ವಿವಿಧೆಡೆ ವೀರ ಸನ್ಯಾಸಿಯ ವಿಶಿಷ್ಟ ಜನ್ಮ ದಿನಾಚರಣೆ

ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಲಾಯಿತು.

Team Udayavani, Jan 13, 2021, 5:58 PM IST

ವಿವಿಧೆಡೆ ವೀರ ಸನ್ಯಾಸಿಯ ವಿಶಿಷ್ಟ ಜನ್ಮ ದಿನಾಚರಣೆ

ಮುದ್ದೇಬಿಹಾಳ: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ, ಚಿಂತನಾ
ಸಭೆ ಏರ್ಪಡಿಸುವ, ವಿವೇಕಾನಂದರಂತೆ ವೇಷ ಧರಿಸುವ ಹಾಗೂ ಮಕ್ಕಳಿಗೆ ಪುಸ್ತಕ, ಪೆನ್ನು ವಿತರಿಸುವ ಮೂಲಕ ಮಂಗಳವಾರ ವಿಶಿಷ್ಟವಾಗಿ
ಆಚರಿಸಲಾಯಿತು.

ಪಟ್ಟಣದ ಮಾರುತಿ ನಗರದಲ್ಲಿರುವ ಶೋಭಾತಾಯಿ ಶರಣಮ್ಮನವರ ಆಶ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಲಾಯಿತು. ಆಶ್ರಮದ ವತಿಯಿಂದ ಮಕ್ಕಳಿಗೆ ಪುಸ್ತಕ, ಪೆನ್ನು ವಿತರಿಸಲಾಯಿತು. ಪ್ರವಚನಕಾರ್ತಿ ಚೈತನ್ಯ ದಶವಂತ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯರಝರಿ ಗ್ರಾಪಂ ಸದಸ್ಯೆ ರಾಜೇಶ್ವರಿ ಬಿರಾದಾರ ಅವರನ್ನು ಗೌರವಿಸಲಾಯಿತು.

ಪುರಸಭೆ ಸದಸ್ಯೆ ಸಂಗಮ್ಮ ದೇವರಳ್ಳಿ, ಸರಸ್ವತಿ ಪೀರಾಪುರ, ಗೌರಮ್ಮ ಹುನಗುಂದ (ಬಲದಿನ್ನಿ), ನರಸಮ್ಮ ಗುಬಚಿ, ಲಲಿತಾ ಚವ್ಹಾಣ, ಅಕ್ಷತಾ
ಮಾನೆ, ರೇಣುಕಾ ಬಿರಾದಾರ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಮಾರುತಿನಗರ ಬಡಾವಣೆಯ ತಾಯಂದಿರು, ಮಕ್ಕಳು ಇದ್ದರು.

ಬಿಜೆಪಿ: ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ವಿವಿಧ ಮೋರ್ಚಾ ಆಶ್ರಯದಲ್ಲಿ ವಿವೇಕಾನಂದರ ಜನ್ಮದಿನ ಆಚರಿಸಲಾಯಿತು. ಜಿಲ್ಲಾ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಅಶೋಕ  ರಾಠೊಡ ನೇಬಗೇರಿ, ಮುದ್ದೇಬಿಹಾಳ ಯುವ ಮೋರ್ಚಾ ಅಧ್ಯಕ್ಷ ಪುನೀತ್‌ ಹಿಪ್ಪರಗಿ, ಮುದ್ದೇಬಿಹಾಳ ನಗರ ಮೋರ್ಚಾ ಪ್ರಧಾನ
ಕಾರ್ಯದರ್ಶಿ ಹನುಮಂತ ನಲವಡೆ, ಮುದ್ದೇಬಿಹಾಳ ಮಂಡಲ ಕಾರ್ಯದರ್ಶಿ ಮಂಜುನಾಥ ರತ್ನಾಕರ ಮತ್ತಿತರರು ಪಾಲ್ಗೊಂಡಿದ್ದರು.

ಎಂಜಿವಿಸಿ ಕಾಲೇಜ್‌: ಪಟ್ಟಣದ ಎಂಜಿವಿಸಿ ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಹಿನ್ನೆಲೆ ಯುವ ದಿನಾಚರಣೆ, ಉಪನ್ಯಾಸ, ಹೊಸ ವಿದ್ಯಾರ್ಥಿಗಳಿಗೆ ಸ್ವಾಗತಿಸುವ ಸಂಯುಕ್ತ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಕಾಲೇಜಿನ ಆಡಳಿತಾ ಧಿಕಾರಿ ಎ.ಬಿ. ಕುಲಕರ್ಣಿ ಉಪನ್ಯಾಸ ನೀಡಿದರು. ನ್ಯಾಕ್‌ ಕೋ ಆರ್ಡಿನೇಟರ್‌ ಡಾ|  ಬಿ.ಎ. ಗೂಳಿ, ಎಸ್‌.ವಿ. ಗುರುಮಠ, ಬಿ.ಎಸ್‌. ಕಟಗೇರಿ ಅತಿಥಿಗಳಾಗಿದ್ದರು. ಪ್ರಾಂಶುಪಾಲ ಎಸ್‌.ಎನ್‌. ಪೋಲೇಸಿ ಅಧ್ಯಕ್ಷತೆ ವಹಿಸಿದ್ದರು. ಡಾ| ಆರ್‌.ಎಚ್‌. ಸಜ್ಜನ ಸ್ವಾಗತಿಸಿದರು. ವಿದ್ಯಾರ್ಥಿ ಸೋಮು ಬಂಗಾರಗುಂಡ ನಿರೂಪಿಸಿದರು. ವಿದ್ಯಾರ್ಥಿ ಪಾವಡೆಪ್ಪ ಮಾದರ ವಂದಿಸಿದರು.

ಇದೇ ವೇಳೆ ಬಿಎ ಪ್ರಥಮ ವರ್ಷದ ಇತಿಹಾಸ ವಿದ್ಯಾರ್ಥಿಗಳನ್ನು ಸ್ವಾಗತಿಸಿಕೊಳ್ಳಲಾಯಿತು.  ಪಟ್ಟಣದ ಜ್ಞಾನಭಾರತಿ ಪ್ರೌಢಶಾಲೆ ಮುಖ್ಯಾಧ್ಯಾಪಕ ರಾಮಚಂದ್ರ ಹೆಗಡೆ ಅವರ ಪುತ್ರ ಶ್ರೀಧರಾಭಿರಾಮ ಸ್ವಾಮಿ ವಿವೇಕಾನಂದರ ಛದ್ಮವೇಷಧರಿಸಿ ಗಮನ ಸೆಳೆದ. ರಾಮಚಂದ್ರ ಅವರು ಶ್ರೀಧರಾಭಿರಾಮನಿಗೆ ವಿವೇಕಾನಂದರ ಪುಸ್ತಕಗಳನ್ನು ನೀಡಿದರು.

ಕಾಳಗಿ: ಮುದ್ದೇಬಿಹಾಳ ತಾಲೂಕಿನ ಕಾಳಗಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಎದುರು ಇರುವ ವೃತ್ತದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನಡೆಸಿ ವಿವೇಕಾನಂದರ ಜನ್ಮದಿನ ಆಚರಿಸಲಾಯಿತು. ಗ್ರಾಮಸ್ಥರಿಗೆ ಫಳಾರ ಹಂಚಲಾಯಿತು. ಬಿಜೆಪಿ ಧುರೀಣ ಸುಭಾಷ್‌ ಕಾಳಗಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.