ಶಿಕ್ಷಕರ ಸಮಸ್ಯೆ ಅರಿವಿದೆ: ಚಂದ್ರಶೇಖರ


Team Udayavani, May 18, 2022, 5:41 PM IST

21teachers

ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳು ಹತ್ತು ಹಲವಾರಿದ್ದು, ಪರಿಹಾರ ಕ್ರಮಗಳು ಮಾತ್ರ ಸಾಧ್ಯವಾಗಿಲ್ಲ. ಓರ್ವ ಶಿಕ್ಷಕನಾಗಿ ಶಿಕ್ಷಕರ ಸಮಸ್ಯೆಗಳ ನೈಜ ಅರಿವು ಇರುವ ನಾನು ಸದನದಲ್ಲಿ ಶಿಕ್ಷಕರ ನೋವಿಗೆ ಧ್ವನಿಯಾಗುತ್ತದೆ. ಆ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವುದೇ ನನ್ನ ಆದ್ಯತೆ ಎಂದು ವಾಯುವ್ಯ ಶಿಕ್ಷಕರ ಮೇಲ್ಮನೆ ಕ್ಷೇತ್ರದ ಜೆಡಿಎಸ್‌ ಘೋಷಿತ ಅಭ್ಯರ್ಥಿ ಚಂದ್ರಶೇಖರ ಲೋಣಿ ಭರವಸೆ ನೀಡಿದರು.

ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದಿಂದ ಈಗಾಗಲೇ ನನಗೆ ಅಭೂತಪೂರ್ವ ಬೆಂಬಲ ದೊರೆತಿದ್ದು, ನಾನು ಅವರ ಬೆಂಬಲಿತ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದೇನೆ ಎಂದರು.

ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ನಿವಾರಣೆಗೆ ನನ್ನ ಪ್ರಣಾಳಿಕೆಯಲ್ಲಿ ಪ್ರಾಮುಖ್ಯತೆ ನೀಡಿದ್ದೇನೆ. ಮತದಾನ ಅರ್ಹತೆ ಇರುವ ಶಿಕ್ಷಕ ಪ್ರಭುಗಳು ನನಗೆ ಹೆಚ್ಚಿನ ಮತಗಳ ಆಶೀರ್ವಾದ ಮಾಡಿ ಗುರು ಸ್ವರೂಪಿ ಶಿಕ್ಷಕರ ಸೇವೆ ಮಾಡುವ ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ವಿಜಯಪುರ, ಬಾಗಲಕೋಟೆ ಹಾಗೂ ಬೆಳಗಾವಿ ಜಿಲ್ಲೆಯ ಶಿಕ್ಷಕ ಬಂಧುಗಳು ಎದುರಿಸುತ್ತಿರುವ ನೋವುಗಳನ್ನು ಸ್ವಯಂ ಅನುಭವಿಸಿರುವ ನಾನು, ಹತ್ತಿರದಿಂದ ಇತರೆ ಶಿಕ್ಷಕರ ನೋವಿನ ಅರಿವೂ ಇದೆ. ಹೀಗಾಗಿ ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ಸಂಕಲ್ಪ ಮಾಡಿರುವ ನನಗೆ ನನ್ನ ಬದ್ಧತೆ ತೋರಲು ಶಿಕ್ಷಕರು ನನ್ನನ್ನು ಬೆಂಬಲಿಸುವ ವಿಶ್ವಾಸವಿದೆ ಎಂದರು.

ಬೆಳಗಾವಿ ಭಾಗದಲ್ಲಿ ಗಡಿ ಪ್ರದೇಶಗಳಲ್ಲಿ ಕನ್ನಡ ಶಾಲೆಗಳು ಅನೇಕ ತೊಂದರೆ ಎದುರಿಸುತ್ತಿವೆ. ಇವುಗಳನ್ನು ಸಶಕ್ತಗೊಳಿಸಲು ಸರ್ಕಾರ ವಿಶೇಷ ಅನುದಾನ ನೀಡಬೇಕಿದೆ. ಈ ಕುರಿತು ಸದನದಲ್ಲಿ ಧ್ವನಿ ಎತ್ತುವ ಮೂಲಕ ಗಡಿ ಭಾಗದ ಕನ್ನಡ ಶಾಲೆಗಳ ಸಬಲೀಕರಣಕ್ಕೆ ಪಣ ತೊಟ್ಟಿದ್ದೇನೆ ಎಂದರು.

ಇದಲ್ಲದೇ 2006ರ ನಂತರ ನೇವಕವಾದ ಶಿಕ್ಷಕ ವೃತ್ತಿ ಬಾಂಧವರಿಗೆ ಪಿಂಚಣಿ ವ್ಯವಸ್ಥೆ ಜಾರಿಗೆ ಧ್ವನಿಯಾಗುತ್ತೇನೆ. 1994-95 ನಂತರ ಆರಂಭವಾದ ಎಲ್ಲ ಖಾಸಗಿ ಶಾಲಾ-ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸುವುದ ನನ್ನ ಆದ್ಯತೆಯಲ್ಲಿ ಒಂದು. ರಾಜ್ಯದ ನಿರ್ಲಕ್ಷಿತ ಶಿಕ್ಷಣ ವ್ಯವಸ್ಥಯಾಗಿರುವ ಐಟಿಐ ಕಾಲೇಜು ಸಿಬ್ಬಂದಿಗಳಿಗೂ ಅನುದಾನ ವ್ಯಾಪ್ತಿಗೆ ತರಬೇಕಿದೆ. ಅಲ್ಲಿನ ಶಿಕ್ಷಕರ ಸಮಸ್ಯೆಗೆ ಗಮನ ಹರಿಸಬೇಕಿದೆ. ಹೀಗಾಗಿ ನನ್ನ ಗೆಲುವಿಗೆ ಸಮಸ್ಯೆಗಳ ಅರಿವಿರುವ ಶಿಕ್ಷಕರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದರು.

ಸಹಜಾನಂದ ದಂಧರಗಿ ಮಾತನಾಡಿ, ರಾಜಕೀಯೇತರ ಸಂಘವಾಗಿರುವ ಮಾಧ್ಯಮಿಕ ಶಾಲಾ ನೌಕರರ ಸಂಘಕ್ಕೆ ಅಧ್ಯಕ್ಷರಾಗಿರುವ ಚಂದ್ರಶೇಖರ ಲೋಣಿ ಅವರಿಗೆ ನಮ್ಮ ಸಂಘಟನೆ ಸಂಪೂರ್ಣ ಬೆಂಬಲ ನೀಡಿದೆ. ಓರ್ವ ಶಿಕ್ಷಕರಾಗಿ ಶಿಕ್ಷಕರ ನೋವಿನ ಅರಿವು ಇರುವ ಕಾರಣ, ಅವರು ಸದನದಲ್ಲಿ ನಮ್ಮ ಭಾವನೆಯನ್ನು ಸ್ಪಷ್ಟವಾಗಿ ವ್ಯಕ್ತಪಡಿಸಲಿದ್ದಾರೆ. ಹೀಗಾಗಿ ಅವರ ಆಯ್ಕೆಯೂ ಖಚಿತವಾಗಲಿದೆ ಎಂದರು.

ಶಾಸಕ ದೇವಾನಂದ ಚವ್ಹಾಣ ಮಾತನಾಡಿ, ಶಿಕ್ಷಕರ ನೋವಿಗೆ ಕಾಳಜಿ ಹೊಂದಿರುವ ಪ್ರಗತಿಪರ ಚಿಂತನೆಯ ಶಿಕ್ಷಕ ಚಂದ್ರಶೇಖರ ಅವರಿಗೆ ಮೂರೂ ಜಿಲ್ಲೆಗಳ ಶಿಕ್ಷಕ ಮತದಾರರು ಪ್ರಥಮ ಆಧ್ಯತೆಯ ಮತ ನೀಡಿ ಗೆಲ್ಲಿಸುವ ವಿಶ್ವಾಸವಿದೆ ಎಂದರು. ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಎಸ್‌. ಪಾಟೀಲ ಮಾಡಗಿ, ರಾಜುಗೌಡ ಪಾಟೀಲ ಕುದರಿ ಸಾಲೋಡಗಿ, ಜೆಡಿಎಸ್‌ ಜಿಲಾಧ್ಯಕ್ಷೆ ಸ್ನೇಹಲತಾ ಶೆಟ್ಟಿ ಸೇರಿದಂತೆ ಇದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MB Patil ತುಚ್ಛ ಮಾತು ಯತ್ನಾಳ ಮನೆತನದ ಸಂಸ್ಕೃತಿ ಅಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.