರಿಗೆ ಊಟದ ವ್ಯವಸ್ಥೆ ಮಾಡುತ್ತಿದ್ದರು. ಗ್ಯಾರವಿ ಶರೀಫ್‌ ಹೆಸರಿನ ಈ ಅನ್ನದಾಸೋಹ ಪರಂಪರೆಯನ್ನು ನಾವು ಕೂಡ ಮುಂದುವರಿಸಿಕೊಂಡು ಹೋಗುತ್ತಿದ್ದೇವೆ ಎಂದರು.

ಎಲ್ಲ ಸೂಫಿ ಸಂತರು ತಮ್ಮ ತಮ್ಮ ಆಶ್ರಮಗಳಲ್ಲಿ ಜಾತೀಯತೆ ಮಾಡದೇ, ಧರ್ಮ ಸಮನ್ವಯದಿಂದ ನಡೆದುಕೊಂಡಿದ್ದಾರೆ. ಹಸಿದವರಿಗೆ ಅನ್ನ ದಾಸೋಹ ಮಾಡುವ ಮಹೋನ್ನತ ಪರಂಪರೆಯನ್ನು ಹಾಕಿಕೊಟ್ಟಿದ್ದಾರೆ. ಹಸಿವು ಹಾಗೂ ಅನ್ನಕ್ಕೆ ಯಾವ ಧರ್ಮ-ಜಾತಿಯ ಹಂಗಿಲ್ಲ ಎಂಬುದನ್ನು ಸಮಾಜಕ್ಕೆ ಸರ್ವ ಕಾಲಕ್ಕೂ ಮನವರಿಕೆ ಮಾಡಿಕೊಡುತ್ತಲೇ ಬಂದಿದ್ದಾರೆ ಎಂದು ಬಣ್ಣಿಸಿದರು.

ನಮ್ಮ ಪ್ರವಾದಿ ಹಜರತ ಸೈಯಿದನಾ ಮೊಹಮ್ಮದ ಸಲ್ಲಲಾಹು ಅಲೈ ಹಿ ವ ಸಲ್ಲಮ್‌ ರವರ ದಿವ್ಯ ವಾಣಿಯ ( ಹದೀಸ ಶರೀಫ್‌) ಪ್ರಕಾರ ಪುಣ್ಯದ ಕೆಲಸಗಳಲ್ಲಿ ಅತ್ಯಂತ ಶ್ರೇಷ್ಠ ಮತ್ತು ಪುಣ್ಯದ ಕೆಲಸ ಹಸಿದವನಿಗೆ ಅನ್ನ ಕೊಡುವದು. ಸೂಫಿ ಸಂದೇಶದಲ್ಲಿ ಮೊದಲು ನೀನು ಮಾನವನಾಗು. ನಂತರ ನೀನು ಹಿಂದೂ, ಮುಸ್ಲಿಂ, ಸಿಖ್‌, ಕ್ರೈಸ್ತ ಇತ್ಯಾದಿಯಾಗು ಎಂದು ಸಂದೇಶ ನೀಡಿದ್ದಾರೆ ಎಂದರು.

ದರ್ಗಾದ ಪೀಠಾಧಿಪತಿಗಳು, ಧಾರ್ಮಿಕ ವಿದ್ವಾಂಸರು, ರಾಜಕೀಯ ಮುಖಂಡರು, ಸಾಮಾಜಿಕ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

simha roopini kannada movie

Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್‌ ರಾಜ್‌ ನಿರ್ದೇಶನ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.